ಬ್ರೇಕಿಂಗ್ ನ್ಯೂಸ್
04-01-21 04:53 pm Mangalore Correspondent ಕ್ರೈಂ
ಮಂಗಳೂರು, ಜ.4 : ಬ್ಯಾಂಕ್ ಖಾತೆದಾರರ ಗಮನಕ್ಕೆ ಬಾರದಂತೆ ಖಾತೆಯಿಂದ ಹಣ ದೋಚಿದ ಎರಡು ಪ್ರಕರಣಗಳು ನಗರದ ಸೈಬರ್ ಠಾಣೆಯಲ್ಲಿ ದಾಖಲಾಗಿದೆ.
ನಗರದ ಲಾಲ್ ಬಾಗ್ ನಲ್ಲಿ ಭಾರತೀಯ ಸ್ಟೇಟ್ ಬ್ಯಾಂಕ್ ಖಾತೆಯನ್ನು ಹೊಂದಿರುವ ವ್ಯಕ್ತಿಯೋರ್ವರ ಬ್ಯಾಂಕ್ ಖಾತೆಗೆ ಕನ್ನ ಹಾಕಿರುವ ಹ್ಯಾಕರ್ಸ್, ಅವರಿಗೆ ತಿಳಿಯದಂತೆ ಹಂತ ಹಂತವಾಗಿ ಒಟ್ಟು 90,600 ರೂ. ನಗದು ಲಪಟಾಯಿಸಿದ್ದಾರೆ. ಜ.1ರಂದು ಬೆಳಗ್ಗೆ 8 ರಿಂದ 8.15ರ ಒಳಗೆ ಬ್ಯಾಂಕ್ ಖಾತೆಯಿಂದ ಹಣ ದೋಚಲಾಗಿದೆ. ಹಣ ಕಳಕೊಂಡ ವ್ಯಕ್ತಿ ಬಳಿಕ ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಕೆನರಾ ಬ್ಯಾಂಕ್ ಕಾವೂರು ಶಾಖೆಯಲ್ಲಿ ಖಾತೆಯನ್ನು ಹೊಂದಿರುವ ವ್ಯಕ್ತಿಯೂ ಇದೇ ರೀತಿ ಹಣ ಕಳಕೊಂಡಿದ್ದಾರೆ. ಬ್ಯಾಂಕ್ ಖಾತೆಯಿಂದ ಜ.1ರಂದು ರಾತ್ರಿ 8.15 ರಿಂದ ಜ.2ರ ಬೆಳಗ್ಗೆ 8.15ರ ಮಧ್ಯೆ ಒಟ್ಟು 80 ಸಾವಿರ ರೂ. ನಗದು ಅಪಹರಿಸಲಾಗಿದೆ.
ಬ್ಯಾಂಕ್ ಖಾತೆಯಿಂದ ಹಣ ದೋಚಿರುವುದು ಖಾತೆದಾರರ ಗಮನಕ್ಕೆ ಬರುತ್ತಿದ್ದಂತೆ, ಅವರು ಸೈಬರ್ ಕ್ರೈಂ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಹೊಸ ರೀತಿಯ ಖದೀಮ ಕೃತ್ಯ ಇದಾಗಿದ್ದು ಹಣ ಕಳಕೊಂಡವರು ಅಚ್ಚರಿಗೆ ಒಳಗಾಗಿದ್ದಾರೆ.
Online Fraud Hackers have Hacked Money from Two Bank accounts at different places in Mangalore. A case has been registered at the cybercrime police station in Mangalore.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am