ಬ್ರೇಕಿಂಗ್ ನ್ಯೂಸ್
27-04-26 05:42 pm HK News Staffer ಕ್ರೈಂ
ಬೆಂಗಳೂರು, ಎಪ್ರಿಲ್ 27: ಮಂಗಳೂರಿನಲ್ಲಿ ನಡೆದ ಭೀಕರ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರೀಕ್ಗೆ ಬೆಂಗಳೂರಿನ ಎನ್ಐಎ ವಿಶೇಷ ನ್ಯಾಯಾಲಯವು 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.
ಪ್ರಕರಣದ ವಿಚಾರಣೆ ವೇಳೆ ಶಾರೀಕ್ ತನ್ನ ಮೇಲಿನ ಆರೋಪಗಳನ್ನು ಮತ್ತು ಮಾಡಿದ ತಪ್ಪನ್ನು ನ್ಯಾಯಾಲಯದ ಮುಂದೆ ಒಪ್ಪಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಶೀಘ್ರ ವಿಚಾರಣೆ ಮುಗಿದು ನ್ಯಾಯಾಧೀಶರು ತೀರ್ಪು ನೀಡಿದ್ದು 10 ವರ್ಷಗಳ ಶಿಕ್ಷೆ ಮತ್ತು 94 ಸಾವಿರ ರೂ. ದಂಡ ವಿಧಿಸಿದೆ. 2022ರ ನವೆಂಬರ್ 19ರಂದು ಮೊಹಮ್ಮದ್ ಶಾರೀಕ್ ಮೈಸೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಬಂದು ನಾಗುರಿಯಲ್ಲಿ ಕುಕ್ಕರ್ ಬಾಂಬ್ ಸೆಟ್ ಮಾಡಿ ಆಟೋದಲ್ಲಿ ತೆರಳುತ್ತಿದ್ದಾಗ ಬ್ಲಾಸ್ಟ್ ಆಗಿತ್ತು. ವಿಚಾರಣೆ ಸಂದರ್ಭದಲ್ಲಿ ಈ ಬಾಂಬನ್ನು ಕದ್ರಿ ಮಂಜುನಾಥ ದೇವಸ್ಥಾನ ಆವರಣದಲ್ಲಿ ಇಡುವ ಉದ್ದೇಶ ಹೊಂದಿದ್ಧ ಎಂಬ ವಿಚಾರ ತಿಳಿದುಬಂದಿತ್ತು. ಘಟನೆಯಲ್ಲಿ ಕುಕ್ಕರ್ ಹಿಡಿದುಕೊಂಡಿದ್ದ ಶಾರೀಕ್ ಮತ್ತು ಆಟೋ ಚಾಲಕ ಪುರುಷೋತ್ತಮ ಪೂಜಾರಿ ತೀವ್ರ ಗಾಯಗೊಂಡಿದ್ದರು.

ಇಂದು ಕೋರ್ಟಿನಲ್ಲಿ ತೀರ್ಪು ಘೋಷಣೆ ಬಳಿಕ ಶಾರೀಕ್ ತನ್ನನ್ನು ಶಿವಮೊಗ್ಗ ಜೈಲಿಗೆ ಟ್ರ್ಯಾನ್ಸ್ ಫರ್ ಮಾಡುವಂತೆ ಕೇಳಿಕೊಂಡಿದ್ದಾನೆ. ಸರಿಯಾಗಿ ನಿದ್ದೆ ಬಾರದೇ 3 ವರ್ಷ ಆಗಿದೆ, ಟ್ಯಾಬ್ಲೆಟ್ ಎಲ್ಲಾ ಸರಿ ಹೋಗುತ್ತಿಲ್ಲ. ಹಾಗಾಗಿ ಶಿವಮೊಗ್ಗಕ್ಕೆ ಸ್ಥಳಾಂತರ ಮಾಡಲು ಮನವಿ ಮಾಡಿದ್ದಾನೆ. ಎಲ್ಲಾ ಖೈದಿಗಳು ಬೆಂಗಳೂರಿಗೆ ವರ್ಗಾವಣೆ ಆಗ್ಬೇಕು ಅಂತ ಅರ್ಜಿ ಹಾಕ್ತಾರೆ, ನೀವೇನು ಶಿವಮೊಗ್ಗ ಕೇಳ್ತಿದಿರಾ ಅಂತ ಜಡ್ಜ್ ಪ್ರಶ್ನೆ ಮಾಡಿದ್ದಾರೆ.
ವಿಚಾರಣೆ ಹಂತದಲ್ಲಿ ಆರೋಪಿ ಶಾರಿಕ್ ತಾನು ಮಾಡಿದ ಕೃತ್ಯದ ಬಗ್ಗೆ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದ. ಬೆಂಗಳೂರಿನ ಎನ್ಐಎ ವಿಶೇಷ ಕೋರ್ಟ್ನಲ್ಲಿ ಈ ಪ್ರಕ್ರಿಯೆ ನಡೆದಿದ್ದು, ತಪ್ಪೊಪ್ಪಿಕೊಂಡ ಹಿನ್ನೆಲೆಯಲ್ಲಿ ವಿಚಾರಣೆ ವೇಗವಾಗಿ ಮುಕ್ತಾಯಗೊಂಡು ಶಿಕ್ಷೆ ಪ್ರಕಟವಾಗಿದೆ. ಆರೋಪಿಯ ಕೌಟುಂಬಿಕ ಹಿನ್ನೆಲೆ ಮತ್ತು ಆತ ತಪ್ಪೊಪ್ಪಿಕೊಂಡಿರುವ ಅಂಶವನ್ನು ಗಮನದಲ್ಲಿಟ್ಟು ನ್ಯಾಯಾಲಯವು, 10 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am