ಬ್ರೇಕಿಂಗ್ ನ್ಯೂಸ್
27-03-26 08:37 pm HK News Staffer ಕ್ರೈಂ
ಬೆಂಗಳೂರು, ಮಾ.27 : ಇತ್ತೀಚೆಗೆ ಸಾರ್ವಜನಿಕರು ಪೊಲೀಸ್ ಅಧಿಕಾರಿಗಳ ವಿರುದ್ಧ ದೂರು ನೀಡುತ್ತಿರುವುದು ನೋಡಿದ್ದೇವೆ. ಆದರೆ ನಗರದ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ವಿಭಿನ್ನ ಘಟನೆಯೊಂದು ನಡೆದಿದೆ. ಇನ್ಸ್ಪೆಕ್ಟರ್ ರವಿ ಅವರ ಭ್ರಷ್ಟಾಚಾರವನ್ನು ತಾಳಲಾರದೆ, ಠಾಣೆಯ ಸಿಬ್ಬಂದಿಯೇ ನೇರವಾಗಿ ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ದೂರಿನಲ್ಲಿ ಇನ್ಸ್ಪೆಕ್ಟರ್ ರವಿ ಕಳೆದ ಎರಡೂವರೆ ವರ್ಷಗಳಲ್ಲಿ ಸುಮಾರು 15 ಕೋಟಿ ರೂಪಾಯಿಗೂ ಹೆಚ್ಚು ಲಂಚ ಪಡೆದಿದ್ದು, ಹಲವಾರು ಅಕ್ರಮಗಳಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಪ್ರತಿ FIR ಗೂ 25 ಸಾವಿರ ‘ರೇಟ್ ಫಿಕ್ಸ್’ !
ಸಿಬ್ಬಂದಿ ಆರೋಪದ ಪ್ರಕಾರ, ಪುಟ್ಟೇನಹಳ್ಳಿ ಠಾಣೆಯಲ್ಲಿ ಕಾನೂನು ಪಾಲನೆಗಿಂತ ಹೆಚ್ಚಾಗಿ ಹಣ ವಸೂಲಿಗೆ ಆದ್ಯತೆ ನೀಡಲಾಗುತ್ತಿದೆಯಂತೆ. ಯಾವುದೇ ಎಫ್ಐಆರ್ ದಾಖಲಿಸಬೇಕಾದರೆ ಇನ್ಸ್ಪೆಕ್ಟರ್ ರವಿಗೆ ಕನಿಷ್ಠ 25 ಸಾವಿರ ರೂ. ಲಂಚ ನೀಡಲೇಬೇಕು. ಹಣ ನೀಡಿ ಪ್ರಕರಣ ದಾಖಲಿಸದಂತೆ ಒತ್ತಡವನ್ನೂ ಹಾಕಲಾಗುತ್ತದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಡಿಸಿಎಂ ಹೆಸರು ದರ್ಬಳಕೆ:
ಕಳೆದ ಎರಡು ವರ್ಷಗಳಿಂದ ಇನ್ಸ್ಪೆಕ್ಟರ್ ಹೆಚ್.ಕೆ. ರವಿಕುಮಾರ್ ಪುಟ್ಟೇನಹಳ್ಳಿ ಠಾಣೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಟ್ರಾಫಿಕ್ ಪೊಲೀಸ್ ಸ್ಟೇಷನ್ ಹಾಗೂ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಸ್ಟೇಷನ್ ಇನ್ಸಪೆಕ್ಟರ್ ನವೀನ್ ಅವರನ್ನು ಪುಟ್ಟೇನ ಹಳ್ಳಿ ಠಾಣೆಗೆ ವರ್ಗಾವಣೆ ಮಾಡಿಕೊಳ್ಳಲು