ಬ್ರೇಕಿಂಗ್ ನ್ಯೂಸ್
22-04-26 02:06 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರು ನಗರದ ಕೆಲವು ಭಾಗಗಳಲ್ಲಿ ಮಿಂಚು, ಸಿಡಿಲಿನ ಆರ್ಭಟದೊಂದಿಗೆ ಗಾಳಿ ಮಳೆಯಾಗಿದ್ದು ಕೆಲವೆಡೆ ಅವಾಂತರ ಸಂಭವಿಸಿದೆ.
ನಗರದ ಅತ್ತಾವರ ಪ್ರದೇಶದಲ್ಲಿರುವ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಸಮೀಪ ಕಂಪೌಂಡ್ ಗೋಡೆ ಕುಸಿದು ಅಲ್ಲಿಯೇ ನಿಲ್ಲಿಸಿದ್ದ 5ಕ್ಕೂ ಹೆಚ್ಚು ಕಾರುಗಳ ಮೇಲೆ ಕಲ್ಲುಗಳು ಬಿದ್ದು ಜಖಂಗೊಂಡಿವೆ. ದೇವಸ್ಥಾನದಲ್ಲಿ ಬ್ರಹ್ಮಕಲಶ ಕಾರ್ಯಕ್ರಮಕ್ಕೆ ಸಿದ್ಧತೆ ನಡೆಯುತ್ತಿದ್ದರಿಂದ ಗೋಡೆ ಪಕ್ಕದಲ್ಲಿ ಸ್ಥಳೀಯರು ತಮ್ಮ ಕಾರುಗಳನ್ನು ಪಾರ್ಕ್ ಮಾಡಿದ್ದರು. ಬೇಸಗೆಯ ಒಂದೇ ಮಳೆಯಲ್ಲಿ ತಡೆಗೋಡೆ ಕುಸಿದಿದ್ದು ಕಲ್ಲಿನ ಸಮೇತ ಪಾರ್ಕಿಂಗ್ ಪ್ರದೇಶಕ್ಕೆ ಬಿದ್ದಿದೆ. ಏಕಾಏಕಿ ನಡೆದಿರುವ ಘಟನೆಯಿಂದಾಗಿ ಕಾರಿನ ಮಾಲೀಕರು ಸಂಕಷ್ಟಕ್ಕೀಡಾಗಿದ್ದಾರೆ.




ಇದೇ ವೇಳೆ, ಗಾಳಿ ಮಳೆಗೆ ಬೃಹತ್ ಅಶ್ವತ್ಥ ಮರವೊಂದು ಮನೆಯ ಮೇಲೆ ಉರುಳಿ ಬಿದ್ದು ಮನೆ ಭಾಗಶಃ ಹಾನಿಯಾದ ಘಟನೆ ನಗರದ ರಥಬೀದಿ ಬಳಿಯ ಬಸವನಗುಡಿ ಮಠದ ಬಳಿಯಲ್ಲಿ ನಡೆದಿದೆ. ಮನೆಗೆ ಹಾನಿಯಾಗಿದ್ದು ಹಂಚಿನ ಮನೆಯಲ್ಲಿದ್ದ 4 ತಿಂಗಳ ಮಗು ಹಾಗೂ 80 ವರ್ಷದ ಇಬ್ಬರು ವೃದ್ಧರು ಸಹಿತ ಐದಾರು ಜನ ಅಪಾಯದಿಂದ ಪಾರಾಗಿದ್ದಾರೆ. ವರದರಾಜ್ ಶೇಟ್ ಎಂಬುವರಿಗೆ ಸೇರಿದ ಮನೆ ಇದಾಗಿದೆ.
ಬುಧವಾರ ನಸುಕಿನಲ್ಲಿ ಮಂಗಳೂರು ನಗರದ ಕೆಲವು ಕಡೆಗಳಲ್ಲಿ ಮಾತ್ರ ಮಳೆಯಾಗಿದೆ. ಸಿಡಿಲಿನ ಆರ್ಭಟ ಮಾತ್ರ ಎಲ್ಲೆಡೆ ಇತ್ತು. ಕದ್ರಿ, ಉರ್ವಾ ಭಾಗದಲ್ಲಿ ಮಳೆಯಾಗಿದ್ದರೆ ಶಕ್ತಿನಗರ ಭಾಗದಲ್ಲಿ ಮಳೆಯಾಗಿಲ್ಲ ಎಂದು ಅಲ್ಲಿನ ಸ್ಥಳೀಯರು ತಿಳಿಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm