ಬ್ರೇಕಿಂಗ್ ನ್ಯೂಸ್
19-04-26 10:20 am HK News Staffer ಕ್ರೈಂ
ಉಳ್ಳಾಲ, ಏ.19: ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದ ಬಾಲಕನೋರ್ವ ಪಕ್ಕದ ನಾಲೆಯೊಂದರ ಕೆಸರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ ನಡೆದಿದೆ.
ಅಂಬ್ಲಮೊಗರು ಗ್ರಾಮದ ಜರಿ ಹೌಸ್ ನಿವಾಸಿ ಶಿವರಾಮ್ ಅವರ ಪುತ್ರ ಸೃಜನ್(17) ಮೃತಪಟ್ಟ ಬಾಲಕ. ಸೃಜನ್ ಫ್ರಥಮ ಪಿಯುಸಿ ಮುಗಿಸಿದ್ದು ಬೇಸಿಗೆ ರಜೆ ಇದ್ದ ಕಾರಣ ಶನಿವಾರ ಮಧ್ಯಾಹ್ನ ತನ್ನ ಮೂವರು ಸ್ನೇಹಿತರೊಂದಿಗೆ ಅಂಬ್ಲಮೊಗರುವಿನ ಖಂಡಿಲ ಎಂಬಲ್ಲಿನ ಖಾಸಗಿ ವಿವಿಗೆ ಸೇರಿದ ಜಮೀನಿನ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದನೆನ್ನಲಾಗಿದೆ. ಬಳಿಕ ಕೈಕಾಲು ತೊಳೆಯಲು ಪಕ್ಕದ ನಾಲೆಯೊಂದಕ್ಕೆ ಸೃಜನ್ ಏಕಾಂಗಿಯಾಗಿ ಇಳಿದಿದ್ದು, ಈ ವೇಳೆ ಆತನ ಕಾಲುಗಳು ನಾಲೆಯ ಕೆಸರಿನಲ್ಲಿ ಮುಳುಗಿವೆ. ಸೃಜನ್ ನನ್ನು ಮತ್ತೋರ್ವ ಸ್ನೇಹಿತ ರಕ್ಷಿಸಲು ಪ್ರಯತ್ನಿಸಿದ್ದು ಆತನೂ ಕೆಸರಿನಲ್ಲಿ ಮುಳುಗುತ್ತಾನೆ ಎಂದಾಗ ಉಳಿದ ಸ್ನೇಹಿತರು ಆತನನ್ನ ಎಳೆದು ರಕ್ಷಿಸಿದ್ದಾರೆ.
ಘಟನೆಯಿಂದ ಆಘಾತಕ್ಕೊಳಗಾದ ಬಾಲಕರು ವಿಚಾರವನ್ನು ಯಾರಲ್ಲೂ ತಿಳಿಸದೆ ತಮ್ಮ ಮನೆ ಸೇರಿದ್ದರು. ರಾತ್ರಿ 8 ಗಂಟೆಯಾದರೂ ಸೃಜನ್ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿ ಸ್ನೇಹಿತರಲ್ಲಿ ವಿಚಾರಿಸಿದಾಗ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಲಭಿಸಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಕೊಣಾಜೆ ಪೊಲೀಸರು ಧಾವಿಸಿ ಸೃಜನ್ ಗಾಗಿ ನಾಲೆಯಲ್ಲಿ ಶೋಧ ನಡೆಸಿದ್ದಾರೆ. ನಾಲೆಯಲ್ಲಿ ಭಾರೀ ಹೂಳು ತುಂಬಿದ್ದರಿಂದ ರಕ್ಷಣಾ ಕಾರ್ಯವೂ ಕಷ್ಟವಾಗಿತ್ತು. ರಾತ್ರಿ ವೇಳೆ ನಿರ್ಜನ ಪ್ರದೇಶದಲ್ಲಿ ರಕ್ಷಣಾ ಕಾರ್ಯಕ್ಕೆ ಬೆಳಕಿನ ವ್ಯವಸ್ಥೆಯೂ ಇಲ್ಲದ ಕಾರಣ ಟಿಪ್ಪರ್ ಲಾರಿಗಳ ಹೆಡ್ ಲೈಟ್ ಸಹಾಯದಿಂದ ಮಧ್ಯರಾತ್ರಿ ವರೆಗೂ ಕಾರ್ಯಾಚರಣೆ ನಡೆಸಲಾಗಿತ್ತು. ಉತ್ತರ ಭಾರತದ ನುರಿತ ಕಾರ್ಮಿಕರು ಹರಸಾಹಸ ಪಟ್ಟು ಕೊನೆಗೂ ಮಧ್ಯರಾತ್ರಿ ಬಾಲಕನ ಮೃತದೇಹವನ್ನ ನಾಲೆಯಿಂದ ಮೇಲಕ್ಕೆತ್ತಿದ್ದಾರೆ.
ಮೃತ ಸೃಜನ್ ತಂದೆ ರಿಕ್ಷಾ ಚಾಲಕರಾಗಿದ್ದು, ತಾಯಿ ಜಯಲಕ್ಷ್ಮಿ ಅಂಬ್ಲಮೊಗರು ಗಾಂಧಿನಗರದ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿದ್ದಾರೆ. ದಂಪತಿಗೆ ಸೃಜನ್ ಹಿರಿಯ ಮಗನಾಗಿದ್ದು, ಮತ್ತೋರ್ವ ಮಗಳು ಇದ್ದಾಳೆ. ಕೊಣಾಜೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm