ಬ್ರೇಕಿಂಗ್ ನ್ಯೂಸ್
18-04-26 03:50 pm HK News Staffer ಕ್ರೈಂ
ಮುಂಬೈ, ಎಪ್ರಿಲ್ 17: ನೂರಾರು ಹೆಣ್ಣು ಮಕ್ಕಳ ಲೈಂಗಿಕ ಶೋಷಣೆ ಮತ್ತು ಬ್ಲ್ಯಾಕ್ಮೇಲ್ ದಂಧೆ ನಡೆಸುತ್ತಿದ್ದ ಘಟನೆ ಮಹಾರಾಷ್ಟ್ರದ ಅಮರಾವತಿ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದ್ದು ಘಟನೆ ಸಂಬಂಧಿಸಿ ಪೊಲೀಸರು ಮೊಹಮ್ಮದ್ ತನ್ವೀರ್ (19) ಎಂಬಾತನನ್ನು ಬಂಧಿಸಿದ್ದಾರೆ.
180 ಅಪ್ರಾಪ್ತ ಬಾಲಕಿಯರನ್ನು ಜಾಲತಾಣದಲ್ಲಿ ಸಂಪರ್ಕಿಸಿ ಅವರನ್ನು ಪ್ರೀತಿಸುವ ನೆಪದಲ್ಲಿ ದೈಹಿಕ ಸಂಪರ್ಕ ಮಾಡಿ ವಿಡಿಯೋ ಮೂಲಕ ಬ್ಲ್ಯಾಕ್ಮೇಲ್ ಮಾಡುತ್ತಿದ್ದರು. ಪ್ರಕರಣದ ತನಿಖೆಗೆ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದ್ದು 10 ಪೊಲೀಸ್ ಅಧಿಕಾರಿಗಳು ಮತ್ತು 36 ಸಿಬ್ಬಂದಿಯನ್ನು ಒಳಗೊಂಡಿದ್ದಾರೆ. ಘಟನೆ ಸಂಬಂಧಿಸಿ ಹಲವರನ್ನು ವಶಕ್ಕೆ ಪಡೆದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ವಿಡಿಯೋ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಘಟನೆ ಬೆಳಕಿಗೆ ಬಂದಿತ್ತು.
ಮೂರು ದಿನಗಳ ಹಿಂದೆ ಒಮ್ಮಿಂದೊಮ್ಮೆಲೇ ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ರಾಪ್ತ ಬಾಲಕಿಯರ ಅರೆನಗ್ನ ವಿಡಿಯೋಗಳು ವೈರಲ್ ಆಗಿದ್ದವು. ವಿಡಿಯೋ ಬರುತ್ತಲೇ ಅಚಲ್ಪುರ ಮತ್ತು ಪರತ್ವಾಡದಲ್ಲಿ ಆಕ್ರೋಶಕ್ಕೆ ಕಾರಣವಾಯಿತು. ಆರಂಭದಲ್ಲಿ ಸಂತ್ರಸ್ತರು ದೂರು ನೀಡಲು ಮುಂದೆ ಬರದೇ ಇದ್ದುದರಿಂದ, ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದರು.
ವಾಟ್ಸಪ್ ಮತ್ತು ಸ್ನಾಪ್ ಚಾಟ್ ಮೂಲಕ ಆರೋಪಿಗಳು ಹರೆಯದ ಯುವತಿಯರನ್ನು ಸಂಪರ್ಕಿಸಿ ಪ್ರೀತಿಸುವ ನೆಪದಲ್ಲಿ ಜಾಲ ಬೀಸುತ್ತಿದ್ದರು ಎಂದು ತನಿಖೆಯಲ್ಲಿ ತಿಳಿದುಬಂದಿದೆ. ಕೆಲವು ಹುಡುಗಿಯರನ್ನು ಮುಂಬೈ ಮತ್ತು ಪುಣೆಗೆ ಕರೆದೊಯ್ಯಲಾಗಿದೆ. ಬಿಜೆಪಿ ಸಂಸದ ಅನಿಲ್ ಬೋಂಡೆ, 180 ಯುವತಿಯರನ್ನು ಬಳಸಿ 350 ವಿಡಿಯೋಗಳನ್ನು ಮಾಡಿದ್ದು ಇದರ ಹಿಂದೆ ದೊಡ್ಡ ಜಾಲವೇ ಇದೆ, ಎಲ್ಲ ಆರೋಪಿಗಳನ್ನು ಬಂಧಿಸದೇ ಇದ್ದರೆ ಎಸ್ಪಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಹೇಳಿದ್ದಾರೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ, ತನಿಖೆಗೆ ಎಸ್ಐಟಿ ರಚಿಸಿ ಆದೇಶ ಮಾಡಿತ್ತು.
ಇದೇ ವೇಳೆ, ಆರೋಪಿ ಮೊಹಮ್ಮದ್ ಅಯಾಜ್ ಮನೆ ಅಕ್ರಮ ಎಂಬುದು ಬಯಲಾಗಿದ್ದು ಪುರಸಭೆಯಿಂದ ಅಕ್ರಮ ತೆರವಿಗೆ ಕಾರ್ಯಾಚರಣೆ ನಡೆಸಲಾಗಿದೆ. ಮನೆ ಆವರಣದಲ್ಲಿ ಪೊಲೀಸ್ ಪಡೆಯನ್ನೂ ನಿಯೋಜಿಸಲಾಗಿದೆ. ಹೀಗಾಗಿ ಪ್ರಕರಣವು ರಾಜಕೀಯ ತಿರುವು ಪಡೆದಿದ್ದು ಆರೋಪಿ ಅಸಾದುದ್ದೀನ್ ಓವೈಸಿ ನೇತೃತ್ವದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಪಕ್ಷದಲ್ಲಿ ಸಕ್ರಿಯವಾಗಿದ್ದಾನೆ.
ಇದಲ್ಲದೆ, ಮಹಾರಾಷ್ಟ್ರ ಪೊಲೀಸರು ಉಜರ್ ಖಾನ್ ಎಂಬ ಮತ್ತೊಬ್ಬನನ್ನು ಬಂಧನ ಮಾಡಿದ್ದಾರೆ. ಪ್ರಮುಖ ಆರೋಪಿ ಅಯಾನ್ ಮೊಬೈಲ್ ಫೋನ್ನಿಂದ ವೀಡಿಯೊಗಳನ್ನು ಡೌನ್ಲೋಡ್ ಮಾಡಿ ನಂತರ ಅವುಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರ ಮಾಡಿದ್ದ ಎಂದು ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm