ಬ್ರೇಕಿಂಗ್ ನ್ಯೂಸ್
25-04-26 02:05 pm HK News Staffer ಕ್ರೈಂ
ಉಡುಪಿ, ಏಪ್ರಿಲ್ 25: ಮಣಿಪಾಲದಲ್ಲಿ ಯುವಜೋಡಿಯೊಂದು ಸಾರ್ವಜನಿಕವಾಗಿ ಅಸಭ್ಯವಾಗಿ ವರ್ತಿಸಿದ ಘಟನೆ ತಡರಾತ್ರಿ ನಡೆದಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಈ ಹೈಡ್ರಾಮಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ.
ದೇಶದ ವಿವಿಧ ಭಾಗಗಳಿಂದ ಗುಣಮಟ್ಟದ ಶಿಕ್ಷಣಕ್ಕಾಗಿ ವಿದ್ಯಾರ್ಥಿಗಳು ಮಣಿಪಾಲಕ್ಕೆ ಆಗಮಿಸುತ್ತಾರೆ. ಆದರೆ, ಹೈಟೆಕ್ ವಾತಾವರಣ ಮತ್ತು ಪಶ್ಚಿಮಾತ್ಯ ಸಂಸ್ಕೃತಿಯ ಪ್ರಭಾವದಿಂದ ಕೆಲವರು ಸಾರ್ವಜನಿಕ ಸ್ಥಳ ಎಂಬ ಅರಿವಿಲ್ಲದೆ ವರ್ತಿಸುತ್ತಿರುವುದು ಸ್ಥಳೀಯರಲ್ಲಿ ಅಸಮಾಧಾನ ಹುಟ್ಟಿಸಿದೆ. ಇದೇ ರೀತಿ ಸಾರ್ವಜನಿಕ ರಸ್ತೆಯಲ್ಲೇ ಪ್ರಣಯ ಸಲ್ಲಾಪದಲ್ಲಿ ತೊಡಗಿದ್ದ ಈ ಜೋಡಿಯನ್ನು ಕಂಡ ಸ್ಥಳೀಯರು ತಕ್ಷಣವೇ ತರಾಟೆಗೆ ತೆಗೆದುಕೊಂಡಿದ್ದಾರೆ.
ಸ್ಥಳೀಯರು ಪ್ರಶ್ನಿಸಿದ ವೇಳೆ ಜೋಡಿ ಅಸಹಜವಾಗಿ ಪ್ರತಿಕ್ರಿಯಿಸಿದ್ದು, ಮಾತಿನ ಚಕಮಕಿಯೂ ನಡೆದಿದೆ. ಈ ಘಟನೆಗೆ ಸಂಬಂಧಿಸಿದ ದೃಶ್ಯಗಳನ್ನು ಸ್ಥಳೀಯರು ತಮ್ಮ ಮೊಬೈಲ್ಗಳಲ್ಲಿ ಸೆರೆಹಿಡಿದು ಹಂಚಿಕೊಂಡಿದ್ದು, ವಿಡಿಯೋ ಇದೀಗ ವೈರಲ್ ಆಗಿದೆ.
ಹೊಸ ವರ್ಷ ಅಥವಾ ವ್ಯಾಲೆಂಟೈನ್ಸ್ ಡೇ ಸಂದರ್ಭಗಳಲ್ಲಿ ಇಂತಹ ಘಟನೆಗಳು ಸಾಮಾನ್ಯವಾಗುತ್ತಿವೆ ಎಂಬ ಅಸಮಾಧಾನ ವ್ಯಕ್ತಪಡಿಸಿರುವ ಉಡುಪಿ ಜನತೆ, ಮಣಿಪಾಲದ ಗೌರವಕ್ಕೆ ಧಕ್ಕೆಯಾಗುವಂತಹ ವರ್ತನೆಗಳನ್ನು ತಕ್ಷಣವೇ ನಿಯಂತ್ರಿಸಬೇಕು ಎಂದು ಆಗ್ರಹಿಸಿದ್ದಾರೆ. ಇಂತಹ ಘಟನೆಗಳ ವಿರುದ್ಧ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯವೂ ಕೇಳಿಬಂದಿದೆ.
ಸಾರ್ವಜನಿಕ ಸ್ಥಳದಲ್ಲಿ ಸ್ವಾತಂತ್ರ್ಯಕ್ಕಿಂತ ಜವಾಬ್ದಾರಿ ಮುಖ್ಯ. ಮಣಿಪಾಲದ ಈ ಘಟನೆ ಸಮಾಜದ ಮಿತಿಗಳ ಕುರಿತು ಮತ್ತೆ ಚರ್ಚೆ ಎಬ್ಬಿಸಿದೆ.
Shocking & unacceptable! A couple caught indulging in highly indecent behavior in public in Manipal. This is not PDA, this is openly disrespecting Indian culture, public decency, and the people around.
— ಸನಾತನ (सनातन) (@sanatan_kannada) April 24, 2026
Manipal is an education hub students & families deserve better. Where are the… pic.twitter.com/8zJ9n9AsLo
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm