ಬ್ರೇಕಿಂಗ್ ನ್ಯೂಸ್
08-04-26 05:53 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 8: ಇದೇ ಮೊದಲ ಬಾರಿಗೆ ಮಂಗಳೂರು ಪೊಲೀಸರು ಐದು ಜನ ವಿದ್ಯಾರ್ಥಿಗಳನ್ನು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಿದ್ದಾರೆ. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ತಾವಾಗಿಯೇ ರೂಮ್ ಮಾಡಿಕೊಂಡಿದ್ದು, ಅಲ್ಲಿಗೆ ಬರುತ್ತಿದ್ದ ಇತರರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕಮಿಷನರ್ ಸುಧೀರ್ ರೆಡ್ಡಿ, ವಿದ್ಯಾರ್ಥಿಯೊಬ್ಬನ ತಾಯಿ ತನ್ನ ಮಗನ ಕೈಯಲ್ಲಿ ಗಾಂಜಾ ಪ್ಯಾಕೆಟ್ ಸಿಕ್ಕಿರುವ ಬಗ್ಗೆ ನೀಡಿರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ, ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ತಾವಾಗಿಯೇ ರೂಮ್ ಮಾಡಿಕೊಂಡು ಡ್ರಗ್ಸ್ ಪೂರೈಕೆ ವಹಿವಾಟು ಮಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಬಂಧನ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.
ತನಿಖೆಯ ವೇಳೆ ಐದು ಜನ ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ರೂಮ್ ಮಾಡಿಕೊಂಡು ಅಲ್ಲಿಯೇ ಡ್ರಗ್ಸ್ ತಂದು ಪ್ಯಾಕಿಂಗ್ ಮಾಡುವುದು, ಬೇರೆಯವರಿಗೆ ಪೂರೈಕೆ ಮಾಡುತ್ತಿರುವುದು ಗೊತ್ತಾಗಿದೆ. ಇವರು ಮಂಗಳೂರಿನ ಆರು ಕಾಲೇಜಿನ 40 ಜನ ವಿದ್ಯಾರ್ಥಿಗಳು, ಹತ್ತು ಜನ ಹೊರಗಿನವರಿಗೆ ಪೂರೈಕೆ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರಿಗೆ ಕೌನ್ಸೆಲಿಂಗ್ ಮಾಡಲಾಗುವುದು.
ಎಲ್ಲ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ಇಟ್ಟುಕೊಳ್ಳಬೇಕು. ಅವರ ನಡತೆಯಲ್ಲಿ ಬದಲಾವಣೆ ಕಂಡುಬಂದರೆ, ಏನಾದರೂ ಸಮಸ್ಯೆ ಇದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಬೇಕು. ಯಾವುದೇ ಮಾಹಿತಿ, ಅನುಮಾನಗಳಿದ್ದಲ್ಲಿ ಸ್ಥಳೀಯ ಠಾಣೆಗೆ ತಿಳಿಸಬೇಕು. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ಹೊರಗಡೆ ರೂಮ್ ಮಾಡಿಕೊಳ್ಳುವುದನ್ನು ಮಾಡಿದರೆ ಯಾಕೆಂದು ಚೆಕ್ ಮಾಡಬೇಕು. ಆಮೂಲಕ ಇಂತಹ ಚಟುವಟಿಕೆಯನ್ನು ಮೂಲದಲ್ಲೇ ಹತ್ತಿಕ್ಕಲು ಸಾಧ್ಯವಾಗುತ್ತದೆ ಎಂದು ಕಮಿಷನರ್ ಪೋಷಕರಿಗೂ ಕಿವಿಮಾತು ಹೇಳಿದ್ದಾರೆ.
ಈಗ ಬಂಧಿತರಾದ ಐವರು ವಿದ್ಯಾರ್ಥಿಗಳು ಮೇಜರ್ ಆಗಿದ್ದು ಪಿಯುಸಿ ಕಲಿಯುವವರಲ್ಲ. ಅವರನ್ನು ಸದ್ಯಕ್ಕೆ ಬಂಧಿಸಲಾಗಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ಮಾಹಿತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
08-04-26 02:09 pm
HK News Staffer
Mallikarjun Kharge: ಆರ್ಎಸ್ಎಸ್ ಮತ್ತು ಬಿಜೆಪಿ...
07-04-26 07:26 pm
ಏಪ್ರಿಲ್ 9ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ;...
07-04-26 03:51 pm
ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ ; ಬಳ್ಳಾರಿ,...
07-04-26 12:37 pm
ಇನ್ನೆರಡು ವರ್ಷ ಸಿದ್ದರಾಮಯ್ಯ ಅವರೇ ಸಿಎಂ, ಹೈಕಮಾಂಡ್...
06-04-26 08:51 pm
08-04-26 06:59 pm
HK News Staffer
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
ಇರಾನ್ ನಾಗರಿಕತೆ ಇಂದು ರಾತ್ರಿಯೇ ಅಂತ್ಯವಾಗಲಿದೆ, 47...
07-04-26 09:52 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
08-04-26 05:53 pm
HK News Staffer
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm
Manoj Kodikere, Chetan Padil: ಕುಂದಾಪುರಕ್ಕೆ ಅಪ...
07-04-26 10:15 pm
Arif Murder Case, Mangalore: ಟ್ಯಾಬ್ಲೆಟ್ ಆರೀಫ್...
07-04-26 06:18 pm