ಬ್ರೇಕಿಂಗ್ ನ್ಯೂಸ್
22-04-26 08:41 pm HK News Staffer ಕ್ರೈಂ
ಪಡುಬಿದ್ರೆ, ಎಪ್ರಿಲ್ 22: ಖಾಸಗಿ ಬಸ್ಸಿನ ಧಾವಂತಕ್ಕೆ ತಂದೆ - ಮಗಳು ಪ್ರಯಾಣಿಸುತ್ತಿದ್ದ ಸ್ಕೂಟರ್ ಸಿಲುಕಿದ್ದರಿಂದ ಎಂಟು ವರ್ಷದ ಪ್ರತಿಭಾನ್ವಿತ ಬಾಲಕಿ ದುರಂತ ಸಾವನ್ನಪ್ಪಿದ ಘಟನೆ ಪಡುಬಿದ್ರೆ ಬಳಿಯ ಕಾಪು ಪೇಟೆಯಲ್ಲಿ ನಡೆದಿದೆ.
ದುಬೈನಲ್ಲಿದ್ದು ಊರಿಗೆ ಮರಳಿದ್ದ ನಿತ್ಯಾನಂದ ಶೆಟ್ಟಿ ಮಗಳ ಜೊತೆಗೆ ಸ್ಕೂಟರಿನಲ್ಲಿ ಕಾಪು ಪೇಟೆಗೆ ಬಂದಿದ್ದರು. ಈ ವೇಳೆ, ಸರ್ವಿಸ್ ರಸ್ತೆಯಿಂದ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿ ಬಂದ ಉಡುಪಿ- ಮಂಗಳೂರು ಎಕ್ಸ್ಪ್ರೆಸ್ ಬಸ್ ಕಾಪು ಸಾಯಿ ಸರ್ವಿಸ್ ಸ್ಟೇಶನ್ ಬಳಿ ಸ್ಕೂಟಿಗೆ ಹಿಂಬದಿಯಿಂದ ಡಿಕ್ಕಿಯಾಗಿದೆ. ಇದರಿಂದ ತಂದೆಯೊಂದಿಗೆ ಹಿಂಬದಿ ಕುಳಿತಿದ್ದ ಬಾಲಕಿ ಸ್ವಾತಿ ಶೆಟ್ಟಿ (8) ರಸ್ತೆಗೆ ಬಿದ್ದು ತೀವ್ರ ಗಾಯಗೊಂಡು ಸಾವನ್ನಪ್ಪಿದ್ದಾಳೆ. ನಿತ್ಯಾನಂದ ಶೆಟ್ಟಿ ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದುಬೈಯಲ್ಲಿ ವಾಸವಿದ್ದ ನಿತ್ಯಾನಂದ ಶೆಟ್ಟಿ ಮುಂದೆ ಊರಿನಲ್ಲೇ ನೆಲೆಸುವುದಕ್ಕಾಗಿ ಸಿದ್ಧತೆಯಲ್ಲಿದ್ದರು. ಮಗಳು ಸ್ವಾತಿಯನ್ನು ಉಡುಪಿಯ ಖಾಸಗಿ ಶಾಲೆಯಲ್ಲಿ ಸೇರ್ಪಡೆಗೊಳಿಸಿದ್ದರು. ಪತ್ನಿ, ಮಗಳನ್ನು ಬಿಟ್ಟು ಎರಡು ದಿನದಲ್ಲಿ ನಿತ್ಯಾನಂದ ಶೆಟ್ಟಿ ಮಾತ್ರ ದುಬೈಗೆ ತೆರಳುವವರಿದ್ದರು. ಈ ನಡುವೆ, ಕಾಪು ಪೇಟೆಗೆ ಸ್ಕೂಟರ್ ನಲ್ಲಿ ಬಂದು ವಾಪಾಸಾಗುತ್ತಿದ್ದಾಗ ಅಪಘಾತಕ್ಕೀಡಾಗಿದ್ದಾರೆ.
ನಿತ್ಯಾನಂದ ಶೆಟ್ಟಿ ಕಾಪು ಬಳಿಯ ಪೂವಣಿಗುತ್ತು ಮನೆ ನಿವಾಸಿಯಾಗಿದ್ದು ಅಲ್ಲಿಂದ ಕೇವಲ ಅರ್ಧ ಕಿ.ಮೀ. ದೂರದಲ್ಲಿ ಅಪಘಾತ ನಡೆದಿದೆ. ಸ್ವಾತಿ ಶೆಟ್ಟಿ ಸಣ್ಣ ವಯಸ್ಸಿನಲ್ಲೇ ಪರಿಸರದಲ್ಲಿ ಆಕರ್ಷಕ ವ್ಯಕ್ತಿತ್ವ ಬೆಳೆಸಿಕೊಂಡಿದ್ದಳು. ಬಂಟರ ಸಂಘದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಬಂಧುಗಳ ಗಮನ ಸೆಳೆದಿದ್ದಳು. ಆದರೆ ದುರ್ವಿಧಿ ಬೇರೆಯದ್ದೇ ಬಗೆದಿದ್ದು ಅಪಘಾತದಲ್ಲಿ ಸಾವು ಕಂಡಿದ್ದು ಕುಟುಂಬಸ್ಥರು ಮತ್ತು ಪರಿಸರದ ಜನರಿಗೆ ಆಘಾತ ಮೂಡಿಸಿದೆ. ಬಸ್ ಚಾಲಕನ ನಿರ್ಲಕ್ಷ್ಯ ಮತ್ತು ಧಾವಂತದ ಚಾಲನೆಯಿಂದಾಗಿ ಘಟನೆ ನಡೆದಿದ್ದು ಕಾಪು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm