ಬ್ರೇಕಿಂಗ್ ನ್ಯೂಸ್
19-04-26 10:20 am HK News Staffer ಕ್ರೈಂ
ಉಳ್ಳಾಲ, ಏ.19: ಬೇಸಿಗೆ ರಜೆಯಲ್ಲಿ ಸ್ನೇಹಿತರೊಂದಿಗೆ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದ ಬಾಲಕನೋರ್ವ ಪಕ್ಕದ ನಾಲೆಯೊಂದರ ಕೆಸರಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಅಂಬ್ಲಮೊಗರು ಗ್ರಾಮದ ಖಂಡಿಲ ಎಂಬಲ್ಲಿ ನಡೆದಿದೆ.
ಅಂಬ್ಲಮೊಗರು ಗ್ರಾಮದ ಜರಿ ಹೌಸ್ ನಿವಾಸಿ ಶಿವರಾಮ್ ಅವರ ಪುತ್ರ ಸೃಜನ್(17) ಮೃತಪಟ್ಟ ಬಾಲಕ. ಸೃಜನ್ ಫ್ರಥಮ ಪಿಯುಸಿ ಮುಗಿಸಿದ್ದು ಬೇಸಿಗೆ ರಜೆ ಇದ್ದ ಕಾರಣ ಶನಿವಾರ ಮಧ್ಯಾಹ್ನ ತನ್ನ ಮೂವರು ಸ್ನೇಹಿತರೊಂದಿಗೆ ಅಂಬ್ಲಮೊಗರುವಿನ ಖಂಡಿಲ ಎಂಬಲ್ಲಿನ ಖಾಸಗಿ ವಿವಿಗೆ ಸೇರಿದ ಜಮೀನಿನ ಕೆರೆಯಲ್ಲಿ ನೀರಾಟವಾಡಲು ತೆರಳಿದ್ದನೆನ್ನಲಾಗಿದೆ. ಬಳಿಕ ಕೈಕಾಲು ತೊಳೆಯಲು ಪಕ್ಕದ ನಾಲೆಯೊಂದಕ್ಕೆ ಸೃಜನ್ ಏಕಾಂಗಿಯಾಗಿ ಇಳಿದಿದ್ದು, ಈ ವೇಳೆ ಆತನ ಕಾಲುಗಳು ನಾಲೆಯ ಕೆಸರಿನಲ್ಲಿ ಮುಳುಗಿವೆ. ಸೃಜನ್ ನನ್ನು ಮತ್ತೋರ್ವ ಸ್ನೇಹಿತ ರಕ್ಷಿಸಲು ಪ್ರಯತ್ನಿಸಿದ್ದು ಆತನೂ ಕೆಸರಿನಲ್ಲಿ ಮುಳುಗುತ್ತಾನೆ ಎಂದಾಗ ಉಳಿದ ಸ್ನೇಹಿತರು ಆತನನ್ನ ಎಳೆದು ರಕ್ಷಿಸಿದ್ದಾರೆ.
ಘಟನೆಯಿಂದ ಆಘಾತಕ್ಕೊಳಗಾದ ಬಾಲಕರು ವಿಚಾರವನ್ನು ಯಾರಲ್ಲೂ ತಿಳಿಸದೆ ತಮ್ಮ ಮನೆ ಸೇರಿದ್ದರು. ರಾತ್ರಿ 8 ಗಂಟೆಯಾದರೂ ಸೃಜನ್ ಮನೆಗೆ ಮರಳದ ಹಿನ್ನೆಲೆಯಲ್ಲಿ ಕುಟುಂಬದವರು ಹುಡುಕಾಟ ನಡೆಸಿ ಸ್ನೇಹಿತರಲ್ಲಿ ವಿಚಾರಿಸಿದಾಗ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಲಭಿಸಿದೆ. ಕೂಡಲೇ ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ, ಕೊಣಾಜೆ ಪೊಲೀಸರು ಧಾವಿಸಿ ಸೃಜನ್ ಗಾಗಿ ನಾಲೆಯಲ್ಲಿ ಶೋಧ ನಡೆಸಿದ್ದಾರೆ. ನಾಲೆಯಲ್ಲಿ ಭಾರೀ ಹೂಳು ತುಂಬಿದ್ದರಿಂದ ರಕ್ಷಣಾ ಕಾರ್ಯವೂ ಕಷ್ಟವಾಗಿತ್ತು. ರಾತ್ರಿ ವೇಳೆ ನಿರ್ಜನ ಪ್ರದೇಶದಲ್ಲಿ ರಕ್ಷಣಾ ಕಾರ್ಯಕ್ಕೆ ಬೆಳಕಿನ ವ್ಯವಸ್ಥೆಯೂ ಇಲ್ಲದ ಕಾರಣ ಟಿಪ್ಪರ್ ಲಾರಿಗಳ ಹೆಡ್ ಲೈಟ್ ಸಹಾಯದಿಂದ ಮಧ್ಯರಾತ್ರಿ ವರೆಗೂ ಕಾರ್ಯಾಚರಣೆ ನಡೆಸಲಾಗಿತ್ತು. ಉತ್ತರ ಭಾರತದ ನುರಿತ ಕಾರ್ಮಿಕರು ಹರಸಾಹಸ ಪಟ್ಟು ಕೊನೆಗೂ ಮಧ್ಯರಾತ್ರಿ ಬಾಲಕನ ಮೃತದೇಹವನ್ನ ನಾಲೆಯಿಂದ ಮೇಲಕ್ಕೆತ್ತಿದ್ದಾರೆ.
ಮೃತ ಸೃಜನ್ ತಂದೆ ರಿಕ್ಷಾ ಚಾಲಕರಾಗಿದ್ದು, ತಾಯಿ ಜಯಲಕ್ಷ್ಮಿ ಅಂಬ್ಲಮೊಗರು ಗಾಂಧಿನಗರದ ಅಂಗನವಾಡಿಯಲ್ಲಿ ಶಿಕ್ಷಕಿಯಾಗಿದ್ದಾರೆ. ದಂಪತಿಗೆ ಸೃಜನ್ ಹಿರಿಯ ಮಗನಾಗಿದ್ದು, ಮತ್ತೋರ್ವ ಮಗಳು ಇದ್ದಾಳೆ. ಕೊಣಾಜೆ ಪೊಲೀಸರು ಯುಡಿಆರ್ ಪ್ರಕರಣ ದಾಖಲಿಸಿಕೊಂಡಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm