ಬ್ರೇಕಿಂಗ್ ನ್ಯೂಸ್
26-02-26 04:45 pm HK News Staffer ಕ್ರೈಂ
ಬೆಂಗಳೂರು, ಫೆ.26: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಮಾಹಿತಿಗಳು ಬಹಿರಂಗವಾಗಿವೆ. ರಾಯ್ ಆತ್ಮಹತ್ಯೆಗೆ ಸುಮಾರು ₹500 ಕೋಟಿ ಹವಾಲಾ ಹಣ ವ್ಯವಹಾರ ಪ್ರಮುಖ ಕಾರಣವಾಗಿರಬಹುದು ಎಂದು ತನಿಖಾ ಮೂಲಗಳು ತಿಳಿಸಿವೆ. ಈ ಹಣದ ಲೆಕ್ಕಪತ್ರ ಒದಗಿಸಲು ರಾಯ್ ವಿಫಲವಾದ ಕಾರಣ ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.
ಸಿಜೆ ರಾಯ್ ಅವರ ವ್ಯವಹಾರದಲ್ಲಿ ಸುಮಾರು ₹500 ಕೋಟಿ ಹಣದ ಅಸಮತೋಲನ ಕಂಡುಬಂದಿತ್ತು. ಕೇರಳದ ಕೊಚ್ಚಿ ಯೋಜನೆಗಳಿಗೆ ಸಂಬಂಧಿಸಿದ ಹಣಕಾಸು ವ್ಯವಹಾರಗಳ ಬಳಿಕ ಆದಾಯ ತೆರಿಗೆ ಇಲಾಖೆ ತನಿಖೆ ಆರಂಭಿಸಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯು ಲೆಕ್ಕಪತ್ರ ವಿವರಗಳನ್ನು ಕೇಳಿತ್ತು.
ಈ ಹಣದ ಮೂಲ ವಿವರ ನೀಡಲು ಸಾಧ್ಯವಾಗದ ಕಾರಣ ರಾಯ್ ಸಂಕಷ್ಟಕ್ಕೆ ಸಿಲುಕಿದ್ದರು ಎಂದು ಹೇಳಲಾಗುತ್ತಿದೆ. ದುಬೈನಲ್ಲಿ ಇದ್ದ ರಾಯ್ ತನಿಖೆಯಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದರೂ, ನಂತರ ಭಾರತಕ್ಕೆ ಮರಳಬೇಕಾಯಿತು. ಭಾರತಕ್ಕೆ ಬಂದ ಬಳಿಕ ಐಟಿ ಅಧಿಕಾರಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಬೇಕಾಯಿತು. ಸಿಜೆ ರಾಯ್ ತಮ್ಮ ಪಾರ್ಟ್ನರ್ ಮತ್ತು ಚಾರ್ಟರ್ಡ್ ಅಕೌಂಟೆಂಟ್ ಸಲಹೆಯಂತೆ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿಯನ್ನು ಹಿಂತೆಗೆದುಕೊಂಡಿದ್ದರು. ನಂತರವೂ ಹಣದ ಮೂಲದ ಬಗ್ಗೆ ಸ್ಪಷ್ಟ ಉತ್ತರ ನೀಡಲು ಸಾಧ್ಯವಾಗದೆ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದರು ಎಂದು ವರದಿಯಾಗಿದೆ.
ಆತ್ಮಹತ್ಯೆ ದಿನ ರಾಯ್ ಅವರು ಐಟಿ ಅಧಿಕಾರಿಗಳಿಗೆ ಸಹಕರಿಸುವುದಾಗಿ ಹೇಳಿದ್ದರು. ಆದರೆ ಆ ದಿನ ಮಾನಸಿಕ ಖಿನ್ನತೆಗಾಗಿ ಬಳಸುತ್ತಿದ್ದ ಔಷಧಿಗಳನ್ನು ಸೇವಿಸಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಇದರಿಂದ ಅವರ ಖಿನ್ನತೆ ಹೆಚ್ಚಾಗಿ ಆತ್ಮಹತ್ಯೆಗೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಮಾಹಿತಿಗಳ ಪ್ರಕಾರ, ಸಿಜೆ ರಾಯ್ ಮೊದಲು ತಮ್ಮ ಕಚೇರಿಗೆ ಸಮೀಪದ ಖಾಸಗಿ ಹೋಟೆಲ್ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದರಂತೆ. ಆದರೆ ಸಾರ್ವಜನಿಕ ಸ್ಥಳದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವುದು ಸೂಕ್ತವಲ್ಲ ಎಂದು ಭಾವಿಸಿ ನಂತರ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ.
ರಾಯ್ ಅವರು ತಮ್ಮ ಕಚೇರಿ ಕ್ಯಾಬಿನ್ನಲ್ಲಿ ಎದೆಗೆ ಪಾಯಿಂಟ್ ಬ್ಲ್ಯಾಂಕ್ ಅಂತರದಿಂದ ಗುಂಡು ಹಾರಿಸಿಕೊಂಡಿದ್ದರು. ಗುಂಡು ಹೃದಯವನ್ನು ಸೀಳಿ ನಂತರ ಪಂಜರ ಎಲುಬುಗಳಲ್ಲಿ ಸಿಲುಕಿಕೊಂಡಿದ್ದರಿಂದ ಹೆಚ್ಚಿನ ರಕ್ತಸ್ರಾವವಾಗಲಿಲ್ಲ ಎಂದು ವೈದ್ಯಕೀಯ ಮೂಲಗಳು ತಿಳಿಸಿವೆ.
ಈ ಹಣ ಯಾರಿಗೆ ಸೇರಿತ್ತು ಮತ್ತು ಯಾವ ಉದ್ದೇಶಕ್ಕಾಗಿ ವರ್ಗಾವಣೆಗೊಂಡಿತ್ತು ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಪೊಲೀಸರು ಮತ್ತು ತನಿಖಾ ಸಂಸ್ಥೆಗಳು ಪ್ರಕರಣದ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರೆಸಿವೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm