ಬ್ರೇಕಿಂಗ್ ನ್ಯೂಸ್
29-04-26 11:10 pm HK News Staffer ಕ್ರೈಂ
ಧಾರವಾಡ, ಏಪ್ರಿಲ್ 29: ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಆತ್ಮಹತ್ಯೆ ಪ್ರಕರಣವು ರಾಜ್ಯವನ್ನೇ ಬೆಚ್ಚಿಬೀಳಿಸುವಂತೆ ತಿರುವು ಪಡೆದುಕೊಂಡಿದ್ದು, ಧಾರವಾಡ ನಗರದ ವಿದ್ಯಾಗಿರಿ ಪೊಲೀಸ್ ಠಾಣೆಯ ಮೂವರು ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಹೆಡ್ ಕಾನ್ಸ್ಟೇಬಲ್ ಚಂದ್ರು ನಡುವಿನಮನಿ, ಕಿರಣ್ ಡೊಕ್ಕಣ್ಣನವರ್ ಹಾಗೂ ಸಯದ್ ತಹಸಿಲ್ದಾರ್ ವಿರುದ್ಧ ಸಸ್ಪೆಂಡ್ ಕ್ರಮ ಕೈಗೊಳ್ಳಲಾಗಿದೆ.
ಮೃತ ಆದಿತ್ಯ ಮ್ಯಾಗೇರಿ, ಬಾಗಲಕೋಟೆ ಜಿಲ್ಲೆಯ ಬೇಲೂರು ಗ್ರಾಮದವನಾಗಿದ್ದು, ಕಿಟೆಲ್ ಕಾಲೇಜು ನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದನು. ಗಿರಿನಗರದಲ್ಲಿ ಸ್ನೇಹಿತರೊಂದಿಗೆ ವಾಸವಾಗಿದ್ದ ಆದಿತ್ಯನನ್ನು ಗಾಂಜಾ ಸೇವನೆ ಆರೋಪದಡಿ ಪೊಲೀಸರ ವಶಕ್ಕೆ ಪಡೆದುಕೊಂಡಿದ್ದರು. ಆದರೆ ಪರೀಕ್ಷೆಯಲ್ಲಿ ಗಾಂಜಾ ಸೇವನೆ ನೆಗೆಟಿವ್ ಬಂದಿದ್ದರೂ, ಪೊಲೀಸರು ₹2,000 ಹಣ ಬೇಡಿಕೆ ಇಟ್ಟಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ತಾಯಿಯಿಂದ ಹಣ ಕಳುಹಿಸುವಂತೆ ಕೇಳಿದ್ದ ಆದಿತ್ಯಗೆ ನಿರಾಕರಣೆ ಬಂದಿದ್ದು, ಪೊಲೀಸರು ಮತ್ತೆ ಕಿರುಕುಳ ನೀಡಬಹುದು ಎಂಬ ಭಯದಿಂದ ತಡರಾತ್ರಿ ನೇಣಿಗೆ ಶರಣಾಗಿದ್ದಾನೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. “ನನ್ನ ಮಗನ ಸಾವಿಗೆ ಪೊಲೀಸರ ಕಿರುಕುಳವೇ ಕಾರಣ” ಎಂದು ತಾಯಿ ಕವಿತಾ ಮ್ಯಾಗೇರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪ್ರಕರಣ ಗಂಭೀರವಾಗುತ್ತಿದ್ದಂತೆಯೇ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ ಕರೆ ಮಾಡಿ ನ್ಯಾಯಯುತ ತನಿಖೆ ನಡೆಸುವಂತೆ ಸೂಚಿಸಿದ್ದಾರೆ. ತಪ್ಪಿತಸ್ಥ ಪೊಲೀಸ್ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್, ಹಿರಿಯ ಅಧಿಕಾರಿಗಳ ವರದಿ ಆಧಾರದ ಮೇಲೆ ಮೂವರು ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಡಿಸಿಪಿ ಶೃತಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಹಣ ಬೇಡಿಕೆ ಆರೋಪಗಳನ್ನೂ ಪರಿಶೀಲಿಸಲಾಗುತ್ತಿದೆ. ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ ಅವರನ್ನು ರಕ್ಷಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಇದೇ ವೇಳೆ, ಗಾಂಜಾ ಡ್ರೈವ್ ವೇಳೆ ಇಬ್ಬರು ಪೆಡ್ಲರ್ಗಳನ್ನು ಬಂಧಿಸಲಾಗಿದ್ದು, ಗಾಂಜಾ ಸೇವನೆ ದೃಢಪಟ್ಟ ಇಬ್ಬರು ವಿದ್ಯಾರ್ಥಿಗಳ ವಿರುದ್ಧವೂ ಪ್ರಕರಣ ದಾಖಲಾಗಿದೆ.
ಕಾನೂನು ರಕ್ಷಕರ ಮೇಲೆ ಇಂತಹ ಗಂಭೀರ ಆರೋಪಗಳು ಸಮಾಜದಲ್ಲಿ ಆತಂಕ ಮೂಡಿಸುತ್ತವೆ. ಯಾವುದೇ ಕಿರುಕುಳ ಎದುರಾದಾಗ ಕಾನೂನು ಮಾರ್ಗದಲ್ಲಿ ದೂರು ನೀಡುವುದು ಅಗತ್ಯ. ಮಾನಸಿಕ ಒತ್ತಡದ ಸಂದರ್ಭಗಳಲ್ಲಿ ಸಹಾಯವನ್ನು ಹುಡುಕುವುದು ಜೀವ ಉಳಿಸುವ ಪ್ರಮುಖ ಹೆಜ್ಜೆಯಾಗಿದ್ದು, ಕುಟುಂಬ ಹಾಗೂ ಸಮಾಜ ಬೆಂಬಲ ಅತ್ಯಂತ ಮುಖ್ಯವಾಗಿದೆ.
A BSc student allegedly died by suicide after being pressured for money in connection with a ganja (cannabis) case. Following the incident, three police personnel have been suspended.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm