ಬ್ರೇಕಿಂಗ್ ನ್ಯೂಸ್
22-04-26 02:15 pm HK News Staffer ಕ್ರೈಂ
ಮಡಿಕೇರಿ, ಎಪ್ರಿಲ್ 22: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ವಿರಾಜಪೇಟೆ ತಾಲೂಕಿನ ಕುಟ್ಟ ಎಂಬಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ರೆಸಾರ್ಟ್ ಒಂದರಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದ್ದು ಘಟನೆ ಹಿನ್ನೆಲೆಯಲ್ಲಿ ಪೊಲೀಸರು ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಅಮೆರಿಕದ ವಾಷಿಂಗ್ಟನ್ ನಗರದಿಂದ ಪ್ರವಾಸ ಬಂದಿದ್ದ ಮಹಿಳೆಗೆ ಮತ್ತು ಬರುವ ಜ್ಯೂಸ್ ಕೊಟ್ಟು ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬ ಕಾರ್ಮಿಕ ಕೃತ್ಯ ಎಸಗಿದವನಾಗಿದ್ದು ಮತ್ತು ಹೋಂಸ್ಟೇ ಮಾಲೀಕ ವಿಶಾಲ್ ಎಂಬ ಇಬ್ಬರನ್ನೂ ಬಂಧಿಸಲಾಗಿದೆ.
ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ತಂಗಿದ್ದರು. ಈ ವೇಳೆ ಅಲ್ಲಿದ್ದ ಜಾರ್ಖಂಡ್ ಮೂಲದ ವ್ಯಕ್ತಿ ವೃಜೇಶ್ ಕುಮಾರ್ ಸಿಹಿ ಪಾನಕಕ್ಕೆ ಮತ್ತು ಬರುವ ಔಷಧಿ ಬೆರಸಿ ಮಹಿಳೆಗೆ ನೀಡಿದ್ದಾನೆ. ಆಕೆ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ಎಗಿದ್ದಾನೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ.
ವಿಷಯ ತಿಳಿದ ಹೋಮ್ಸ್ಟೇ ಮಾಲೀಕ ವಿಶಾಲ್ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದು ಮೂರು ದಿನಗಳ ಕಾಲ ಸಂತ್ರಸ್ತೆ ಯಾರನ್ನೂ ಸಂಪರ್ಕ ಮಾಡದಂತೆ ತಡೆದಿದ್ದ. ಹೋಂ ಸ್ಟೇಯಲ್ಲಿದ್ದ ವೈಫೈಯನ್ನೂ ಕಡಿತ ಮಾಡಿದ್ದ. ಮೂರು ದಿನದ ಬಳಿಕ ಸಂತ್ರಸ್ತ ಯುವತಿ ಮೈಸೂರಿಗೆ ಹೋಗುವುದಾಗಿ ಹೇಳಿ ಹೊರಟಿದ್ದರು. ಮೈಸೂರಿಗೆ ತೆರಳಿದ ನಂತರ ಅಮೆರಿಕದ ರಾಯಭಾರ ಕಚೇರಿಯನ್ನ ಸಂಪರ್ಕಿಸಿ, ಮಾಹಿತಿ ನೀಡಿದ್ದಾರೆ. ಬಳಿಕ ಇ-ಮೇಲ್ ಮೂಲಕ ಮೈಸೂರಿನ ಅಧಿಕಾರಿಗಳನ್ನ ಸಂಪರ್ಕಿಸಿದ ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳು ಪ್ರಕರಣ ದಾಖಲಿಸಲು ಹೇಳಿದ್ದಾರೆ. ಅಧಿಕಾರಿಗಳ ಸೂಚನೆ ಮೇರೆಗೆ ಮೈಸೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ದೆಹಲಿ ಹಾಗೂ ಚೆನ್ನೈನಿಂದ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm