ಬ್ರೇಕಿಂಗ್ ನ್ಯೂಸ್
29-04-26 11:10 pm HK News Staffer ಕ್ರೈಂ
ಧಾರವಾಡ, ಏಪ್ರಿಲ್ 29: ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣವು ರಾಜ್ಯವನ್ನೇ ಬೆಚ್ಚಿಬೀಳಿಸುವಂತೆ ತಿರುವು ಪಡೆದುಕೊಂಡಿದ್ದು, ಧಾರವಾಡ ನಗರದ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಹಾಗೂ ಸಯದ್ ತಹಸಿಲ್ದಾರ್ ವಿರುದ್ಧ ಸಸ್ಪೆಂಡ್ ಕ್ರಮ ಕೈಗೊಳ್ಳಲಾಗಿದೆ.
ಮೃತ ಆದಿತ್ಯ ಮ್ಯಾಗೇರಿ, ಬಾಗಲಕೋಟೆ ಜಿಲ್ಲೆಯ ಬೇಲೂರು ಗ್ರಾಮದವನಾಗಿದ್ದು, ಕಿಟೆಲ್ ಕಾಲೇಜು ನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದನು. ಗಿರಿನಗರದಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ ಆದಿತ್ಯನನ್ನು ಗಾಂಜಾ ಸೇವನೆ ಆರೋಪದಡಿ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದರು. ಆದರೆ ಪರೀಕ್ಷೆಯಲ್ಲಿ ಗಾಂಜಾ ಸೇವನೆ ನೆಗೆಟಿವ್ ಬಂದಿದ್ದರೂ, ಪೊಲೀಸರು ₹2,000 ಹಣ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ತಾಯಿಯಿಂದ ಹಣ ಕಳುಹಿಸುವಂತೆ ಕೇಳಿದ್ದ ಆದಿತ್ಯಗೆ ನಿರಾಕರಣೆ ಬಂದಿದ್ದು, ಪೊಲೀಸರು ಮತ್ತೆ ಕಿರುಕುಳ ನೀಡಬಹುದು ಎಂಬ ಭಯದಿಂದ ತಡರಾತ್ರಿ ನೇಣಿಗೆ ಶರಣಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. “ನನ್ನ ಮಗನ ಸಾವಿಗೆ ಪೊಲೀಸರ ಕಿರುಕುಳವೇ ಕಾರಣ” ಎಂದು ತಾಯಿ ಕವಿತಾ ಮ್ಯಾಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣ ಗಂಭೀರವಾಗುತ್ತಿದ್ದಂತೆಯೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ನ್ಯಾಯಯುತ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಹಿರಿಯ ಅಧಿಕಾರಿಗಳ ವರದಿ ಆಧಾರದ ಮೇಲೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಡಿಸಿಪಿ ಶೃತಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಹಣ ಬೇಡಿಕೆ ಆರೋಪಗಳನ್ನೂ ಪರಿಶೀಲಿಸಲಾಗುತ್ತಿದೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ಗಾಂಜಾ ಡ್ರೈವ್ ವೇಳೆ ಇಬ್ಬರು ಪೆಡ್ಲರ್ಗಳನ್ನು ಬಂಧಿಸಲಾಗಿದ್ದು, ಗಾಂಜಾ ಸೇವನೆ ದೃಢಪಟ್ಟ ಇಬ್ಬರು ವಿದ್ಯಾರ್ಥಿಗಳ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಕಾನೂನು ರಕ್ಷಕರ ಮೇಲೆ ಇಂತಹ ಗಂಭೀರ ಆರೋಪಗಳು ಸಮಾಜದಲ್ಲಿ ಆತಂಕ ಮೂಡಿಸುತ್ತವೆ. ಯಾವುದೇ ಕಿರುಕುಳ ಎದುರಾದಾಗ ಕಾನೂನು ಮಾರ್ಗದಲ್ಲಿ ದೂರು ನೀಡುವುದು ಅಗತ್ಯ. ಮಾನಸಿಕ ಒತ್ತಡದ ಸಂದರ್ಭಗಳಲ್ಲಿ ಸಹಾಯವನ್ನು ಹುಡುಕುವುದು ಜೀವ ಉಳಿಸುವ ಪ್ರಮುಖ ಹೆಜ್ಜೆಯಾಗಿದ್ದು, ಕುಟುಂಬ ಹಾಗೂ ಸಮಾಜ ಬೆಂಬಲ ಅತ್ಯಂತ ಮುಖ್ಯವಾಗಿದೆ.
A BSc student allegedly died by suicide after being pressured for money in connection with a ganja (cannabis) case. Following the incident, three police personnel have been suspended.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am