ಇಬ್ಬರು ಸೇರಿಕೊಂಡು ಈಗಾಗಲೆ DCM ಅವರಿಗೆ 1 ಕೋಟಿ ಹಣ ಕೊಟ್ಟಿದಾರಂತೆ. ಇನ್ನೂ ಹಣ ಹೊಂದಿಸಬೇಕು ಎಂದು ಸಿಬ್ಬಂದಿಗೆ ಹೇಳುತ್ತಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ವರ್ಗಾವಣೆ ದಂಧೆ, ವಸೂಲಿ:
ಇನ್ಸ್ಪೆಕ್ಟರ್ ಮತ್ತು ಪಿಎಸ್ಐ ಸಹ, ಚಿಕ್ಕ ಟೀ ಸ್ಟಾಲ್ಗಳಿಂದ ಹಿಡಿದು ದೊಡ್ಡ ಬಾರ್, ಪಬ್ಗಳ ವರೆಗೂ ವಸೂಲಿ ಮಾಡುತ್ತಿದ್ದರು. ಕೆಲವು ಪ್ರಕರಣಗಳಲ್ಲಿ ರೌಡಿಶೀಟರ್ ಹೆಸರನ್ನು ಪಟ್ಟಿಯಿಂದ ತೆಗೆಯಲು ಲಕ್ಷಾಂತರ ರೂ. ಮುಂಗಡ ಪಡೆಯುವ ಕೆಲಸ ನಡೆಸುತ್ತಿದ್ದಾರೆ. ಉದಾಹರಣೆಗೆ ಲೇಡಿ ರೌಡಿಶೀಟರ್ ಯಶಸ್ವಿನಿ ಗೌಡಳ ಪತಿ ಮಹೇಶ್ ಅಲಿಯಾಸ್ ದಡಿಯ ಮಹೇಶ್ ಹೆಸರನ್ನು ಪಟ್ಟಿಯಿಂದ ತೆಗೆಯಲು 20 ಲಕ್ಷ ರೂ. ಲಂಚ, 2 ಲಕ್ಷ ಬೆಲೆ ಬಾಳುವ LED TV ಮತ್ತು INNOVA Cresta ಕಾರ್ ಬೇಡಿಕೆ ಇಟ್ಟಿದ್ದರು ಎಂದು ಆರೋಪಿಸಿದ್ದಾರೆ.
ತಿಂಗಳಿಗೆ 25 ಲಕ್ಷ ‘ಮಾಮೂಲಿ’ ವಸೂಲಿ:
ಇನ್ಸ್ಪೆಕ್ಟರ್ ನೇರವಾಗಿ ಹಣ ವಸೂಲಿ ಮಾಡದೆ, ತಮ್ಮ SB ಮತ್ತು ಅಧಿಕೃತ ಡ್ರೈವರ್ ಮೂಲಕ ತಿಂಗಳಿಗೆ ಸರಾಸರಿ 25 ಲಕ್ಷ ರೂ. ಸಂಗ್ರಹಿಸುತ್ತಿದ್ದಾರೆ. ಸಬ್ ಇನ್ಸ್ಪೆಕ್ಟರ್ ಮಟ್ಟದ ಅಧಿಕಾರಿಗಳು ಅಕ್ರಮ ಪ್ರಕರಣಗಳಿಗೆ ದಾಳಿ ಮಾಡಿದರೆ, ಮಧ್ಯಪ್ರವೇಶಿಸಿ ಹಣ ವಸೂಲಿ ಮಾಡಿ ಪ್ರಕರಣ ಮುಚ್ಚಿ ಹಾಕುತ್ತಿದ್ದಾರೆ. ಪ್ರಾಮಾಣಿಕ ವರದಿಗಳನ್ನು ನೀಡಿದ ಸಿಬ್ಬಂದಿಯನ್ನು ಟಾರ್ಗೆಟ್ ಮಾಡುವುದಕ್ಕೂ ಹೇಸಲ್ಲ. ಇದರ ಬಗ್ಗೆಯೂ ಆರೋಪಗಳಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
16-08-26 09:03 pm
HK News Staffer
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm
ಅಪ್ರಾಪ್ತ ಬಾಲಕಿಯನ್ನು ಕಾರಿನಲ್ಲಿ ಕರೆದೊಯ್ದಿದ್ದಕ್ಕ...
15-08-26 04:19 pm