ಬ್ರೇಕಿಂಗ್ ನ್ಯೂಸ್
11-04-26 11:14 pm HK News Desk ಕ್ರೈಂ
ಉಡುಪಿ, ಎಪ್ರಿಲ್ 11: ನೆಲ್ಯಾಡಿ ನಿವಾಸಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಅವರನ್ನು ಕಾರ್ಕಳ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದಾರೆ.
ಸುದೀಪ್ ರೈ ಅವರು ಮಾರ್ಚ್ 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಮೊದಲಿಗೆ ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ಕು ದಿನಗಳ ಬಳಿಕ ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿತ್ತು. ಅಷ್ಟರಲ್ಲಿ ಸ್ಥಿತಿ ಉಲ್ಬಣಗೊಂಡಿದ್ದು ಮಾರ್ಚ್ 29ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ತನಿಖೆಯ ವೇಳೆ, ಸುದೀಪ್ ರೈ ಅವರು ಫೆಬ್ರವರಿ 17ರಂದು ಪುತ್ತೂರು ಉಪ ನೋಂದಣಿ ಕಚೇರಿಯಲ್ಲಿ ಮನೆ ಮಂದಿಗೆ ತಿಳಿಸದೆ ಸೌಮ್ಯ ಶೆಟ್ಟಿ ಜೊತೆಗೆ ವಿವಾಹ ನೋಂದಣಿ ಮಾಡಿದ್ದರು ಎಂಬುದು ತಿಳಿದುಬಂದಿತ್ತು. ಆಬಳಿಕ ಕಾರ್ಕಳದಲ್ಲಿ ಜೊತೆಗಿದ್ದಾಗಲೇ ವಿಷ ಸೇವನೆಯಾಗಿತ್ತು.
ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಸುದೀಪ್ ಅವರ ತಂದೆ ದಾಮೋದರ ರೈ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಕೆಯ ಕಿರುಕುಳದಿಂದಲೇ ಮಗನ ಸಾವಾಗಿದೆ ಎಂದು ಆರೋಪಿಸಿದ್ದರು. ಆತ್ಮಹತ್ಯೆ ಪ್ರಚೋದನೆ ಶಂಕೆಯ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದರು. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
ಪ್ರಾಥಮಿಕ ಸಾಕ್ಷ್ಯಗಳ ಆಧಾರದ ಮೇಲೆ ಸೌಮ್ಯ ಶೆಟ್ಟಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಹರಿರಾಮ್ ತಿಳಿಸಿದ್ದಾರೆ. ಸುದೀಪ್ ಸಾವಿನ ಬಳಿಕ ಸೌಮ್ಯ ಶೆಟ್ಟಿ ವಿರುದ್ದ ಹಲವು ಆರೋಪಗಳು ಕೇಳಿಬಂದಿದ್ದವು. ಸುದೀಪ್ ತಂದೆ ಮತ್ತು ಸೌಮ್ಯಾ ಮಾಜಿ ಪ್ರಿಯಕರ ವೇಣು ಆಕೆಯ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದರು.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm