ಬ್ರೇಕಿಂಗ್ ನ್ಯೂಸ್
10-04-26 11:06 pm HK News Staffer ಕ್ರೈಂ
ಲಕ್ನೋ, ಎಪ್ರಿಲ್ 10: ಪ್ರಯಾಗ್ರಾಜ್ ಕುಂಭಮೇಳದಲ್ಲಿ ಮಾಲೆ ಮಾರುತ್ತಲೇ ಸೋಶಿಯಲ್ ಮೀಡಿಯಾದಿಂದಾಗಿ ರಾತ್ರೋರಾತ್ರಿ ಖ್ಯಾತಿ ಗಳಿಸಿದ್ದ ಉತ್ತರ ಪ್ರದೇಶದ ಯುವತಿ ಮೊನಾಲಿಸಾ ಭೋಂಸ್ಲೆ ಅವರು ಇತ್ತೀಚೆಗೆ ಕೇರಳದಲ್ಲಿ ನಟ ಫರ್ಮನ್ ಖಾನ್ ಎಂಬವರನ್ನು ಮದುವೆಯಾಗಿದ್ದರು. ಮುಸ್ಲಿಂ ವ್ಯಕ್ತಿಯನ್ನು ವಿವಾಹವಾಗಿದ್ದಕ್ಕೆ ಟೀಕೆಯೂ ವ್ಯಕ್ತವಾಗಿತ್ತು. ಇದೀಗ ಅಂತರ್ಧರ್ಮೀಯ ವಿವಾಹ ಕಾನೂನು ಸಂಕಷ್ಟಕ್ಕೆ ಸಿಲುಕಿದೆ.
ಪೊಲೀಸರ ತನಿಖೆಯಲ್ಲಿ ಮೊನಾಲಿಸಾ ಅಪ್ರಾಪ್ತೆ ಎಂದು ದೃಢಪಟ್ಟ ನಂತರ ಮಧ್ಯಪ್ರದೇಶ ಪೊಲೀಸರು ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ ಅಡಿಯಲ್ಲಿ ಕ್ರಿಮಿನಲ್ ಪಿತೂರಿ ಮತ್ತು ಕಾನೂನುಬಾಹಿರ ವಿವಾಹಕ್ಕೆ ಸಂಬಂಧಿಸಿ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ(ದೌರ್ಜನ್ಯ ತಡೆ) ಕಾಯ್ದೆಯಡಿ ಫರ್ಮಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ನಡೆಸಿದ ತನಿಖೆಯ ನಂತರ, ಮೊನಾಲಿಸಾ ಮದುವೆ ಸಮಯದಲ್ಲಿ ಅಪ್ರಾಪ್ತೆಯಾಗಿದ್ದರು ಎಂಬುದು ದೃಢಪಟ್ಟಿದೆ. ಮೊನಾಲಿಸಾ ಮತ್ತು ಫರ್ಮಾನ್ ಖಾನ್ ಇತ್ತೀಚೆಗಷ್ಟೇ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇದು ಲವ್ ಜಿಹಾದ್ ಎಂಬ ಆರೋಪಗಳು ಕೇಳಿಬಂದಿದವು. ಆಕೆಯ ಹೆತ್ತವರು ತಮ್ಮ ಅಪ್ರಾಪ್ತ ಮಗಳ ತಲೆಕೆಡಿಸಿ ಫರ್ಮಾನ್ ಮದುವೆಯಾಗಿದ್ದಾಗಿ ಆರೋಪಿಸಿ ದೂರನ್ನೂ ನೀಡಿದ್ದರು. ಇದನ್ನೇ ಆಧಾರವಾಗಿಟ್ಟು ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ತನಿಖೆ ನಡೆಸಿತ್ತು.
ಆಸ್ಪತ್ರೆ ದಾಖಲೆಗಳ ಪ್ರಕಾರ, ಮೋನಾಲಿಸಾ ಪಾರಧಿ ಬುಡಕಟ್ಟು ಸಮುದಾಯಕ್ಕೆ ಸೇರಿದವರಾಗಿದ್ದು, ಡಿಸೆಂಬರ್ 30, 2009 ರಂದು ಜನಿಸಿದ್ದಾರೆ. ಮಾರ್ಚ್ 11, 2026 ರಂದು ಮದುವೆಯಾದ ಸಮಯದಲ್ಲಿ ಆಕೆಗೆ ಕೇವಲ 16 ವರ್ಷ ತುಂಬಿತ್ತು. ಕೇರಳದಲ್ಲಿ ಮದುವೆ ನೋಂದಣಿ ಮಾಡುವಾಗ ಮೊನಾಲಿಸಾ ಅವರನ್ನು ವಯಸ್ಕಳೆಂದು ತೋರಿಸಲು ನಕಲಿ ಜನನ ಪ್ರಮಾಣಪತ್ರವನ್ನು ಬಳಸಲಾಗಿದೆ. ಆಕೆಯನ್ನು 18 ವರ್ಷ ಮೇಲ್ಪಟ್ಟವಳೆಂದು ಬಿಂಬಿಸಿದ್ದರು. ಇದನ್ನು ಆಧರಿಸಿ ಪೊಲೀಸರು ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm