ಬ್ರೇಕಿಂಗ್ ನ್ಯೂಸ್
20-04-26 09:35 pm HK News Staffer ಕ್ರೈಂ
ಬೀದರ್, ಎಪ್ರಿಲ್ 20: ಬಿರು ಬಿಸಿಲಿನ ಝಳಕ್ಕೆ ಬೀದರ್ನಲ್ಲಿ 20 ವರ್ಷದ ಯುವಕನೊಬ್ಬ ಬಲಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಿಸಿಲಿನ ತಾಪಮಾನ ತಾಳಲಾರದೇ ಉತ್ತರ ಪ್ರದೇಶ ಮೂಲದ ಮಹ್ಮದ್ (20) ಎಂಬ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಬೀದರ್ ಜಿಲ್ಲೆಯ ಕಮಲಾನಗರ ಪಟ್ಟಣದಲ್ಲಿ ಎಪ್ರಿಲ್ 14ರಂದು ಘಟನೆ ನಡೆದಿದೆ. ಡಿಗ್ಗಿ - ಕಮಲಾನಗರ ರಸ್ತೆ ಮಧ್ಯೆ ಬಿರು ಬಿಸಿಲಿಗೆ ತಲೆಯೊಡ್ಡಿ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸಿಪಿಐ ಶ್ರೀಕಾಂತ್ ಅಲ್ಲಾಪುರೆ, ಪಿಎಸ್ಐ ಆಶಾ ರಾಠೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುಪಿ ಮೂಲದ ಮಿರ್ಜಾಪುರ ಪಲ್ಲಾದ ನಿವಾಸಿಯಾಗಿದ್ದು ನಡೆದುಕೊಂಡು ಹೋಗುವಾಗ ತಲೆ ಸುಸ್ತು ಬರುತ್ತಿದೆ ಎಂದು ದಾರಿಯಲ್ಲಿದ್ದ ಮೆಕ್ಯಾನಿಕ್ ಅಂಗಡಿಯಲ್ಲಿ ನೀರು ಕೇಳಿ ಕುಡಿದಿದ್ದ. ಚಕ್ಕರ್ ಬರುತ್ತಿದೆ ಎಂದು ಕೆಲಹೊತ್ತು ವಿಶ್ರಾಂತಿ ಪಡೆದು, ನಂತರ ಡಿಗ್ಗಿ ಗ್ರಾಮದ ಕಡೆ ನಡೆದು ತೆರಳಿದ್ದ. ಮೃತ ಯುವಕನ ತಂದೆ ಲಯಿಕ್ ಅಹ್ಮದ್ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಎಪ್ರಿಲ್ 12ರಂದು ಕಮಲಾನಗರ ಪಟ್ಟಣಕ್ಕೆ ಬಂದಿದ್ದ. 14ರಂದು ತರಕಾರಿ ತರಲೆಂದು ತೆರಳಿದ್ದ ವೇಳೆ ನಾಪತ್ತೆಯಾಗಿದ್ದು, 15ರಂದು ರಸ್ತೆ ಬದಿ ಬಿದ್ದು ಶವವಾಗಿ ಪತ್ತೆಯಾಗಿದ್ದಾನೆ. ಬೀದರಿನಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು ಜನಸಾಮಾನ್ಯರು ಹೊರಕ್ಕೆ ಬರಲಾಗದ ಸ್ಥಿತಿಗೆ ತಲುಪಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am