ಬ್ರೇಕಿಂಗ್ ನ್ಯೂಸ್
22-04-26 04:02 pm HK News Staffer ಕ್ರೈಂ
ಮಂಗಳೂರು, ಎಪ್ರಿಲ್ 22: ಕ್ಷುಲ್ಲಕ್ಕ ಕಾರಣಕ್ಕೆ ನೆರೆಕರೆ ಮನೆಯವರು ತಲವಾರು, ದೊಣ್ಣೆ ಹಿಡಿದು ಮಾರಾಮಾರಿ ನಡೆಸಿದ ಘಟನೆ ನಗರದ ಬಂದರು ಠಾಣೆ ವ್ಯಾಪ್ತಿಯ ಬಜಿಲಕರಿಯದಲ್ಲಿ ನಡೆದಿದೆ.
ತಲವಾರು, ರಾಡು, ಕಲ್ಲುಗಳನ್ನು ಹಿಡಿದು ಪರಸ್ಪರ ಹಲ್ಲೆ, ಬೀದಿ ಜಗಳ ಮಾಡಿದ್ದಾರೆ. ಘಟನೆಯ ವಿಡಿಯೋವನ್ನು ಅವರೇ ಮಾಡಿಕೊಂಡಿದ್ದು ಜಾಲತಾಣದಲ್ಲಿ ಲೀಕ್ ಆಗಿದೆ. ಘಟನೆ ಸಂಬಂಧಿಸಿ ಬಂದರು ಠಾಣೆಯಲ್ಲಿ ಎರಡೂ ಕುಟುಂಬಗಳು ಪರಸ್ಪರ ದೂರು ನೀಡಿದ್ದಾರೆ. ಪರಸ್ಪರ ಜೀವ ಬೆದರಿಕೆ ಒಡ್ಡಿದ ಬಗ್ಗೆ ಕುಟುಂಬ ಸದಸ್ಯರು ಆರೋಪ ಮಾಡಿದ್ದಾರೆ.


ಘಟನೆಯಲ್ಲಿ ಮಹಿಳೆ ಸೇರಿ ಮೂವರಿಗೆ ಸಣ್ಣಪುಟ್ಟ ಗಾಯವಾಗಿದ್ದು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಅನಿತಾ (51) ಎಂಬವರು ನೀಡಿದ ದೂರಿನ ಮೇರೆಗೆ ಮಹೇಶ್ ಶೆಟ್ಟಿ, ಪ್ರೀತಂ ಶೆಟ್ಟಿ, ಮನೀಶ್ ಶೆಟ್ಟಿ, ಜಿತೇಶ್ ಎಂಬರ ವಿರುದ್ದ ಪ್ರಕರಣ ದಾಖಲಾಗಿದೆ. ಸುನಿತಾ ಶೆಟ್ಟಿ ಎಂಬವರು ನೀಡಿದ ದೂರಿನಂತೆ ತೇಜಸ್, ಲೋಕೇಶ್, ಅನಿತಾ ಎಂಬರ ವಿರುದ್ದ ಪ್ರಕರಣ ದಾಖಲಾಗಿದೆ. BNS 115 (2), 118(1), 351(3) ಅಡಿಯಲ್ಲಿ ಪ್ರಕರಣ ದಾಖಲಿಸಿರುವ ಬಂದರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಗಾಂಜಾ ವಹಿವಾಟು, ಹಣಕಾಸು ವಿಷಯದಲ್ಲಿ ವೈರತ್ವ ಬೆಳೆದು ಹಾಡಹಗಲೇ ತಲವಾರು ಹಿಡಿದು ಬೀದಿ ರಂಪ ಮಾಡಿದ್ದಾರೆ ಎನ್ನಲಾಗುತ್ತಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am