ಬ್ರೇಕಿಂಗ್ ನ್ಯೂಸ್
22-04-26 02:06 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರು ನಗರದ ಕೆಲವು ಭಾಗಗಳಲ್ಲಿ ಮಿಂಚು, ಸಿಡಿಲಿನ ಆರ್ಭಟದೊಂದಿಗೆ ಗಾಳಿ ಮಳೆಯಾಗಿದ್ದು ಕೆಲವೆಡೆ ಅವಾಂತರ ಸಂಭವಿಸಿದೆ.
ನಗರದ ಅತ್ತಾವರ ಪ್ರದೇಶದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪ ಕಂಪೌಂಡ್ ಗೋಡೆ ಕುಸಿದು ಅಲ್ಲಿಯೇ ನಿಲ್ಲಿಸಿದ್ದ 5ಕ್ಕೂ ಹೆಚ್ಚು ಕಾರುಗಳ ಮೇಲೆ ಕಲ್ಲುಗಳು ಬಿದ್ದು ಜಖಂಗೊಂಡಿವೆ. ದೇವಸ್ಥಾನದಲ್ಲಿ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದರಿಂದ ಗೋಡೆ ಪಕ್ಕದಲ್ಲಿ ಸ್ಥಳೀಯರು ತಮ್ಮ ಕಾರುಗಳನ್ನು ಪಾರ್ಕ್ ಮಾಡಿದ್ದರು. ಬೇಸಗೆಯ ಒಂದೇ ಮಳೆಯಲ್ಲಿ ತಡೆಗೋಡೆ ಕುಸಿದಿದ್ದು ಕಲ್ಲಿನ ಸಮೇತ ಪಾರ್ಕಿಂಗ್ ಪ್ರದೇಶಕ್ಕೆ ಬಿದ್ದಿದೆ. ಏಕಾಏಕಿ ನಡೆದಿರುವ ಘಟನೆಯಿಂದಾಗಿ ಕಾರಿನ ಮಾಲೀಕರು ಸಂಕಷ್ಟಕ್ಕೀಡಾಗಿದ್ದಾರೆ.




ಇದೇ ವೇಳೆ, ಗಾಳಿ ಮಳೆಗೆ ಬೃಹತ್ ಅಶ್ವತ್ಥ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮನೆ ಭಾಗಶಃ ಹಾನಿಯಾದ ಘಟನೆ ನಗರದ ರಥಬೀದಿ ಬಳಿಯ ಬಸವನಗುಡಿ ಮಠದ ಬಳಿಯಲ್ಲಿ ನಡೆದಿದೆ. ಮನೆಗೆ ಹಾನಿಯಾಗಿದ್ದು ಹಂಚಿನ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ 80 ವರ್ಷದ ಇಬ್ಬರು ವೃದ್ಧರು ಸಹಿತ ಐದಾರು ಜನ ಅಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವರಿಗೆ ಸೇರಿದ ಮನೆ ಇದಾಗಿದೆ.
ಬುಧವಾರ ನಸುಕಿನಲ್ಲಿ ಮಂಗಳೂರು ನಗರದ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಸಿಡಿಲಿನ ಆರ್ಭಟ ಮಾತ್ರ ಎಲ್ಲೆಡೆ ಇತ್ತು. ಕದ್ರಿ, ಉರ್ವಾ ಭಾಗದಲ್ಲಿ ಮಳೆಯಾಗಿದ್ದರೆ ಶಕ್ತಿನಗರ ಭಾಗದಲ್ಲಿ ಮಳೆಯಾಗಿಲ್ಲ ಎಂದು ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm