ಬ್ರೇಕಿಂಗ್ ನ್ಯೂಸ್
27-04-26 10:04 pm HK News Staffer ಕ್ರೈಂ
ಕೋಲ್ಕತ್ತಾ, ಏಪ್ರಿಲ್ 27: ರೈಲು ಪ್ರಯಾಣದ ವೇಳೆ ಹೃದಯ ಕಲುಕುವ ಘಟನೆ ನಡೆದಿದ್ದು, ಕೈಜಾರಿ ಮಗು ರೈಲಿನಿಂದ ಕೆಳಕ್ಕೆ ಬಿದ್ದರೂ ಚೈನ್ ಎಳೆದರೂ ರೈಲು ನಿಲ್ಲದೇ ಮುಂದುವರಿದ ಘಟನೆ ಆತಂಕ ಮೂಡಿಸಿದೆ. ಜಲ್ಪೈಗುರಿ ಮತ್ತು ರಾಮನಗರ ನಡುವಿನ ಪ್ರಯಾಣದ ವೇಳೆ ಈ ದುರ್ಘಟನೆ ನಡೆದಿದೆ.
ಮಗು ಕೆಳಗೆ ಬಿದ್ದ ತಕ್ಷಣ ತಾಯಿ ಆತಂಕದಿಂದ ತುರ್ತು ಸರಪಳಿಯನ್ನು ಎಳೆದರೂ ರೈಲು ನಿಲ್ಲಲಿಲ್ಲ. ತಾಯಿಯ ಆಕ್ರಂದನ ಕಂಡು ಬೋಗಿಯಲ್ಲಿದ್ದ ಇತರ ಪ್ರಯಾಣಿಕರೂ ಸಹಕರಿಸಿ ಪದೇ ಪದೇ ಸರಪಳಿಯನ್ನು ಎಳೆದರೂ, ರೈಲಿನ ಬ್ರೇಕ್ ವ್ಯವಸ್ಥೆ ಸ್ಪಂದಿಸದೇ ಮುಂದುವರಿದಿದ್ದು, ಭದ್ರತಾ ವ್ಯವಸ್ಥೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದೆ.
ಈ ಸಂದರ್ಭದಲ್ಲಿ ಬೋಗಿಯಲ್ಲಿದ್ದ ಯುವಕನೊಬ್ಬ ತಕ್ಷಣವೇ ಆರ್ಪಿಎಫ್ ಹಾಗೂ ಸ್ಥಳೀಯ ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾನೆ. ಆತ ಘಟನೆಯ ವಿಡಿಯೋ ಸೆರೆಹಿಡಿದು, “ನಾವು ಎಲ್ಲರಿಗೂ ಕರೆ ಮಾಡುತ್ತಿದ್ದೇವೆ, ಸರಪಳಿ ಎಳೆಯುತ್ತಿದ್ದೇವೆ, ಆದರೂ ರೈಲು ನಿಲ್ಲುತ್ತಿಲ್ಲ” ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾನೆ.
ರೈಲು ಮುಂದಿನ ನಿಲ್ದಾಣ ತಲುಪುವವರೆಗೆ ತಾಯಿ ಮಗುವಿನ ಬಳಿ ತಲುಪಲು ಸಾಧ್ಯವಾಗದೆ ರೈಲಿನಲ್ಲೇ ಕಣ್ಣೀರಿಡುತ್ತಾ ಕುಳಿತಿದ್ದಾಳೆ. ಬಳಿಕ ಪೊಲೀಸರು ಹಾಗೂ ರೈಲ್ವೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಗುವಿನ ಶೋಧ ಕಾರ್ಯ ಆರಂಭಿಸಿದ್ದಾರೆ ಎಂದು ವರದಿಯಾಗಿದೆ.
ಈ ಘಟನೆ ರೈಲ್ವೆ ಸುರಕ್ಷತಾ ವ್ಯವಸ್ಥೆ ಮತ್ತು ನಿರ್ವಹಣೆಯ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದ್ದು, ತುರ್ತು ಸರಪಳಿ ವ್ಯವಸ್ಥೆಯ ಕಾರ್ಯಕ್ಷಮತೆ ಕುರಿತು ಪ್ರಶ್ನೆಗಳು ಉದ್ಭವಿಸಿವೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm