ಬ್ರೇಕಿಂಗ್ ನ್ಯೂಸ್
20-04-26 09:35 pm HK News Staffer ಕ್ರೈಂ
ಬೀದರ್, ಎಪ್ರಿಲ್ 20: ಬಿರು ಬಿಸಿಲಿನ ಝಳಕ್ಕೆ ಬೀದರ್ನಲ್ಲಿ 20 ವರ್ಷದ ಯುವಕನೊಬ್ಬ ಬಲಿಯಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಬಿಸಿಲಿನ ತಾಪಮಾನ ತಾಳಲಾರದೇ ಉತ್ತರ ಪ್ರದೇಶ ಮೂಲದ ಮಹ್ಮದ್ (20) ಎಂಬ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.
ಬೀದರ್ ಜಿಲ್ಲೆಯ ಕಮಲಾನಗರ ಪಟ್ಟಣದಲ್ಲಿ ಎಪ್ರಿಲ್ 14ರಂದು ಘಟನೆ ನಡೆದಿದೆ. ಡಿಗ್ಗಿ - ಕಮಲಾನಗರ ರಸ್ತೆ ಮಧ್ಯೆ ಬಿರು ಬಿಸಿಲಿಗೆ ತಲೆಯೊಡ್ಡಿ ಯುವಕ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಸಿಪಿಐ ಶ್ರೀಕಾಂತ್ ಅಲ್ಲಾಪುರೆ, ಪಿಎಸ್ಐ ಆಶಾ ರಾಠೋಡ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಯುಪಿ ಮೂಲದ ಮಿರ್ಜಾಪುರ ಪಲ್ಲಾದ ನಿವಾಸಿಯಾಗಿದ್ದು ನಡೆದುಕೊಂಡು ಹೋಗುವಾಗ ತಲೆ ಸುಸ್ತು ಬರುತ್ತಿದೆ ಎಂದು ದಾರಿಯಲ್ಲಿದ್ದ ಮೆಕ್ಯಾನಿಕ್ ಅಂಗಡಿಯಲ್ಲಿ ನೀರು ಕೇಳಿ ಕುಡಿದಿದ್ದ. ಚಕ್ಕರ್ ಬರುತ್ತಿದೆ ಎಂದು ಕೆಲಹೊತ್ತು ವಿಶ್ರಾಂತಿ ಪಡೆದು, ನಂತರ ಡಿಗ್ಗಿ ಗ್ರಾಮದ ಕಡೆ ನಡೆದು ತೆರಳಿದ್ದ. ಮೃತ ಯುವಕನ ತಂದೆ ಲಯಿಕ್ ಅಹ್ಮದ್ ನೀಡಿದ ದೂರಿನ ಮೇರೆಗೆ ಕಮಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಎಪ್ರಿಲ್ 12ರಂದು ಕಮಲಾನಗರ ಪಟ್ಟಣಕ್ಕೆ ಬಂದಿದ್ದ. 14ರಂದು ತರಕಾರಿ ತರಲೆಂದು ತೆರಳಿದ್ದ ವೇಳೆ ನಾಪತ್ತೆಯಾಗಿದ್ದು, 15ರಂದು ರಸ್ತೆ ಬದಿ ಬಿದ್ದು ಶವವಾಗಿ ಪತ್ತೆಯಾಗಿದ್ದಾನೆ. ಬೀದರಿನಲ್ಲಿ 45 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು ಜನಸಾಮಾನ್ಯರು ಹೊರಕ್ಕೆ ಬರಲಾಗದ ಸ್ಥಿತಿಗೆ ತಲುಪಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm