ಬ್ರೇಕಿಂಗ್ ನ್ಯೂಸ್
09-04-26 01:03 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 9: ಸಿಲಿಕಾನ್ ಸಿಟಿಯಲ್ಲಿ ಪೋಷಕರ ಎದೆನಡುಗಿಸುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನಾಯಂಡಹಳ್ಳಿಯಲ್ಲಿ ವಾಸವಾಗಿರುವ ನವೀನ್ ಮತ್ತು ಜಯಶ್ರೀ ದಂಪತಿಯ ಒಂದೂವರೆ ವರ್ಷದ ಪುತ್ರಿ ಸಹನಾ, ಏಪ್ರಿಲ್ 6ರಂದು ಮನೆಯೊಳಗೆ ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಮೊದಲ ಮಹಡಿಯಿಂದ ಕೆಳಕ್ಕೆ ಬಿದ್ದಿದ್ದು ಘಟನೆ ದೃಶ್ಯ ಸಿಸಿಟಿವಿಯಲ್ಲಿ ವೈರಲ್ ಆಗಿದೆ.
ಮನೆಯೊಳಗೆ ಆಟವಾಡುತ್ತಿದ್ದ ಮಗ ಮನೆಯ ಮುಖ್ಯ ಬಾಗಿಲು ದಾಟಿ ಹೊರಬಂದಿದ್ದು, ವರಾಂಡದಲ್ಲಿ ಇಟ್ಟಿದ್ದ ಕುರ್ಚಿಯ ಮೇಲೆ ಹತ್ತಿ ನಿಯಂತ್ರಣ ತಪ್ಪಿ ಕೆಳಕ್ಕೆ ಬಿದ್ದಿದೆ. ಮಗು ನೆಲಕ್ಕಪ್ಪಳಿಸುತ್ತಿದ್ದಂತೆಯೇ ತಲೆಗೆ ಗಂಭೀರ ಗಾಯಗಳಾಗಿದ್ದು, ರಕ್ತದ ಮಡುವಿನಲ್ಲಿ ಬಿದ್ದಿರುವ ದೃಶ್ಯ ಕಂಡ ತಾಯಿ ಜಯಶ್ರೀ ಆಘಾತದಿಂದಲೇ ರಸ್ತೆಯಲ್ಲೇ ಮೂರ್ಛೆ ಹೋಗಿದ್ದಾರೆ. ತಕ್ಷಣವೇ ಸ್ಥಳೀಯರು ತಾಯಿ ಹಾಗೂ ಮಗುವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಸದ್ಯ ಮಗುವಿಗೆ ಬಸವನಗುಡಿಯ ರಂಗದೊರೈ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಗುವಿನ ತಲೆಗೆ ಮೂರು ಹೊಲಿಗೆ ಹಾಕಲಾಗಿದ್ದು ಮಗುವಿನ ಸ್ಥಿತಿ ಸುಧಾರಿಸುತ್ತಿದೆ. ಕಳೆದ ಎರಡು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿದ್ದ ದಂಪತಿಗೆ ಸಹನಾ ಒಬ್ಬಳೆ ಮಗಳು. ಪ್ರಸ್ತುತ ಮಗುವಿನ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡುಬರುತ್ತಿದೆ ಎಂದು ಹೇಳಲಾಗುತ್ತಿದೆ.
ಘಟನೆಯ ಬಗ್ಗೆ ಮಾತನಾಡಿದ ಮಗುವಿನ ತಂದೆ ನವೀನ್, “ಇದು ಸಂಪೂರ್ಣ ಆಕಸ್ಮಿಕ ಘಟನೆ. , 'ಮನೆಯ ಮೊದಲನೇ ಮಹಡಿಯಿಂದ ಮಗು ಆಯತಪ್ಪಿ ಕೆಳಕ್ಕೆ ಬಿದ್ದಿದೆ. ಪತ್ನಿ ಅಡುಗೆಮನೆಯಲ್ಲಿ ಹಾಲು ಕಾಯಿಸುತ್ತಿದ್ದ ವೇಳೆ ಕೆಲವೇ ಕ್ಷಣಗಳಲ್ಲಿ ಇದು ಸಂಭವಿಸಿದೆ. ಮಗುವಿನ ತಲೆಗೆ ಮೂರು ಹೊಲಿಗೆಗಳನ್ನು ಹಾಕಲಾಗಿದ್ದು, ಸದ್ಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ. ಮಗು ಈಗ ಪ್ರಾಣಾಪಾಯದಿಂದ ಪಾರಾಗಿದೆ” ಎಂದು ವೈದ್ಯರು ಹೇಳಿದ್ದಾಗಿ ತಿಳಿಸಿದ್ದಾರೆ.
ಈ ಘಟನೆ ಪೋಷಕರಿಗೆ ಎಚ್ಚರಿಕೆಯ ಗಂಟೆಯಾಗಿ ಪರಿಣಮಿಸಿದ್ದು, ಮಕ್ಕಳ ಸುರಕ್ಷತೆ ಬಗ್ಗೆ ಮತ್ತೊಮ್ಮೆ ಜಾಗೃತಿ ಮೂಡಿಸಿದೆ.
Could This Have Been Prevented? Questions Raised Over Parental Supervision
— Karnataka Portfolio (@karnatakaportf) April 9, 2026
A deeply distressing incident has occurred in the Nayandahalli area of Bengaluru. A one-and-a-half-year-old baby girl, who was playing at home, accidentally stepped out through the main door and fell from… pic.twitter.com/8DAJMg3Mnm
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm