ಬ್ರೇಕಿಂಗ್ ನ್ಯೂಸ್
11-04-26 11:14 pm HK News Desk ಕ್ರೈಂ
ಉಡುಪಿ, ಎಪ್ರಿಲ್ 11: ನೆಲ್ಯಾಡಿ ನಿವಾಸಿ ಸುದೀಪ್ ರೈ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಅವರ ಪತ್ನಿ ಕಾರ್ಕಳ ತಾಲೂಕಿನ ಕಜೆ ನಿವಾಸಿ ಸೌಮ್ಯ ಶೆಟ್ಟಿ (28) ಅವರನ್ನು ಕಾರ್ಕಳ ಪೊಲೀಸರು ಶನಿವಾರ ಸಂಜೆ ಬಂಧಿಸಿದ್ದಾರೆ.
ಸುದೀಪ್ ರೈ ಅವರು ಮಾರ್ಚ್ 17ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಅವರನ್ನು ಮೊದಲಿಗೆ ಕಾರ್ಕಳದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಾಲ್ಕು ದಿನಗಳ ಬಳಿಕ ಮಂಗಳೂರು ಆಸ್ಪತ್ರೆಗೆ ಸೇರಿಸಲಾಗಿತ್ತು. ಅಷ್ಟರಲ್ಲಿ ಸ್ಥಿತಿ ಉಲ್ಬಣಗೊಂಡಿದ್ದು ಮಾರ್ಚ್ 29ರಂದು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ತನಿಖೆಯ ವೇಳೆ, ಸುದೀಪ್ ರೈ ಅವರು ಫೆಬ್ರವರಿ 17ರಂದು ಪುತ್ತೂರು ಉಪ ನೋಂದಣಿ ಕಚೇರಿಯಲ್ಲಿ ಮನೆ ಮಂದಿಗೆ ತಿಳಿಸದೆ ಸೌಮ್ಯ ಶೆಟ್ಟಿ ಜೊತೆಗೆ ವಿವಾಹ ನೋಂದಣಿ ಮಾಡಿದ್ದರು ಎಂಬುದು ತಿಳಿದುಬಂದಿತ್ತು. ಆಬಳಿಕ ಕಾರ್ಕಳದಲ್ಲಿ ಜೊತೆಗಿದ್ದಾಗಲೇ ವಿಷ ಸೇವನೆಯಾಗಿತ್ತು.
ಮಗನ ಸಾವಿನ ಬಗ್ಗೆ ಸಂಶಯ ವ್ಯಕ್ತಪಡಿಸಿ ಸುದೀಪ್ ಅವರ ತಂದೆ ದಾಮೋದರ ರೈ ಕಾರ್ಕಳ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಆಕೆಯ ಕಿರುಕುಳದಿಂದಲೇ ಮಗನ ಸಾವಾಗಿದೆ ಎಂದು ಆರೋಪಿಸಿದ್ದರು. ಆತ್ಮಹತ್ಯೆ ಪ್ರಚೋದನೆ ಶಂಕೆಯ ಮೇರೆಗೆ ಪೊಲೀಸರು ತನಿಖೆ ಕೈಗೊಂಡಿದ್ದರು. ಸಾಕ್ಷ್ಯಾಧಾರಗಳ ಆಧಾರದ ಮೇಲೆ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.
ಪ್ರಾಥಮಿಕ ಸಾಕ್ಷ್ಯಗಳ ಆಧಾರದ ಮೇಲೆ ಸೌಮ್ಯ ಶೆಟ್ಟಿಯನ್ನು ಬಂಧಿಸಲಾಗಿದೆ ಎಂದು ಎಸ್ಪಿ ಹರಿರಾಮ್ ತಿಳಿಸಿದ್ದಾರೆ. ಸುದೀಪ್ ಸಾವಿನ ಬಳಿಕ ಸೌಮ್ಯ ಶೆಟ್ಟಿ ವಿರುದ್ದ ಹಲವು ಆರೋಪಗಳು ಕೇಳಿಬಂದಿದ್ದವು. ಸುದೀಪ್ ತಂದೆ ಮತ್ತು ಸೌಮ್ಯಾ ಮಾಜಿ ಪ್ರಿಯಕರ ವೇಣು ಆಕೆಯ ವಿರುದ್ದ ಹಲವು ಆರೋಪಗಳನ್ನು ಮಾಡಿದ್ದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm