ಬ್ರೇಕಿಂಗ್ ನ್ಯೂಸ್
26-04-26 12:45 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 26: ಮದುವೆ ಸಂಭ್ರಮದ ನಡುವೆ ಖದೀಮರು ಕೈಚಳಕ ತೋರಿಸಿ ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರುನಲ್ಲಿ ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ವೈದ್ಯೆ ಸಿರುವೆಲ್ಲ ಶ್ರೀದೇವಿ ಅವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲೇ ದೋಚಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸಿರುವೆಲ್ಲ ಶ್ರೀದೇವಿ ಅವರು ತಮ್ಮ ಸಹೋದರನ ಮಗನ ಮದುವೆಗೆ ಏಪ್ರಿಲ್ 18ರಂದು ಬೆಂಗಳೂರಿಗೆ ಆಗಮಿಸಿದ್ದರು. ಬಳ್ಳಾರಿ ರಸ್ತೆಯ ಗಂಗಾನಗರದಲ್ಲಿರುವ ತಮ್ಮ ಸಹೋದರರ ಮನೆಯಲ್ಲಿ ತಂಗಿದ್ದ ಅವರು, ಬುಧವಾರ ಬೆಳಗ್ಗೆ ಬಿಡರಹಳ್ಳಿಯ ಓಲ್ಡ್ ಮದ್ರಾಸ್ ರಸ್ತೆಯ ಎಸ್ಡಿಪಿ ಪ್ಯಾಲೆಸ್ ಮಂಟಪಕ್ಕೆ ತೆರಳಿದ್ದರು. ಸಂಜೆ ವೇಳೆಗೆ ಅವರ ಸಹೋದರರು ಚಿನ್ನಾಭರಣಗಳಿದ್ದ ಪೆಟ್ಟಿಗೆಯನ್ನು ಮಂಟಪದಲ್ಲೇ ನೀಡಿದ್ದರು. ಕೆಲವು ಆಭರಣಗಳನ್ನು ಧರಿಸಿದ ಅವರು ಉಳಿದವುಗಳನ್ನು ಕೊಠಡಿಯಲ್ಲಿ ಇಟ್ಟು ಬಾಗಿಲು ಲಾಕ್ ಮಾಡಿ ಸ್ವಾಗತ ಕಾರ್ಯಕ್ರಮಕ್ಕೆ ತೆರಳಿದ್ದರು.
ಆದರೆ ಕೊಠಡಿ ಲಾಕ್ ಆಗಿದ್ದರೂ ಸುಮಾರು 725 ಗ್ರಾಂ ಚಿನ್ನಾಭರಣಗಳು ಕಳವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೀಲಿ ದೂರುದಾರರಲ್ಲೇ ಇದ್ದುದರಿಂದ, ಪರಿಚಿತರಾದವರು ಅಥವಾ ಕುಟುಂಬದವರಲ್ಲಿ ಯಾರಾದರೂ ಈ ಕೃತ್ಯ ಎಸಗಿರುವ ಸಾಧ್ಯತೆಯೂ ಪೊಲೀಸ್ ವಲಯದಲ್ಲಿ ವ್ಯಕ್ತವಾಗಿದೆ.
ಘಟನೆಯ ಕುರಿತು ದೂರು ದಾಖಲಿಸಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಕೊಠಡಿಗೆ ಪ್ರವೇಶ ಹೊಂದಿದ್ದವರ ವಿಚಾರಣೆ ನಡೆಸುತ್ತಿದ್ದಾರೆ. ಮಂಟಪದ ಸಿಬ್ಬಂದಿಯ ಪಾತ್ರ ಇಲ್ಲ ಎಂದು ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದು, ತನಿಖೆಗೆ ಸಹಕರಿಸುತ್ತಿದ್ದಾರೆ.
ಈ ಕುರಿತು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಆದಾವತ್ ಮಾಹಿತಿ ನೀಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm