ಬ್ರೇಕಿಂಗ್ ನ್ಯೂಸ್
22-04-26 02:15 pm HK News Staffer ಕ್ರೈಂ
ಮಡಿಕೇರಿ, ಎಪ್ರಿಲ್ 22: ಕೊಡಗು ಜಿಲ್ಲೆಯ ಕೇರಳ ಗಡಿಭಾಗ ವಿರಾಜಪೇಟೆ ತಾಲೂಕಿನ ಕುಟ್ಟ ಎಂಬಲ್ಲಿ ಅಮೆರಿಕ ಮೂಲದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಘಟನೆ ರೆಸಾರ್ಟ್ ಒಂದರಲ್ಲಿ ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದ್ದು ಘಟನೆ ಹಿನ್ನೆಲೆಯಲ್ಲಿ ಪೊಲೀಸರು ರೆಸಾರ್ಟ್ ಮಾಲೀಕ ಸೇರಿ ಇಬ್ಬರನ್ನು ಬಂಧಿಸಿದ್ದಾರೆ.
ಅಮೆರಿಕದ ವಾಷಿಂಗ್ಟನ್ ನಗರದಿಂದ ಪ್ರವಾಸ ಬಂದಿದ್ದ ಮಹಿಳೆಗೆ ಮತ್ತು ಬರುವ ಜ್ಯೂಸ್ ಕೊಟ್ಟು ಅತ್ಯಾಚಾರ ಎಸಗಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಜಾರ್ಖಂಡ್ ಮೂಲದ ವೃಜೇಶ್ ಕುಮಾರ್ ಎಂಬ ಕಾರ್ಮಿಕ ಕೃತ್ಯ ಎಸಗಿದವನಾಗಿದ್ದು ಮತ್ತು ಹೋಂಸ್ಟೇ ಮಾಲೀಕ ವಿಶಾಲ್ ಎಂಬ ಇಬ್ಬರನ್ನೂ ಬಂಧಿಸಲಾಗಿದೆ.
ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಕುಟ್ಟ ಗ್ರಾಮದ ದೇವಿ ವಿಲ್ಲಾ ಹೋಂ ಸ್ಟೇನಲ್ಲಿ ತಂಗಿದ್ದರು. ಈ ವೇಳೆ ಅಲ್ಲಿದ್ದ ಜಾರ್ಖಂಡ್ ಮೂಲದ ವ್ಯಕ್ತಿ ವೃಜೇಶ್ ಕುಮಾರ್ ಸಿಹಿ ಪಾನಕಕ್ಕೆ ಮತ್ತು ಬರುವ ಔಷಧಿ ಬೆರಸಿ ಮಹಿಳೆಗೆ ನೀಡಿದ್ದಾನೆ. ಆಕೆ ಪ್ರಜ್ಞೆ ತಪ್ಪಿದ ಬಳಿಕ ಅತ್ಯಾಚಾರ ಎಗಿದ್ದಾನೆ ಎಂದು ಸಂತ್ರಸ್ತೆ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ.
ವಿಷಯ ತಿಳಿದ ಹೋಮ್ಸ್ಟೇ ಮಾಲೀಕ ವಿಶಾಲ್ ಪ್ರಕರಣ ಮುಚ್ಚಿಹಾಕಲು ಯತ್ನಿಸಿದ್ದು ಮೂರು ದಿನಗಳ ಕಾಲ ಸಂತ್ರಸ್ತೆ ಯಾರನ್ನೂ ಸಂಪರ್ಕ ಮಾಡದಂತೆ ತಡೆದಿದ್ದ. ಹೋಂ ಸ್ಟೇಯಲ್ಲಿದ್ದ ವೈಫೈಯನ್ನೂ ಕಡಿತ ಮಾಡಿದ್ದ. ಮೂರು ದಿನದ ಬಳಿಕ ಸಂತ್ರಸ್ತ ಯುವತಿ ಮೈಸೂರಿಗೆ ಹೋಗುವುದಾಗಿ ಹೇಳಿ ಹೊರಟಿದ್ದರು. ಮೈಸೂರಿಗೆ ತೆರಳಿದ ನಂತರ ಅಮೆರಿಕದ ರಾಯಭಾರ ಕಚೇರಿಯನ್ನ ಸಂಪರ್ಕಿಸಿ, ಮಾಹಿತಿ ನೀಡಿದ್ದಾರೆ. ಬಳಿಕ ಇ-ಮೇಲ್ ಮೂಲಕ ಮೈಸೂರಿನ ಅಧಿಕಾರಿಗಳನ್ನ ಸಂಪರ್ಕಿಸಿದ ಅಮೆರಿಕ ರಾಯಭಾರ ಕಚೇರಿ ಅಧಿಕಾರಿಗಳು ಪ್ರಕರಣ ದಾಖಲಿಸಲು ಹೇಳಿದ್ದಾರೆ. ಅಧಿಕಾರಿಗಳ ಸೂಚನೆ ಮೇರೆಗೆ ಮೈಸೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬೆಳಕಿಗೆ ಬಂದ ನಂತರ ದೆಹಲಿ ಹಾಗೂ ಚೆನ್ನೈನಿಂದ ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ಮಾಹಿತಿ ಕೇಳಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm