ಬ್ರೇಕಿಂಗ್ ನ್ಯೂಸ್
08-04-26 05:53 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 8: ಇದೇ ಮೊದಲ ಬಾರಿಗೆ ಮಂಗಳೂರು ಪೊಲೀಸರು ಐದು ಜನ ವಿದ್ಯಾರ್ಥಿಗಳನ್ನು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ಆರೋಪದಲ್ಲಿ ಬಂಧಿಸಿದ್ದಾರೆ. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ತಾವಾಗಿಯೇ ರೂಮ್ ಮಾಡಿಕೊಂಡಿದ್ದು, ಅಲ್ಲಿಗೆ ಬರುತ್ತಿದ್ದ ಇತರರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದರು.
ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕಮಿಷನರ್ ಸುಧೀರ್ ರೆಡ್ಡಿ, ವಿದ್ಯಾರ್ಥಿಯೊಬ್ಬನ ತಾಯಿ ತನ್ನ ಮಗನ ಕೈಯಲ್ಲಿ ಗಾಂಜಾ ಪ್ಯಾಕೆಟ್ ಸಿಕ್ಕಿರುವ ಬಗ್ಗೆ ನೀಡಿರುವ ಮಾಹಿತಿ ಆಧರಿಸಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಈ ವೇಳೆ, ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ತಾವಾಗಿಯೇ ರೂಮ್ ಮಾಡಿಕೊಂಡು ಡ್ರಗ್ಸ್ ಪೂರೈಕೆ ವಹಿವಾಟು ಮಾಡುತ್ತಿರುವುದು ಕಂಡುಬಂದಿದೆ. ಈ ಬಗ್ಗೆ ಬಂಧನ ಕ್ರಮ ಜರುಗಿಸಲಾಗಿದೆ ಎಂದು ತಿಳಿಸಿದ್ದಾರೆ.
ತನಿಖೆಯ ವೇಳೆ ಐದು ಜನ ಬೇರೆ ಬೇರೆ ಕಾಲೇಜಿನ ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ರೂಮ್ ಮಾಡಿಕೊಂಡು ಅಲ್ಲಿಯೇ ಡ್ರಗ್ಸ್ ತಂದು ಪ್ಯಾಕಿಂಗ್ ಮಾಡುವುದು, ಬೇರೆಯವರಿಗೆ ಪೂರೈಕೆ ಮಾಡುತ್ತಿರುವುದು ಗೊತ್ತಾಗಿದೆ. ಇವರು ಮಂಗಳೂರಿನ ಆರು ಕಾಲೇಜಿನ 40 ಜನ ವಿದ್ಯಾರ್ಥಿಗಳು, ಹತ್ತು ಜನ ಹೊರಗಿನವರಿಗೆ ಪೂರೈಕೆ ಮಾಡುತ್ತಿರುವುದನ್ನು ಪತ್ತೆ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳು ಮತ್ತು ಅವರ ಹೆತ್ತವರಿಗೆ ಕೌನ್ಸೆಲಿಂಗ್ ಮಾಡಲಾಗುವುದು.
ಎಲ್ಲ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿಗಾ ಇಟ್ಟುಕೊಳ್ಳಬೇಕು. ಅವರ ನಡತೆಯಲ್ಲಿ ಬದಲಾವಣೆ ಕಂಡುಬಂದರೆ, ಏನಾದರೂ ಸಮಸ್ಯೆ ಇದೆಯೇ ಎನ್ನುವ ಬಗ್ಗೆ ಪರಿಶೀಲನೆ ನಡೆಸಬೇಕು. ಯಾವುದೇ ಮಾಹಿತಿ, ಅನುಮಾನಗಳಿದ್ದಲ್ಲಿ ಸ್ಥಳೀಯ ಠಾಣೆಗೆ ತಿಳಿಸಬೇಕು. ವಿದ್ಯಾರ್ಥಿಗಳು ಹಾಸ್ಟೆಲ್ ಬಿಟ್ಟು ಹೊರಗಡೆ ರೂಮ್ ಮಾಡಿಕೊಳ್ಳುವುದನ್ನು ಮಾಡಿದರೆ ಯಾಕೆಂದು ಚೆಕ್ ಮಾಡಬೇಕು. ಆಮೂಲಕ ಇಂತಹ ಚಟುವಟಿಕೆಯನ್ನು ಮೂಲದಲ್ಲೇ ಹತ್ತಿಕ್ಕಲು ಸಾಧ್ಯವಾಗುತ್ತದೆ ಎಂದು ಕಮಿಷನರ್ ಪೋಷಕರಿಗೂ ಕಿವಿಮಾತು ಹೇಳಿದ್ದಾರೆ.
ಈಗ ಬಂಧಿತರಾದ ಐವರು ವಿದ್ಯಾರ್ಥಿಗಳು ಮೇಜರ್ ಆಗಿದ್ದು ಪಿಯುಸಿ ಕಲಿಯುವವರಲ್ಲ. ಅವರನ್ನು ಸದ್ಯಕ್ಕೆ ಬಂಧಿಸಲಾಗಿದ್ದು, ಶೈಕ್ಷಣಿಕ ಹಿತದೃಷ್ಟಿಯಿಂದ ಅವರ ಮಾಹಿತಿ ನೀಡಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm