ಬ್ರೇಕಿಂಗ್ ನ್ಯೂಸ್
08-04-26 05:53 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 8: ಇದೇ ಮೊದಲ ಬಾರಿಗೆ ಮಂಗಳೂರು ಪೊಲೀಸರು ಐದು ಜನ ವಿದ್ಯಾರ್ಥಿಗಳನ್ನು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಿದ್ದಾರೆ. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ತಾವಾಗಿಯೇ ರೂಮ್ ಮಾಡಿಕೊಂಡಿದ್ದು, ಅಲ್ಲಿಗೆ ಬರುತ್ತಿದ್ದ ಇತರರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕಮಿಷನರ್ ಸುಧೀರ್ ರೆಡ್ಡಿ, ವಿದ್ಯಾರ್ಥಿಯೊಬ್ಬನ ತಾಯಿ ತನ್ನ ಮಗನ ಕೈಯಲ್ಲಿ ಗಾಂಜಾ ಪ್ಯಾಕೆಟ್ ಸಿಕ್ಕಿರುವ ಬಗ್ಗೆ ನೀಡಿರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ, ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ತಾವಾಗಿಯೇ ರೂಮ್ ಮಾಡಿಕೊಂಡು ಡ್ರಗ್ಸ್ ಪೂರೈಕೆ ವಹಿವಾಟು ಮಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಬಂಧನ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.
ತನಿಖೆಯ ವೇಳೆ ಐದು ಜನ ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ರೂಮ್ ಮಾಡಿಕೊಂಡು ಅಲ್ಲಿಯೇ ಡ್ರಗ್ಸ್ ತಂದು ಪ್ಯಾಕಿಂಗ್ ಮಾಡುವುದು, ಬೇರೆಯವರಿಗೆ ಪೂರೈಕೆ ಮಾಡುತ್ತಿರುವುದು ಗೊತ್ತಾಗಿದೆ. ಇವರು ಮಂಗಳೂರಿನ ಆರು ಕಾಲೇಜಿನ 40 ಜನ ವಿದ್ಯಾರ್ಥಿಗಳು, ಹತ್ತು ಜನ ಹೊರಗಿನವರಿಗೆ ಪೂರೈಕೆ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರಿಗೆ ಕೌನ್ಸೆಲಿಂಗ್ ಮಾಡಲಾಗುವುದು.
ಎಲ್ಲ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ಇಟ್ಟುಕೊಳ್ಳಬೇಕು. ಅವರ ನಡತೆಯಲ್ಲಿ ಬದಲಾವಣೆ ಕಂಡುಬಂದರೆ, ಏನಾದರೂ ಸಮಸ್ಯೆ ಇದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಬೇಕು. ಯಾವುದೇ ಮಾಹಿತಿ, ಅನುಮಾನಗಳಿದ್ದಲ್ಲಿ ಸ್ಥಳೀಯ ಠಾಣೆಗೆ ತಿಳಿಸಬೇಕು. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ಹೊರಗಡೆ ರೂಮ್ ಮಾಡಿಕೊಳ್ಳುವುದನ್ನು ಮಾಡಿದರೆ ಯಾಕೆಂದು ಚೆಕ್ ಮಾಡಬೇಕು. ಆಮೂಲಕ ಇಂತಹ ಚಟುವಟಿಕೆಯನ್ನು ಮೂಲದಲ್ಲೇ ಹತ್ತಿಕ್ಕಲು ಸಾಧ್ಯವಾಗುತ್ತದೆ ಎಂದು ಕಮಿಷನರ್ ಪೋಷಕರಿಗೂ ಕಿವಿಮಾತು ಹೇಳಿದ್ದಾರೆ.
ಈಗ ಬಂಧಿತರಾದ ಐವರು ವಿದ್ಯಾರ್ಥಿಗಳು ಮೇಜರ್ ಆಗಿದ್ದು ಪಿಯುಸಿ ಕಲಿಯುವವರಲ್ಲ. ಅವರನ್ನು ಸದ್ಯಕ್ಕೆ ಬಂಧಿಸಲಾಗಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ಮಾಹಿತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am