ಬ್ರೇಕಿಂಗ್ ನ್ಯೂಸ್
20-04-26 03:44 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 20: ಮಂಗಳೂರು ನಗರ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ವಿರುದ್ಧ ಗಂಭೀರ ಆರೋಪಗಳನ್ನು ಉಲ್ಲೇಖಿಸಿ ಡಿಸಿಐಆರ್ ಎಸ್ಪಿ ಎಸ್.ಎಸ್ ಕಾಶಿ ಅವರು ಡಿಜಿಪಿ ಸಲೀಂ ಅವರಿಗೆ ಲಿಖಿತ ದೂರು ನೀಡಿದ್ದಾರೆ. ಮಾನಸಿಕ ಕಿರುಕುಳ, ದರ್ಪ ಹಾಗೂ ತಾರತಮ್ಯ ಆರೋಪಗಳನ್ನು ಮಾಡಿ ದೂರು ಸಲ್ಲಿಸಿದ್ದಾರೆ.
"ನೀವು 30 ನಿಮಿಷ ಸಮಯ ನೀಡಿದರೆ ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿಯ ಎಲ್ಲ ಕರ್ಮಕಾಂಡವನ್ನು ಸಂಪೂರ್ಣ ಬಯಲು ಮಾಡುತ್ತೇನೆ” ಎಂದು ದೂರಿನಲ್ಲಿ ಹೇಳಿದ್ದು ಪ್ರಕರಣ ಕುತೂಹಲ ತಂದಿದೆ. ಇಲಾಖೆಯಲ್ಲಿ ಅಧೀನ ಅಧಿಕಾರಿಗಳು ತಮ್ಮ ಮಾತಿನಂತೆ ಕೆಲಸ ಮಾಡದಿದ್ದರೆ ಮೆಮೊ ನೀಡುವುದರ ಮೂಲಕ ಮಾನಸಿಕ ಹಿಂಸೆ ನೀಡಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.
ಇದಲ್ಲದೆ, ಕನ್ನಡಿಗ ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಕಿರುಕುಳ ನೀಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಕಾಶಿ, ಈ ಕುರಿತು ಹಲವು ಬಾರಿ ಲಿಖಿತ ದೂರು ನೀಡಿದ್ದರೂ ಕ್ರಮ ಕೈಗೊಳ್ಳಲಾಗಿಲ್ಲ ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಐಪಿಎಸ್ ಅಧಿಕಾರಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿ ಕೆಳಹಂತದ ಸಿಬ್ಬಂದಿ ಮೇಲೆ ದರ್ಪ, ತಾರತಮ್ಯ ಹಾಗೂ ಸ್ವಜನಪಕ್ಷಪಾತ ತೋರಿಸುತ್ತಿದ್ದಾರೆ. ವಿಶೇಷವಾಗಿ ಹೊರ ರಾಜ್ಯಗಳಿಂದ ಬಂದು ಕರ್ನಾಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಕೆಲ ಅಧಿಕಾರಿಗಳು ಕನ್ನಡಿಗ ಅಧಿಕಾರಿಗಳನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿದ್ದಾರೆ ಎಂದೂ ಅವರು ತಮ್ಮ ದೂರಿನಲ್ಲಿ ತಿಳಿಸಿದ್ದಾರೆ.
ಮಂಗಳೂರು ಕಮಿಷನರ್ ವಿರುದ್ಧದ ಆರೋಪಗಳು, ಅಧೀನ ಸಿಬ್ಬಂದಿಗೆ ನೀಡಿದ ಕಿರುಕುಳ ಹಾಗೂ ಇತರೇ ದೌರ್ಜನ್ಯಗಳ ಕುರಿತಾಗಿ ವಿವರವಾಗಿ ಹೇಳಲು ಒಂದು ವಾರದೊಳಗೆ ಭೇಟಿಗೆ ಅವಕಾಶ ನೀಡುವಂತೆ ಡಿಜಿಪಿಗೆ ಎಸ್ಪಿ ಕಾಶಿ ಮನವಿ ಮಾಡಿದ್ದಾರೆ. ಈ ಬೆಳವಣಿಗೆ ಪೊಲೀಸ್ ಇಲಾಖೆಯಲ್ಲಿ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಕ್ರಮಗಳತ್ತ ಎಲ್ಲರ ಗಮನ ಸೆಳೆದಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm