ಬ್ರೇಕಿಂಗ್ ನ್ಯೂಸ್
26-04-26 12:45 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 26: ಮದುವೆ ಸಂಭ್ರಮದ ನಡುವೆ ಖದೀಮರು ಕೈಚಳಕ ತೋರಿಸಿ ಬರೋಬ್ಬರಿ 1 ಕೋಟಿ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ನಡೆಸಿರುವ ಘಟನೆ ಬೆಂಗಳೂರುನಲ್ಲಿ ನಡೆದಿದೆ. ಅಮೆರಿಕದಲ್ಲಿ ವಾಸವಿರುವ 52 ವರ್ಷದ ವೈದ್ಯೆ ಸಿರುವೆಲ್ಲ ಶ್ರೀದೇವಿ ಅವರಿಗೆ ಸೇರಿದ ಚಿನ್ನಾಭರಣವನ್ನು ಮದುವೆ ಮಂಟಪದಲ್ಲೇ ದೋಚಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಸಿರುವೆಲ್ಲ ಶ್ರೀದೇವಿ ಅವರು ತಮ್ಮ ಸಹೋದರನ ಮಗನ ಮದುವೆಗೆ ಏಪ್ರಿಲ್ 18ರಂದು ಬೆಂಗಳೂರಿಗೆ ಆಗಮಿಸಿದ್ದರು. ಬಳ್ಳಾರಿ ರಸ್ತೆಯ ಗಂಗಾನಗರದಲ್ಲಿರುವ ತಮ್ಮ ಸಹೋದರರ ಮನೆಯಲ್ಲಿ ತಂಗಿದ್ದ ಅವರು, ಬುಧವಾರ ಬೆಳಗ್ಗೆ ಬಿಡರಹಳ್ಳಿಯ ಓಲ್ಡ್ ಮದ್ರಾಸ್ ರಸ್ತೆಯ ಎಸ್ಡಿಪಿ ಪ್ಯಾಲೆಸ್ ಮಂಟಪಕ್ಕೆ ತೆರಳಿದ್ದರು. ಸಂಜೆ ವೇಳೆಗೆ ಅವರ ಸಹೋದರರು ಚಿನ್ನಾಭರಣಗಳಿದ್ದ ಪೆಟ್ಟಿಗೆಯನ್ನು ಮಂಟಪದಲ್ಲೇ ನೀಡಿದ್ದರು. ಕೆಲವು ಆಭರಣಗಳನ್ನು ಧರಿಸಿದ ಅವರು ಉಳಿದವುಗಳನ್ನು ಕೊಠಡಿಯಲ್ಲಿ ಇಟ್ಟು ಬಾಗಿಲು ಲಾಕ್ ಮಾಡಿ ಸ್ವಾಗತ ಕಾರ್ಯಕ್ರಮಕ್ಕೆ ತೆರಳಿದ್ದರು.
ಆದರೆ ಕೊಠಡಿ ಲಾಕ್ ಆಗಿದ್ದರೂ ಸುಮಾರು 725 ಗ್ರಾಂ ಚಿನ್ನಾಭರಣಗಳು ಕಳವಾಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಕೀಲಿ ದೂರುದಾರರಲ್ಲೇ ಇದ್ದುದರಿಂದ, ಪರಿಚಿತರಾದವರು ಅಥವಾ ಕುಟುಂಬದವರಲ್ಲಿ ಯಾರಾದರೂ ಈ ಕೃತ್ಯ ಎಸಗಿರುವ ಸಾಧ್ಯತೆಯೂ ಪೊಲೀಸ್ ವಲಯದಲ್ಲಿ ವ್ಯಕ್ತವಾಗಿದೆ.
ಘಟನೆಯ ಕುರಿತು ದೂರು ದಾಖಲಿಸಲಾಗಿದ್ದು, ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿ, ಕೊಠಡಿಗೆ ಪ್ರವೇಶ ಹೊಂದಿದ್ದವರ ವಿಚಾರಣೆ ನಡೆಸುತ್ತಿದ್ದಾರೆ. ಮಂಟಪದ ಸಿಬ್ಬಂದಿಯ ಪಾತ್ರ ಇಲ್ಲ ಎಂದು ವ್ಯವಸ್ಥಾಪಕರು ಸ್ಪಷ್ಟಪಡಿಸಿದ್ದು, ತನಿಖೆಗೆ ಸಹಕರಿಸುತ್ತಿದ್ದಾರೆ.
ಈ ಕುರಿತು ವೈಟ್ಫೀಲ್ಡ್ ವಿಭಾಗದ ಡಿಸಿಪಿ ಸೈದುಲು ಆದಾವತ್ ಮಾಹಿತಿ ನೀಡಿದ್ದು, ಆರೋಪಿಗಳಿಗಾಗಿ ಶೋಧ ಕಾರ್ಯ ಮುಂದುವರಿದಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am