ಬ್ರೇಕಿಂಗ್ ನ್ಯೂಸ್
30-04-26 10:14 am HK News Staffer ಕ್ರೈಂ
ಬೆಂಗಳೂರು, ಏ 29: ಅಮ್ಮನ ಜೊತೆ ಬಟ್ಟೆ ಖರೀದಿಸಲು ಶಿವಾಜಿನಗರಕ್ಕೆ ಬಂದಿದ್ದ ಬಾಲಕ ದ್ವಿಚಕ್ರ ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು, ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ನಗರದಲ್ಲಿ ನಡೆದಿದೆ. ಮಗನ ಸಾವು ಕಣ್ಣಾರೆ ಕಂಡ ತಾಯಿ ಕುಸಿದು ಬಿದ್ದು ಆಸ್ಪತ್ರೆ ಪಾಲಾಗಿದ್ದಾರೆ.
ಸಯ್ಯದ್ ಸುಫಿಯಾನ್ (17) ಪ್ರಾಣ ಕಳೆದುಕೊಂಡ ಮಗ. ತಾಯಿ ಉಮೇ ಸಲ್ಮಾ ಆರೋಗ್ಯದಲ್ಲಿ ಏರುಪೇರಾಗಿ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಧ್ಯಮ ವರ್ಗದ ಸಯ್ಯದ್ ಕಾಡುಗೊಂಡನಹಳ್ಳಿ ವೆಂಕಟಾಪುರದಲ್ಲಿ ನೆಲೆಸಿದ್ದ. ಪ್ರಥಮ ಪಿಯುಸಿಯಲ್ಲಿ ಉತ್ತಮ ಅಂಕ ಪಡೆದು ದ್ವಿತೀಯ ಪಿಯುಸಿ ವ್ಯಾಸಂಗಕ್ಕಾಗಿ ಸನ್ನದ್ಧನಾಗಿದ್ದ. ಕಾಲೇಜಿಗೆ ಹೋಗಲು ಬಟ್ಟೆ ಖರೀದಿಸಲು ಆಕ್ಟಿವಾ ಹೊಂಡಾ ವಾಹನದಲ್ಲಿ ಅಮ್ಮ ಹಾಗೂ ಸೋದರ ಸಂಬಂಧಿ ಜೊತೆ ಶಿವಾಜಿನಗರಕ್ಕೆ ಬಂದಿದ್ದ. ಬಟ್ಟೆ ಖರೀದಿಗಾಗಿ ಜನಜಂಗುಳಿ ಪ್ರದೇಶದಲ್ಲಿ ದ್ವಿಚಕ್ರ ವಾಹನ ಪಾರ್ಕಿಂಗ್ಗೆ ಮುಂದಾಗಿದ್ದ. ಇದೇ ವೇಳೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿಯಿತು.
ಕಣ್ಣೆದುರೇ ಮಗನ ಸಾವು ಕಂಡ ತಾಯಿಗೆ ಆಘಾತ: ಈ ವೇಳೆ ವಿದ್ಯುತ್ ಕಂಬಕ್ಕೆ ತಾಗಿಕೊಂಡಿದ್ದ ವೈರ್ ನೇರವಾಗಿ ಸೈಯದ್ಗೆ ಸ್ಪರ್ಶಿಸಿದ ಪರಿಣಾಮ ವಿದ್ಯುತ್ ಪ್ರವಹಿಸಿ ಕ್ಷರ್ಣಾಧದಲ್ಲಿ ಆತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಸ್ಥಳೀಯರ ನೆರವಿನಿಂದ ಬಾಲಕನನ್ನು ಬೌರಿಂಗ್ ಆಸ್ಪತ್ರೆಗೆ ಸೇರಿಸಿದ್ದರು. ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ಹೇಳುತ್ತಿದ್ದಂತೆ ತಾಯಿ ಪ್ರಜ್ಞೆ ತಪ್ಪಿ ಕುಸಿದು ಬಿದ್ದಿದ್ದಾರೆ. ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಸಂಬಂಧಿಗಳು ತಿಳಿಸಿದ್ದಾರೆ.
ಸಯ್ಯದ್ ತಂದೆ ಶಫಿವುಲ್ಲಾ ಅವರು ಆಟೋ ಮೊಬೈಲ್ ಶಾಪ್ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ. ತಾಯಿ ಉಮೇ ಸಲ್ಮಾ ಗೃಹಿಣಿಯಾಗಿದ್ದಾರೆ. ಅವರಿಗೆ ಆರು ವರ್ಷದ ಪುತ್ರಿಯೂ ಇದ್ದಾಳೆ. ಪೋಷಕರಿಗೆ ಸಯ್ಯದ್ನನ್ನು ಚೆನ್ನಾಗಿ ಓದಿಸಿ ಇಂಜಿನಿಯರಿಂಗ್ ಓದಿಸುವ ಆಸೆ ಇತ್ತು. ಬೌರಿಂಗ್ ಆಸ್ಪತ್ರೆಯ ಗೋಡೆ ಕುಸಿಯುವ ಕೆಲ ಕ್ಷಣಗಳ ಹಿಂದೆ ಈ ದುರಂತ ಸಂಭವಿಸಿದೆ. ಸುಮಾರು 50 ಮೀಟರ್ ಅಂತರದಲ್ಲಿ ಈ ಘಟನೆ ನಡೆದಿದೆ ಎಂದು ಸಂಬಂಧಿ ಅಯಾನ್ ತಿಳಿಸಿದ್ದಾರೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm