ಬ್ರೇಕಿಂಗ್ ನ್ಯೂಸ್
23-02-26 07:35 pm HK News Desk ಕ್ರೈಂ
ತುಮಕೂರು, ಫೆ.23 : ಗೃಹ ಸಚಿವರ ತವರು ಜಿಲ್ಲೆಯಾದ ತುಮಕೂರಿನಲ್ಲಿ ದರೋಡೆಕೋರರನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಘಟನೆ ನಡೆದಿದೆ. ಶಿರಾ ತಾಲೂಕಿನ ಕಳ್ಳಂಬೆಳ್ಳ ಸಮೀಪದ ಬೆಂಚ್ ಗೇಟ್ ಬಳಿ ಇರುವ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ಖತರ್ನಾಕ್ ಗ್ಯಾಂಗ್ ಖಾರದ ಪುಡಿ ಎರಚಿ ಬರೋಬ್ಬರಿ 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾಗಿತ್ತು. ಆದರೆ ದರೋಡೆ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ರಾಜಸ್ಥಾನ ಮೂಲದ ಅರವಿಂದ್, ದುಂಗರ್ ಸಿಂಗ್, ಮಹೇಂದ್ರ ಸಿಂಗ್ ಮತ್ತು ಮಧು ಸಿಂಗ್ ಬಂಧಿತ ಆರೋಪಿಗಳು. ಕಳೆದ 3 ರಿಂದ 4 ದಿನಗಳಿಂದ ತುಮಕೂರಿನಲ್ಲಿ ವಾಸ್ತವ್ಯ ಹೂಡಿದ್ದ ಈ ಗ್ಯಾಂಗ್, ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಜ್ಯುವೆಲರಿ ಅಂಗಡಿಗಳನ್ನು ಟಾರ್ಗೆಟ್ ಮಾಡಿಕೊಂಡಿತ್ತು. ಮೊದಲೇ ಯೋಜನೆಯಂತೆ ಬೊಲೆರೋ ಕಾರಿನಲ್ಲಿ ಬಂದ ಆರೋಪಿಗಳು ಹಾಡಹಗಲೇ ಅಂಗಡಿಗೆ ನುಗ್ಗಿ ಖಾರದ ಪುಡಿ ಎರಚಿ, ಬಳಿಕ ಶಟರ್ ಮುಚ್ಚಿ ದರೋಡೆ ನಡೆಸಿದ್ದಾರೆ. ಅಂಗಡಿಯಲ್ಲಿ ಇದ್ದ 100 ಗ್ರಾಂ ಚಿನ್ನ ಹಾಗೂ ಸುಮಾರು 1.5 ಕೆಜಿ ಬೆಳ್ಳಿ ಸೇರಿದಂತೆ ಒಟ್ಟು 26 ಲಕ್ಷ ರೂಪಾಯಿ ಮೌಲ್ಯದ ಆಭರಣಗಳನ್ನು ಕದ್ದೊಯ್ದಿದ್ದಾರೆ. ಈ ವೇಳೆ ಅಂಗಡಿ ಮಾಲೀಕ ದಿನೇಶ್ ಮತ್ತು ಅವರ ಅಜ್ಜಿ ಮೇಲೆ ಹಲ್ಲೆ ನಡೆಸಿರುವುದಾಗಿ ತಿಳಿದುಬಂದಿದೆ.


ಘಟನೆ ಕುರಿತು ದೂರು ದಾಖಲಾಗುತ್ತಿದ್ದಂತೆಯೇ ಪೊಲೀಸರು ಅಲರ್ಟ್ ಆಗಿದ್ದಾರೆ. ಬೊಲೆರೋ ವಾಹನದ ಮಾಹಿತಿ ಆಧರಿಸಿ ಶಿರಾ ಡಿವೈಎಸ್ಪಿ ಶೇಖರ್ ನೇತೃತ್ವದಲ್ಲಿ ವಿಶೇಷ ಕಾರ್ಯಾಚರಣೆ ಆರಂಭಿಸಲಾಗಿತ್ತು. ಮೊದಲಿಗೆ ಟೋಲ್ ಗೇಟ್ ಬಳಿ ಕಾರು ಪತ್ತೆಯಾದ ಬಳಿಕ ಆರೋಪಿಗಳ ವಾಹನವನ್ನು ಪೊಲೀಸರು ಚೇಸ್ ಮಾಡಿದ್ದಾರೆ. ಅಂತಿಮವಾಗಿ ಹುಯಿಲು ದೊರೆ ಅರಣ್ಯ ಪ್ರದೇಶದಲ್ಲಿ ಆರೋಪಿಗಳನ್ನು ಬಂಧಿಸಿದ್ದು, ಕದ್ದೊಯ್ದಿದ್ದ ಸಂಪೂರ್ಣ ಚಿನ್ನಾಭರಣವನ್ನು ವಶಪಡಿಸಲಾಗಿದೆ. ಪ್ರಕರಣವನ್ನು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದು, ಮುಂದಿನ ತನಿಖೆ ಮುಂದುವರಿದಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm