ಬ್ರೇಕಿಂಗ್ ನ್ಯೂಸ್
14-04-26 11:16 pm HK News Desk ಕ್ರೈಂ
ಬೆಂಗಳೂರು, ಎಪ್ರಿಲ್ 14: ತಾಯಿಯೊಬ್ಬಳು ತನ್ನ ಮಗಳನ್ನು ಉಸಿರುಗಟ್ಟಿಸಿ ಸಾಯಿಸಿ ಬಳಿಕ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ವೈಟ್ಫೀಲ್ಡ್ ಸಮೀಪದ ಇಮ್ಮಡಿಹಳ್ಳಿಯಲ್ಲಿ ನಡೆದಿದೆ.
ಇಮ್ಮಡಿಹಳ್ಳಿಯ ನಿವಾಸಿ ಸುವರ್ಣ (40) ಹಾಗೂ ಅವರ ಪುತ್ರಿ ಕಾರುಣ್ಯ (14) ಮೃತಪಟ್ಟ ದುರ್ದೈವಿಗಳು. ಮಂಗಳವಾರ ಬೆಳಗ್ಗೆ ಸುಮಾರು 11 ಗಂಟೆಯ ಸುಮಾರಿಗೆ ಈ ಕೃತ್ಯ ನಡೆದಿದೆ ಎಂದು ತಿಳಿದುಬಂದಿದೆ. ಘಟನೆ ಸಂಭವಿಸಿದ ವೇಳೆ ಸುವರ್ಣ ಅವರ ಅತ್ತೆ ಮತ್ತು ಮಾವ ಮನೆಯಲ್ಲೇ ಇದ್ದರು. ಮಗಳನ್ನು ಕೊಠಡಿಯೊಳಗೆ ಕರೆದೊಯ್ದ ಸುವರ್ಣ, ಒಳಗಿನಿಂದ ಬಾಗಿಲು ಹಾಕಿಕೊಂಡಿದ್ದಾರೆ. ಬಹಳ ಹೊತ್ತಾದರೂ ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡ ಕುಟುಂಬಸ್ಥರು ಬಾಗಿಲು ಮುರಿದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ವೈಟ್ಫೀಲ್ಡ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ, ಸುವರ್ಣ ಅವರು ಮೊದಲು ಮಗಳು ಕಾರುಣ್ಯಾಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ, ನಂತರ ಅದೇ ಕೋಣೆಯಲ್ಲಿ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುವರ್ಣ ಅವರ ಪತಿ ವೃತ್ತಿಯಲ್ಲಿ ಚಾಲಕರಾಗಿದ್ದು, ಘಟನೆ ನಡೆದ ಸಮಯದಲ್ಲಿ ಮನೆಯಲ್ಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲವಾದರೂ, ಪೊಲೀಸರು ಸುವರ್ಣ ಅವರ ಮೊಬೈಲ್ ಫೋನ್ ವಶಕ್ಕೆ ಪಡೆದಿದ್ದಾರೆ. ಕೌಟುಂಬಿಕ ಸಮಸ್ಯೆ ಅಥವಾ ಮಾನಸಿಕ ಖಿನ್ನತೆಯೇ ಈ ಘಟನೆಗೆ ಕಾರಣವಿರಬಹುದು ಎಂದು ಶಂಕಿಸಲಾಗಿದ್ದು, ವೈಟ್ಫೀಲ್ಡ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm