ಬ್ರೇಕಿಂಗ್ ನ್ಯೂಸ್
23-02-26 09:15 pm HK News Desk ಕ್ರೈಂ
ನವದೆಹಲಿ, ಫೆ.23: ಹರಿಯಾಣದ ಗುರುಗ್ರಾಮ್ ನಗರದಲ್ಲಿ ಲಿವ್ ಇನ್ ಸಂಬಂಧದ ಹೆಸರಿನಲ್ಲಿ ಯುವತಿಯ ಮೇಲೆ ಪ್ರಿಯಕರನಿಂದಲೇ ಅಮಾನುಷ ಹಲ್ಲೆ ಕೃತ್ಯ ನಡೆದಿದ್ದು ಆಘಾತ ಮೂಡಿಸಿದೆ. ತ್ರಿಪುರಾ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ತನ್ನ ಸಂಗಾತಿಯಿಂದಲೇ ಗಂಭೀರ ಹಲ್ಲೆಗೀಡಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಸೆಕ್ಟರ್ 69 ರ ಪಿಜಿಯಲ್ಲಿ ವಾಸವಾಗಿದ್ದ ಸಂತ್ರಸ್ತೆ ಬಯೋಟೆಕ್ನಾಲಜಿ ಅಧ್ಯಯನ ಮಾಡುತ್ತಿದ್ದಳು. ಕಳೆದ ಸೆಪ್ಟೆಂಬರ್ನಲ್ಲಿ ಮೊಬೈಲ್ ಆ್ಯಪ್ ಮೂಲಕ ದೆಹಲಿಯ ನರೇಲಾ ಮೂಲದ ಶಿವಂ ಎಂಬಾತನ ಪರಿಚಯವಾಗಿತ್ತು. ಮದುವೆಯ ಭರವಸೆ ನೀಡಿದ ಶಿವಂ, ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಬಳಿಕ ಗುರುಗ್ರಾಮದ ಫ್ಲಾಟ್ನಲ್ಲಿ ಲಿವ್ ಇನ್ ಸಂಬಂಧ ಆರಂಭಿಸಿದ್ದ.
ಇತ್ತೀಚೆಗೆ ಇಬ್ಬರ ನಡುವೆ ಉಂಟಾದ ವೈಯಕ್ತಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆ, ಶಿವಂ ಯುವತಿಯ ಮೇಲೆ ಸತತ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದನೆಂಬ ಆರೋಪ ಕೇಳಿಬಂದಿದೆ. ಫೆಬ್ರವರಿ 16 ರಂದು ಹಿಂಸೆ ಮಿತಿಮೀರಿದ್ದು, ಯುವತಿಯ ತಲೆಯನ್ನು ಗೋಡೆಗೆ ಹೊಡೆದು, ಸ್ಟೀಲ್ ಬಾಟಲಿ ಹಾಗೂ ಮಣ್ಣಿನ ಮಡಕೆಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಯುವತಿಯ ಖಾಸಗಿ ಅಂಗಗಳಿಗೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಯುವತಿಯ ಕಾಲುಗಳಿಗೆ ಚಾಕುವಿನಿಂದ ಇರಿದು, ಮುಂದೆ ನಡೆಯಲು ಅಥವಾ ತಾಯಿಯಾಗಲು ಸಾಧ್ಯವಾಗದಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ತನ್ನ ಅಮಾನುಷ ಕೃತ್ಯದ ದೃಶ್ಯಗಳನ್ನು ಆರೋಪಿ ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿ ಯುವತಿಗೆ ಹಿಂಸೆ ನೀಡುತ್ತಿದ್ದ.
ಆತನ ಕಾಟ ತಾಳಲಾರದೆ ಯುವತಿ ಫೆಬ್ರವರಿ 18 ರಂದು ಆರೋಪಿಯ ಫೋನ್ ಬಳಸಿ ತಾಯಿಗೆ ಸ್ಥಳೀಯ ಭಾಷೆಯಲ್ಲಿ ಮಾಹಿತಿ ನೀಡಿದ್ದಾಳೆ. ವಿಷಯದ ಗಂಭೀರತೆ ಅರಿತ ತಾಯಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿರುವ ಗುರುಗ್ರಾಮ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಘಟನೆ ಮಹಿಳೆಯರ ಭದ್ರತೆ ಹಾಗೂ ಲಿವ್ ಇನ್ ಸಂಬಂಧಗಳ ಕುರಿತು ಕಳವಳ ಹುಟ್ಟುಹಾಕಿದೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am