ಬ್ರೇಕಿಂಗ್ ನ್ಯೂಸ್
27-04-26 05:42 pm HK News Staffer ಕ್ರೈಂ
ಬೆಂಗಳೂರು, ಎಪ್ರಿಲ್ 27: ಮಂಗಳೂರಿನಲ್ಲಿ ನಡೆದ ಭೀಕರ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ಗೆ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆ ವೇಳೆ ಶಾರೀಕ್ ತನ್ನ ಮೇಲಿನ ಆರೋಪಗಳನ್ನು ಮತ್ತು ಮಾಡಿದ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಶೀಘ್ರ ವಿಚಾರಣೆ ಮುಗಿದು ನ್ಯಾಯಾಧೀಶರು ತೀರ್ಪು ನೀಡಿದ್ದು 10 ವರ್ಷಗಳ ಶಿಕ್ಷೆ ಮತ್ತು 94 ಸಾವಿರ ರೂ. ದಂಡ ವಿಧಿಸಿದೆ. 2022ರ ನವೆಂಬರ್ 19ರಂದು ಮೊಹಮ್ಮದ್ ಶಾರೀಕ್ ಮೈಸೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬಂದು ನಾಗುರಿಯಲ್ಲಿ ಕುಕ್ಕರ್ ಬಾಂಬ್ ಸೆಟ್ ಮಾಡಿ ಆಟೋದಲ್ಲಿ ತೆರಳುತ್ತಿದ್ದಾಗ ಬ್ಲಾಸ್ಟ್ ಆಗಿತ್ತು. ವಿಚಾರಣೆ ಸಂದರ್ಭದಲ್ಲಿ ಈ ಬಾಂಬನ್ನು ಕದ್ರಿ ಮಂಜುನಾಥ ದೇವಸ್ಥಾನ ಆವರಣದಲ್ಲಿ ಇಡುವ ಉದ್ದೇಶ ಹೊಂದಿದ್ಧ ಎಂಬ ವಿಚಾರ ತಿಳಿದುಬಂದಿತ್ತು. ಘಟನೆಯಲ್ಲಿ ಕುಕ್ಕರ್ ಹಿಡಿದುಕೊಂಡಿದ್ದ ಶಾರೀಕ್ ಮತ್ತು ಆಟೋ ಚಾಲಕ ಪುರುಷೋತ್ತಮ ಪೂಜಾರಿ ತೀವ್ರ ಗಾಯಗೊಂಡಿದ್ದರು.

ಇಂದು ಕೋರ್ಟಿನಲ್ಲಿ ತೀರ್ಪು ಘೋಷಣೆ ಬಳಿಕ ಶಾರೀಕ್ ತನ್ನನ್ನು ಶಿವಮೊಗ್ಗ ಜೈಲಿಗೆ ಟ್ರ್ಯಾನ್ಸ್ ಫರ್ ಮಾಡುವಂತೆ ಕೇಳಿಕೊಂಡಿದ್ದಾನೆ. ಸರಿಯಾಗಿ ನಿದ್ದೆ ಬಾರದೇ 3 ವರ್ಷ ಆಗಿದೆ, ಟ್ಯಾಬ್ಲೆಟ್ ಎಲ್ಲಾ ಸರಿ ಹೋಗುತ್ತಿಲ್ಲ. ಹಾಗಾಗಿ ಶಿವಮೊಗ್ಗಕ್ಕೆ ಸ್ಥಳಾಂತರ ಮಾಡಲು ಮನವಿ ಮಾಡಿದ್ದಾನೆ. ಎಲ್ಲಾ ಖೈದಿಗಳು ಬೆಂಗಳೂರಿಗೆ ವರ್ಗಾವಣೆ ಆಗ್ಬೇಕು ಅಂತ ಅರ್ಜಿ ಹಾಕ್ತಾರೆ, ನೀವೇನು ಶಿವಮೊಗ್ಗ ಕೇಳ್ತಿದಿರಾ ಅಂತ ಜಡ್ಜ್ ಪ್ರಶ್ನೆ ಮಾಡಿದ್ದಾರೆ.
ವಿಚಾರಣೆ ಹಂತದಲ್ಲಿ ಆರೋಪಿ ಶಾರಿಕ್ ತಾನು ಮಾಡಿದ ಕೃತ್ಯದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ನಲ್ಲಿ ಈ ಪ್ರಕ್ರಿಯೆ ನಡೆದಿದ್ದು, ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ವಿಚಾರಣೆ ವೇಗವಾಗಿ ಮುಕ್ತಾಯಗೊಂಡು ಶಿಕ್ಷೆ ಪ್ರಕಟವಾಗಿದೆ. ಆರೋಪಿಯ ಕೌಟುಂಬಿಕ ಹಿನ್ನೆಲೆ ಮತ್ತು ಆತ ತಪ್ಪೊಪ್ಪಿಕೊಂಡಿರುವ ಅಂಶವನ್ನು ಗಮನದಲ್ಲಿಟ್ಟು ನ್ಯಾಯಾಲಯವು, 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm