ಬ್ರೇಕಿಂಗ್ ನ್ಯೂಸ್
23-02-26 09:15 pm HK News Desk ಕ್ರೈಂ
ನವದೆಹಲಿ, ಫೆ.23: ಹರಿಯಾಣದ ಗುರುಗ್ರಾಮ್ ನಗರದಲ್ಲಿ ಲಿವ್ ಇನ್ ಸಂಬಂಧದ ಹೆಸರಿನಲ್ಲಿ ಯುವತಿಯ ಮೇಲೆ ಪ್ರಿಯಕರನಿಂದಲೇ ಅಮಾನುಷ ಹಲ್ಲೆ ಕೃತ್ಯ ನಡೆದಿದ್ದು ಆಘಾತ ಮೂಡಿಸಿದೆ. ತ್ರಿಪುರಾ ಮೂಲದ 19 ವರ್ಷದ ಬಿಎಸ್ಸಿ ವಿದ್ಯಾರ್ಥಿನಿ ತನ್ನ ಸಂಗಾತಿಯಿಂದಲೇ ಗಂಭೀರ ಹಲ್ಲೆಗೀಡಾಗಿ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾಳೆ.
ಸೆಕ್ಟರ್ 69 ರ ಪಿಜಿಯಲ್ಲಿ ವಾಸವಾಗಿದ್ದ ಸಂತ್ರಸ್ತೆ ಬಯೋಟೆಕ್ನಾಲಜಿ ಅಧ್ಯಯನ ಮಾಡುತ್ತಿದ್ದಳು. ಕಳೆದ ಸೆಪ್ಟೆಂಬರ್ನಲ್ಲಿ ಮೊಬೈಲ್ ಆ್ಯಪ್ ಮೂಲಕ ದೆಹಲಿಯ ನರೇಲಾ ಮೂಲದ ಶಿವಂ ಎಂಬಾತನ ಪರಿಚಯವಾಗಿತ್ತು. ಮದುವೆಯ ಭರವಸೆ ನೀಡಿದ ಶಿವಂ, ಯುವತಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿ ಬಳಿಕ ಗುರುಗ್ರಾಮದ ಫ್ಲಾಟ್ನಲ್ಲಿ ಲಿವ್ ಇನ್ ಸಂಬಂಧ ಆರಂಭಿಸಿದ್ದ.
ಇತ್ತೀಚೆಗೆ ಇಬ್ಬರ ನಡುವೆ ಉಂಟಾದ ವೈಯಕ್ತಿಕ ಭಿನ್ನಾಭಿಪ್ರಾಯಗಳ ಹಿನ್ನೆಲೆ, ಶಿವಂ ಯುವತಿಯ ಮೇಲೆ ಸತತ ದೈಹಿಕ ಹಾಗೂ ಮಾನಸಿಕ ಹಿಂಸೆ ನೀಡುತ್ತಿದ್ದನೆಂಬ ಆರೋಪ ಕೇಳಿಬಂದಿದೆ. ಫೆಬ್ರವರಿ 16 ರಂದು ಹಿಂಸೆ ಮಿತಿಮೀರಿದ್ದು, ಯುವತಿಯ ತಲೆಯನ್ನು ಗೋಡೆಗೆ ಹೊಡೆದು, ಸ್ಟೀಲ್ ಬಾಟಲಿ ಹಾಗೂ ಮಣ್ಣಿನ ಮಡಕೆಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾನೆ. ಅಲ್ಲದೆ, ಯುವತಿಯ ಖಾಸಗಿ ಅಂಗಗಳಿಗೆ ಸ್ಯಾನಿಟೈಸರ್ ಸುರಿದು ಬೆಂಕಿ ಹಚ್ಚಲು ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪವೂ ಕೇಳಿಬಂದಿದೆ. ಯುವತಿಯ ಕಾಲುಗಳಿಗೆ ಚಾಕುವಿನಿಂದ ಇರಿದು, ಮುಂದೆ ನಡೆಯಲು ಅಥವಾ ತಾಯಿಯಾಗಲು ಸಾಧ್ಯವಾಗದಂತೆ ಮಾಡುತ್ತೇನೆ ಎಂದು ಬೆದರಿಕೆ ಹಾಕಿದ್ದಾನೆ. ತನ್ನ ಅಮಾನುಷ ಕೃತ್ಯದ ದೃಶ್ಯಗಳನ್ನು ಆರೋಪಿ ತನ್ನ ಮೊಬೈಲ್ನಲ್ಲಿ ಚಿತ್ರೀಕರಿಸಿ ಯುವತಿಗೆ ಹಿಂಸೆ ನೀಡುತ್ತಿದ್ದ.
ಆತನ ಕಾಟ ತಾಳಲಾರದೆ ಯುವತಿ ಫೆಬ್ರವರಿ 18 ರಂದು ಆರೋಪಿಯ ಫೋನ್ ಬಳಸಿ ತಾಯಿಗೆ ಸ್ಥಳೀಯ ಭಾಷೆಯಲ್ಲಿ ಮಾಹಿತಿ ನೀಡಿದ್ದಾಳೆ. ವಿಷಯದ ಗಂಭೀರತೆ ಅರಿತ ತಾಯಿ ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಧಾವಿಸಿ ಯುವತಿಯನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿರುವ ಗುರುಗ್ರಾಮ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ. ಘಟನೆ ಮಹಿಳೆಯರ ಭದ್ರತೆ ಹಾಗೂ ಲಿವ್ ಇನ್ ಸಂಬಂಧಗಳ ಕುರಿತು ಕಳವಳ ಹುಟ್ಟುಹಾಕಿದೆ.
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 10:56 pm
HK News Staffer
Mangalore Drugs, Police: ಒಂದು ವರ್ಷದಲ್ಲಿ 400 ಡ...
25-06-26 10:48 pm
ಸಂಪುಟ ವಿಸ್ತರಣೆ ವಿಳಂಬ ; ಪ್ರಕೃತಿ ವಿಕೋಪ ಮೇಲುಸ್ತು...
25-06-26 02:39 pm
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm