ಬ್ರೇಕಿಂಗ್ ನ್ಯೂಸ್
24-02-26 01:50 pm HK News Desk ಕ್ರೈಂ
ಲಕ್ನೋ, ಫೆ 25: ನಗರದ ಆಶಿಯಾನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ಕಾಣೆಯಾದರೆಂದು ದೂರು ನೀಡಿದ್ದ ಮಗನೇ ತನ್ನ ತಂದೆಯನ್ನು ಹತ್ಯೆ ಮಾಡಿದ್ದಾನೆ ಎಂಬ ಸಂಗತಿ ಪೊಲೀಸ್ ತನಿಖೆಯಲ್ಲಿ ಬಹಿರಂಗವಾಗಿದೆ. ನೀರು ತುಂಬಿಸುವ ಡ್ರಮ್ ಒಳಗೆ ಪತ್ತೆಯಾದ ಶಿರಚ್ಛೇದಿತ ಅರ್ಧ ದೇಹ ನೋಡಿ ಪೊಲೀಸರೇ ದಿಗ್ಭ್ರಮೆಗೊಂಡಿದ್ದಾರೆ.
ಹತ್ಯೆಗೊಳಗಾದ ವ್ಯಕ್ತಿಯನ್ನು ವರ್ಧಮಾನ ಪ್ಯಾಥಾಲಜಿ ಮಾಲೀಕ ಮನ್ವೇಂದ್ರ ಸಿಂಗ್ ಎಂದು ಗುರುತಿಸಲಾಗಿದೆ. ಫೆಬ್ರವರಿ 20ರಿಂದ ಮನ್ವೇಂದ್ರ ಸಿಂಗ್ ಕಾಣೆಯಾಗಿದ್ದಾರೆ ಎಂದು ಪುತ್ರ ಅಕ್ಷತ್ ಪೊಲೀಸರಿಗೆ ದೂರು ನೀಡಿದ್ದ. ಆದರೆ ಘಟನೆ ನಡೆದ ಎರಡೇ ದಿನಗಳಲ್ಲಿ ಪ್ರಕರಣ ತೀವ್ರ ತಿರುವು ಪಡೆದುಕೊಂಡಿತ್ತು.
ಅಕ್ಷತ್ ಮೊದಲಿಗೆ, “ತಂದೆ ದೆಹಲಿಗೆ ಹೋಗುತ್ತಿದ್ದೇನೆ ಎಂದು ಹೇಳಿ ಬೆಳಿಗ್ಗೆ ಮನೆಯಿಂದ ಹೊರಟಿದ್ದರು. ಮರುದಿನ ವಾಪಸ್ ಬರುತ್ತೇನೆ ಎಂದರೂ ಬಂದಿಲ್ಲ. ಅವರ ಮೂರು ಮೊಬೈಲ್ಗಳು ಸ್ವಿಚ್ ಆಫ್ ಆಗಿವೆ,” ಎಂದು ಹೇಳಿದ್ದ. ಫೋನ್ ಕೊನೆಯ ಲೊಕೇಶನ್ ಕಾಕೋರಿ ಪ್ರದೇಶದಲ್ಲಿ ಪತ್ತೆಯಾದರೂ ಮೊಬೈಲ್ ಸಿಕ್ಕಿರಲಿಲ್ಲ. ಅನುಮಾನಗೊಂಡ ಪೊಲೀಸರು ವಿಚಾರಣೆಯನ್ನು ತೀವ್ರಗೊಳಿಸಿದಾಗ, ಪಾಪಿ ಮಗ ಸತ್ಯ ಒಪ್ಪಿಕೊಂಡಿದ್ದಾನೆ.
ಫೆಬ್ರವರಿ 20ರಂದು ಬೆಳಿಗ್ಗೆ ಸುಮಾರು 4:30ರ ಸುಮಾರಿಗೆ ತಂದೆ-ಮಗನ ನಡುವೆ ಜಗಳ ಉಂಟಾಗಿದ್ದು, ಪರವಾನಗಿ ಪಡೆದ ಬಂದೂಕಿನಿಂದ ತಂದೆಯ ತಲೆಗೆ ಗುಂಡು ಹಾರಿಸಿದ್ದಾಗಿ ಅಕ್ಷತ್ ಒಪ್ಪಿಕೊಂಡಿದ್ದಾನೆ. ಗುಂಡು ತಾಗುತ್ತಿದ್ದಂತೆ ಮನ್ವೇಂದ್ರ ಸಿಂಗ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ನಂತರ ಶವವನ್ನು ಮೂರನೇ ಮಹಡಿಯಿಂದ ಕೆಳಗೆ ತಂದು ಕತ್ತರಿಸಿ, ಕೆಲವು ಭಾಗಗಳನ್ನು ಕಾರಿನಲ್ಲಿ ತೆಗೆದುಕೊಂಡು ನಿರ್ಜನ ಪ್ರದೇಶದಲ್ಲಿ ಎಸೆದಿದ್ದಾನೆ. ಉಳಿದ ಭಾಗವನ್ನು ಮನೆಯಲ್ಲೇ ನೀಲಿ ಡ್ರಮ್ನಲ್ಲಿ ಮುಚ್ಚಿಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಹತ್ಯೆಗೆ ಕಾರಣವೇನು?
