ಬ್ರೇಕಿಂಗ್ ನ್ಯೂಸ್
26-04-26 12:45 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 26: ಮದುವೆ ಸಂಭ್ರಮದ ನಡುವೆ ಖದೀಮರು ಕೈಚಳಕ ತೋರಿಸಿ ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರುನಲ್ಲಿ ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ವೈದ್ಯೆ ಸಿರುವೆಲ್ಲ ಶ್ರೀದೇವಿ ಅವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲೇ ದೋಚಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸಿರುವೆಲ್ಲ ಶ್ರೀದೇವಿ ಅವರು ತಮ್ಮ ಸಹೋದರನ ಮಗನ ಮದುವೆಗೆ ಏಪ್ರಿಲ್ 18ರಂದು ಬೆಂಗಳೂರಿಗೆ ಆಗಮಿಸಿದ್ದರು. ಬಳ್ಳಾರಿ ರಸ್ತೆಯ ಗಂಗಾನಗರದಲ್ಲಿರುವ ತಮ್ಮ ಸಹೋದರರ ಮನೆಯಲ್ಲಿ ತಂಗಿದ್ದ ಅವರು, ಬುಧವಾರ ಬೆಳಗ್ಗೆ ಬಿಡರಹಳ್ಳಿಯ ಓಲ್ಡ್ ಮದ್ರಾಸ್ ರಸ್ತೆಯ ಎಸ್ಡಿಪಿ ಪ್ಯಾಲೆಸ್ ಮಂಟಪಕ್ಕೆ ತೆರಳಿದ್ದರು. ಸಂಜೆ ವೇಳೆಗೆ ಅವರ ಸಹೋದರರು ಚಿನ್ನಾಭರಣಗಳಿದ್ದ ಪೆಟ್ಟಿಗೆಯನ್ನು ಮಂಟಪದಲ್ಲೇ ನೀಡಿದ್ದರು. ಕೆಲವು ಆಭರಣಗಳನ್ನು ಧರಿಸಿದ ಅವರು ಉಳಿದವುಗಳನ್ನು ಕೊಠಡಿಯಲ್ಲಿ ಇಟ್ಟು ಬಾಗಿಲು ಲಾಕ್ ಮಾಡಿ ಸ್ವಾಗತ ಕಾರ್ಯಕ್ರಮಕ್ಕೆ ತೆರಳಿದ್ದರು.
ಆದರೆ ಕೊಠಡಿ ಲಾಕ್ ಆಗಿದ್ದರೂ ಸುಮಾರು 725 ಗ್ರಾಂ ಚಿನ್ನಾಭರಣಗಳು ಕಳವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೀಲಿ ದೂರುದಾರರಲ್ಲೇ ಇದ್ದುದರಿಂದ, ಪರಿಚಿತರಾದವರು ಅಥವಾ ಕುಟುಂಬದವರಲ್ಲಿ ಯಾರಾದರೂ ಈ ಕೃತ್ಯ ಎಸಗಿರುವ ಸಾಧ್ಯತೆಯೂ ಪೊಲೀಸ್ ವಲಯದಲ್ಲಿ ವ್ಯಕ್ತವಾಗಿದೆ.
ಘಟನೆಯ ಕುರಿತು ದೂರು ದಾಖಲಿಸಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಕೊಠಡಿಗೆ ಪ್ರವೇಶ ಹೊಂದಿದ್ದವರ ವಿಚಾರಣೆ ನಡೆಸುತ್ತಿದ್ದಾರೆ. ಮಂಟಪದ ಸಿಬ್ಬಂದಿಯ ಪಾತ್ರ ಇಲ್ಲ ಎಂದು ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದು, ತನಿಖೆಗೆ ಸಹಕರಿಸುತ್ತಿದ್ದಾರೆ.
ಈ ಕುರಿತು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಆದಾವತ್ ಮಾಹಿತಿ ನೀಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
26-04-26 12:41 pm
HK News Staffer
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
ದಾವಣಗೆರೆ ಬಿಸಿ ; ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ಜೋ...
24-04-26 02:35 pm
‘ಪಿಯುಸಿ ಸೈನ್ಸ್’ ಗುಮ್ಮ ಮುಂದಿಟ್ಟು ದಂಧೆಗಿಳಿದ ಖಾಸ...
23-04-26 07:06 pm
26-04-26 12:49 pm
HK News Staffer
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
ಹಾರ್ಮುಜ್ ಜಲಸಂಧಿಯಲ್ಲಿ ಮೂರು ಹಡಗುಗಳ ಮೇಲೆ ಇರಾನ್ ಗ...
23-04-26 10:22 am
26-04-26 04:30 pm
HK News Staffer
ತಾಕೋಡೆ ಧರ್ಮನೇಮಕ್ಕೆ ಭಂಡಾರ ಒಯ್ಯುತ್ತಿದ್ದಾಗ ಕುಸಿದ...
25-04-26 01:45 pm
Commissioner Sudheer Reddy, Mangalore: ಕಮಿಷನರ...
24-04-26 07:10 pm
ಬೆಳ್ತಂಗಡಿ, ಬಂಟ್ವಾಳ ತಾಲೂಕು ಆಸ್ಪತ್ರೆ ಖಾಸಗಿ ತೆಕ್...
23-04-26 04:43 pm
ನಿರುದ್ಯೋಗಿಗಳಿಗೆ ಸುವರ್ಣಾವಕಾಶ ; ಮಂಗಳೂರಿನಲ್ಲಿ ಬೃ...
22-04-26 10:58 am
26-04-26 12:45 pm
HK News Staffer
ಎನ್ಐಎ, ಇಡಿ ಅಧಿಕಾರಿಗಳೆಂದು ಫೋನ್ ಕರೆ ; ಮುಂಬೈನಲ್ಲ...
25-04-26 10:43 pm
ಉಡುಪಿ ; ಸಂಸ್ಕೃತ ಕಾಲೇಜಿನ ಉಪನ್ಯಾಸಕ ಬಾವಿಯಲ್ಲಿ ಶ...
25-04-26 03:57 pm
ಮಣಿಪಾಲದಲ್ಲಿ ಪಬ್ಲಿಕ್ನಲ್ಲೇ ವಿದ್ಯಾರ್ಥಿಗಳ ಓಪನ್ ರೋ...
25-04-26 02:05 pm
ಕಾರ್ಕಳ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಬೈಕ್ ಗೆ ಡಿಕ...
25-04-26 12:55 pm