ಬ್ರೇಕಿಂಗ್ ನ್ಯೂಸ್
29-04-26 08:12 pm HK News Staffer ಕ್ರೈಂ
ಬೆಂಗಳೂರು, ಏಪ್ರಿಲ್ 29 : ನಗರದಲ್ಲಿ ದಿಢೀರ್ ಸುರಿದ ಭಾರೀ ಮಳೆಯ ಅಬ್ಬರಕ್ಕೆ ಬೌರಿಂಗ್ ಆಸ್ಪತ್ರೆ ಕಾಂಪೌಂಡ್ ಗೋಡೆ ಕುಸಿದು 8 ಮಂದಿ ಸಾವನ್ನಪ್ಪಿದ ಘಟನೆ ನಡೆದಿದ್ದು ಮೊದಲ ಮಳೆಗೇ ಎದುರಾದ ದುರಂತ ಸಿಲಿಕಾನ್ ನಗರವನ್ನು ಬೆಚ್ಚಿಬೀಳಿಸಿದೆ. ಮಳೆಯಿಂದ ತಪ್ಪಿಸಿಕೊಳ್ಳಲು ಗೋಡೆಯ ಬಳಿ ಆಶ್ರಯ ಪಡೆದಿದ್ದವರ ಮೇಲೆ ಗೋಡೆ ಕುಸಿದಿದ್ದು, ಮಕ್ಕಳು ಸೇರಿದಂತೆ ಹಲವರು ಬಲಿಯಾಗಿದ್ದಾರೆ.
ಬುಧವಾರ ಸಂಜೆ 5 ಗಂಟೆಯಿಂದ ಬಿರುಗಾಳಿ, ಗುಡುಗು- ಸಿಡಿಲಿನೊಂದಿಗೆ ಭಾರೀ ಮಳೆ ಸುರಿಯುತ್ತಿತ್ತು. ಮಳೆಯಿಂದ ರಕ್ಷಿಸಿಕೊಳ್ಳಲು ಬೀದಿ ವ್ಯಾಪಾರಿಗಳು ಮತ್ತು ಪಾದಚಾರಿಗಳು ಕಾಂಪೌಂಡ್ ಗೋಡೆ ಪಕ್ಕದಲ್ಲಿ ನಿಂತಿದ್ದರು. ಹಳೆಯ ಗೋಡೆ ಬಿರುಗಾಳಿಯ ಒತ್ತಡ ತಡೆಯಲಾಗದೆ ಏಕಾಏಕಿ ಕುಸಿದು ಬಿದ್ದ ಪರಿಣಾಮ ಅಲ್ಲಿ ಆಶ್ರಯ ಪಡೆದಿದ್ದವರು ಅದರಡಿಯಲ್ಲಿ ಸಿಲುಕಿದ್ದಾರೆ. ಟರ್ಪಾಲ್ ಹಾಕಿಕೊಂಡು ವ್ಯಾಪಾರ ಮಾಡುತ್ತಿದ್ದವರೂ ದುರಂತಕ್ಕೆ ಬಲಿಯಾಗಿದ್ದಾರೆ.


ಘಟನೆ ನಡೆದ ತಕ್ಷಣವೇ ಸ್ಥಳೀಯರು ಹಾಗೂ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿರುವುದು ದೃಢಪಟ್ಟಿದ್ದು, ಕೆಲವರು ಇನ್ನೂ ಅವಶೇಷದಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಆಸ್ಪತ್ರೆ ಮುಂದೆ ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಘಟನಾ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬಳಿಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೂಡ ಭೇಟಿ ನೀಡಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಗೋಡೆ ಕುಸಿತದಿಂದ ಉಂಟಾದ ದುರಂತದ ಹಿನ್ನೆಲೆ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am