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ನೀಟ್ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗುವಂತೆ ತಂದೆ ಒತ್ತಡ ಹೇರಿದ್ದರಿಂದ ಕೋಪಗೊಂಡ ಮಗ ಈ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಅಕ್ಷತ್ನ ತಂಗಿ ಈ ಘಟನೆಗೆ ಸಾಕ್ಷಿಯಾಗಿದ್ದರೂ, ಬೆದರಿಕೆ ಹಿನ್ನೆಲೆಯಲ್ಲಿ ವಿಷಯವನ್ನು ಬಹಿರಂಗಪಡಿಸಿರಲಿಲ್ಲ ಎನ್ನಲಾಗಿದೆ. ಸಾಕ್ಷ್ಯ ನಾಶಗೊಳಿಸಲು ಕಾರನ್ನು ಸ್ವಚ್ಛಗೊಳಿಸಿರುವುದೂ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಮನ್ವೇಂದ್ರ ಸಿಂಗ್ ಮೂಲತಃ ಜಲೌನ್ ಮೂಲದವರು. ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿಕಾಗಿದ್ದರು. ಪತ್ನಿ ಕೆಲ ವರ್ಷಗಳ ಹಿಂದೆ ನಿಧನರಾಗಿದ್ದರು. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ವಿಧಿವಿಜ್ಞಾನ ತನಿಖೆ ಪ್ರಾರಂಭಿಸಿದ್ದಾರೆ. ಪ್ರಕರಣವು ನಗರದಲ್ಲಿ ಭಾರೀ ಸಂಚಲನ ಮೂಡಿಸಿದ್ದು, ಪೊಲೀಸ್ ಇಲಾಖೆ ಹೆಚ್ಚಿನ ವಿಚಾರಣೆ ನಡೆಸುತ್ತಿದೆ.
10-05-26 01:04 pm
HK News Staffer
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
ಕಲಬುರಗಿ ಪೊಲೀಸರ ‘ಆಪರೇಷನ್ ಭರವಸೆ’ ಸಕ್ಸಸ್; 2 ತಿಂಗ...
08-05-26 12:21 pm
IPS Ramachandra Rao: ಸರ್ಕಾರಿ ಕಚೇರಿಯಲ್ಲೇ ತುಂಟಾ...
07-05-26 03:10 pm
10-05-26 12:26 pm
HK News Staffer
ತಮಿಳುನಾಡನ್ನು ದೇವರೇ ಕಾಪಾಡಬೇಕು ; ಟಿವಿಕೆ ಗ್ಯಾರಂಟ...
09-05-26 12:06 pm
ಭಾರತದ ಆಪರೇಷನ್ ಸಿಂಧೂರ್ ಕಾರ್ಯಾಚರಣೆ ; ಶತ್ರುರಾಷ್ಟ...
09-05-26 11:14 am
ಬಂಗಾಳದಲ್ಲಿ ಕೇಸರಿ ಯುಗಾರಂಭ ; ಮೊದಲ ಬಿಜೆಪಿ ಸಿಎಂ ಆ...
08-05-26 06:45 pm
ದ್ರಾವಿಡರ ನಾಡಲ್ಲಿ ದಳಪತಿ ವಿಜಯ್ ಸರ್ಕಾರ್ ! ಮ್ಯಾಜಿ...
08-05-26 06:38 pm
09-05-26 11:51 pm
Mangalore Correspondent
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
Kuthar, Mangalore, UT Khader: ಕುತ್ತಾರಿನಲ್ಲಿ ಕ...
08-05-26 10:33 pm
ಸುತ್ತಿ ಬಳಸಿ ಓಡಾಟಕ್ಕೆ ಬೀಳಲಿದೆ ಬ್ರೇಕ್ ; ಮಂಗಳೂರು...
08-05-26 09:05 pm
09-05-26 10:29 pm
HK News Desk
ಉಪ್ಪಿನಂಗಡಿಯಲ್ಲಿ ರೋಡ್ ರೋಲರ್ ಹರಿದು ಕೂಲಿ ಕಾರ್ಮಿಕ...
09-05-26 09:50 pm
ಸಾಲ ಕೊಟ್ಟ ಮಹಿಳೆಯ ಜೀವ ತೆಗೆದ ಕಟುಕರು; ಅಪಘಾತದ ನಾಟ...
09-05-26 08:29 pm
ಆರೋಪಿಯಿಂದಲೇ ಲಂಚ ; ಒಂದು ಲಕ್ಷ ಪಡೆಯುತ್ತಿದ್ದಾಗ ಗು...
09-05-26 06:42 pm
ಸ್ನಾನಕ್ಕೆ ತೆರಳಿದ್ದ ಸ್ನೇಹಿತೆಯರು ನದಿಯಲ್ಲಿ ಮುಳುಗ...
09-05-26 09:54 am