ಬ್ರೇಕಿಂಗ್ ನ್ಯೂಸ್
23-02-26 09:15 pm HK News Desk ಕ್ರೈಂ
ನವದೆಹಲಿ, ಫೆ.23: ಹರಿಯಾಣದ ಗುರುಗ್ರಾಮ್ ನಗರದಲ್ಲಿ ಲಿವ್ ಇನ್ ಸಂಬಂಧದ ಹೆಸರಿನಲ್ಲಿ ಯುವತಿಯ ಮೇಲೆ ಪ್ರಿಯಕರನಿಂದಲೇ ಅಮಾನುಷ ಹಲ್ಲೆ ಕೃತ್ಯ ನಡೆದಿದ್ದು ಆಘಾತ ಮೂಡಿಸಿದೆ. ತ್ರಿಪುರಾ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ತನ್ನ ಸಂಗಾತಿಯಿಂದಲೇ ಗಂಭೀರ ಹಲ್ಲೆಗೀಡಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಸೆಕ್ಟರ್ 69 ರ ಪಿಜಿಯಲ್ಲಿ ವಾಸವಾಗಿದ್ದ ಸಂತ್ರಸ್ತೆ ಬಯೋಟೆಕ್ನಾಲಜಿ ಅಧ್ಯಯನ ಮಾಡುತ್ತಿದ್ದಳು. ಕಳೆದ ಸೆಪ್ಟೆಂಬರ್ನಲ್ಲಿ ಮೊಬೈಲ್ ಆ್ಯಪ್ ಮೂಲಕ ದೆಹಲಿಯ ನರೇಲಾ ಮೂಲದ ಶಿವಂ ಎಂಬಾತನ ಪರಿಚಯವಾಗಿತ್ತು. ಮದುವೆಯ ಭರವಸೆ ನೀಡಿದ ಶಿವಂ, ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಬಳಿಕ ಗುರುಗ್ರಾಮದ ಫ್ಲಾಟ್ನಲ್ಲಿ ಲಿವ್ ಇನ್ ಸಂಬಂಧ ಆರಂಭಿಸಿದ್ದ.
ಇತ್ತೀಚೆಗೆ ಇಬ್ಬರ ನಡುವೆ ಉಂಟಾದ ವೈಯಕ್ತಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆ, ಶಿವಂ ಯುವತಿಯ ಮೇಲೆ ಸತತ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದನೆಂಬ ಆರೋಪ ಕೇಳಿಬಂದಿದೆ. ಫೆಬ್ರವರಿ 16 ರಂದು ಹಿಂಸೆ ಮಿತಿಮೀರಿದ್ದು, ಯುವತಿಯ ತಲೆಯನ್ನು ಗೋಡೆಗೆ ಹೊಡೆದು, ಸ್ಟೀಲ್ ಬಾಟಲಿ ಹಾಗೂ ಮಣ್ಣಿನ ಮಡಕೆಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಯುವತಿಯ ಖಾಸಗಿ ಅಂಗಗಳಿಗೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಯುವತಿಯ ಕಾಲುಗಳಿಗೆ ಚಾಕುವಿನಿಂದ ಇರಿದು, ಮುಂದೆ ನಡೆಯಲು ಅಥವಾ ತಾಯಿಯಾಗಲು ಸಾಧ್ಯವಾಗದಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ತನ್ನ ಅಮಾನುಷ ಕೃತ್ಯದ ದೃಶ್ಯಗಳನ್ನು ಆರೋಪಿ ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿ ಯುವತಿಗೆ ಹಿಂಸೆ ನೀಡುತ್ತಿದ್ದ.
ಆತನ ಕಾಟ ತಾಳಲಾರದೆ ಯುವತಿ ಫೆಬ್ರವರಿ 18 ರಂದು ಆರೋಪಿಯ ಫೋನ್ ಬಳಸಿ ತಾಯಿಗೆ ಸ್ಥಳೀಯ ಭಾಷೆಯಲ್ಲಿ ಮಾಹಿತಿ ನೀಡಿದ್ದಾಳೆ. ವಿಷಯದ ಗಂಭೀರತೆ ಅರಿತ ತಾಯಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿರುವ ಗುರುಗ್ರಾಮ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಘಟನೆ ಮಹಿಳೆಯರ ಭದ್ರತೆ ಹಾಗೂ ಲಿವ್ ಇನ್ ಸಂಬಂಧಗಳ ಕುರಿತು ಕಳವಳ ಹುಟ್ಟುಹಾಕಿದೆ.
23-02-26 05:15 pm
HK News Staffer
ಮಕ್ಕಳು ತಮ್ಮನ್ನು ನೋಡಿಕೊಳ್ತಿಲ್ಲ ಎಂಬ ನೋವು ; ಕೊಡಗ...
23-02-26 12:35 pm
ಜೂನ್ ಒಳಗಡೆ ಸ್ಥಳೀಯ ಸಂಸ್ಥೆ ಚುನಾವಣೆ ; ಸಿಎಂ ಸಿದ್ದ...
23-02-26 11:14 am
ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್...
21-02-26 11:27 am
ಹಾಸನಾಂಬೆ ಉತ್ಸವ ಟೆಂಡರ್ನಲ್ಲಿ ಭಾರೀ ಗೋಲ್ಮಾಲ್ ? ;...
20-02-26 09:20 pm
23-02-26 06:57 pm
HK News Desk
ಕಠ್ಮಂಡು ಬಳಿ ಭೀಕರ ಬಸ್ ದುರಂತ ; ತ್ರಿಶೂಲಿ ನದಿಗೆ ಬ...
23-02-26 04:45 pm
ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ; ತಮಿಳುನಾಡು,...
22-02-26 06:19 pm
ಲವ್ ಜಿಹಾದ್’ ತಡೆಗೆ ಗುಜರಾತ್ ನಲ್ಲಿ ವಿವಾಹ ನೋಂದಣಿ...
21-02-26 05:01 pm
ಸುಂಕ ನೀತಿ ಕಾನೂನುಬಾಹಿರ ಎಂದ ಅಮೆರಿಕ ಸುಪ್ರೀಂ ಕೋರ್...
21-02-26 03:07 pm
23-02-26 08:20 pm
Mangaluru Correspondent
Mangalore, Belthangady: ಆಂಬುಲೆನ್ಸ್ ನಲ್ಲೇ ಮಗುವ...
23-02-26 12:19 pm
Mangalore, Thokottu: ವಿದ್ಯುತ್ ಆಘಾತಕ್ಕೊಳಗಾಗಿ ಯ...
23-02-26 12:00 pm
ನನ್ನ ಅಕ್ಕಿ, ತರಕಾರಿ ನಾನೇ ಬೆಳೆಯುತ್ತೇನೆ, ನೀವೂ ಬೆ...
22-02-26 06:55 pm
ಸುಜಿತ್ ಮಾಡೂರು ಬಿಜೆಪಿಯಿಂದ ಉಚ್ಚಾಟನೆ ಪ್ರಕರಣ ; ಸಾ...
21-02-26 09:30 pm
23-02-26 10:44 pm
HK News Desk
ಯುವತಿ ಖಾಸಗಿ ಅಂಗಕ್ಕೆ ಸ್ಯಾನಿಟೈಸರ್ ಸುರಿದು ಬೆಂಕಿ...
23-02-26 09:15 pm
Tumkur Robbery: ತುಮಕೂರಿನಲ್ಲಿ ಖಾರದ ಪುಡಿ ಎರಚಿ ಜ...
23-02-26 07:35 pm
Udupi: ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಳ್...
23-02-26 04:30 pm
ನೆರೆಮನೆಯಿಂದ ಚಿನ್ನ ಕದ್ದ ಆರೋಪ ; ಅಡೂರು ಠಾಣೆಗೆ ಕರ...
23-02-26 11:36 am