ಬ್ರೇಕಿಂಗ್ ನ್ಯೂಸ್
30-04-26 10:45 am HK News Staffer ಕ್ರೈಂ
ಕೋಲಾರ, ಏಪ್ರಿಲ್ 30: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಸಂಚಲನ ಮೂಡಿಸಿರುವ ನಕಲಿ ಪಿಎಚ್ಡಿ ಹಗರಣ ಇದೀಗ ದೊಡ್ಡ ಮಟ್ಟದಲ್ಲಿ ಬೆಳಕಿಗೆ ಬಂದಿದೆ. ಕೋಲಾರ ಸೇರಿದಂತೆ ವಿವಿಧ ಭಾಗಗಳ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದ 400ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹಠಾತ್ ರಾಜೀನಾಮೆ ನೀಡಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಸರ್ಕಾರದಿಂದ ದಾಖಲೆ ಪರಿಶೀಲನೆಗಾಗಿ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯವಿಧಾನ (SOP) ಜಾರಿಗೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಅನೇಕರು ನಕಲಿ ಪಿಎಚ್ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದರೆಂಬುದು ಹೊರಬಿದ್ದಿದೆ. ಕಾಲೇಜು ಶಿಕ್ಷಣ ಇಲಾಖೆಯ ಮಾಹಿತಿಯ ಪ್ರಕಾರ, ಈಗಾಗಲೇ 25ಕ್ಕೂ ಹೆಚ್ಚು ಉಪನ್ಯಾಸಕರು ಸಲ್ಲಿಸಿದ ಪಿಎಚ್ಡಿ ಪ್ರಮಾಣಪತ್ರಗಳು ನಕಲಿ ಎಂಬುದು ದೃಢಪಟ್ಟಿದೆ. ಇನ್ನೂ 350ಕ್ಕೂ ಹೆಚ್ಚು ಮಂದಿ ಅನಾರೋಗ್ಯ, ವೈಯಕ್ತಿಕ ಕಾರಣ ಅಥವಾ ಬೇರೆ ಉದ್ಯೋಗ ಸಿಕ್ಕಿದೆ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. 30ಕ್ಕೂ ಹೆಚ್ಚು ಉಪನ್ಯಾಸಕರು ದೀರ್ಘಕಾಲದಿಂದ ಗೈರುಹಾಜರಾಗಿರುವುದೂ ಗಮನಾರ್ಹವಾಗಿದೆ.
ಉದ್ಯೋಗ ಉಳಿಸಿಕೊಳ್ಳುವ ಒತ್ತಡದಲ್ಲಿ ಹಲವರು ಲಕ್ಷಾಂತರ ರೂಪಾಯಿ ಸಾಲ ಮಾಡಿ ನಕಲಿ ಪಿಎಚ್ಡಿ ಖರೀದಿಸಿರುವುದಾಗಿ ತಿಳಿದುಬಂದಿದೆ. ಮಧ್ಯವರ್ತಿಗಳು “ಹೊರ ರಾಜ್ಯದ ಮಾನ್ಯತೆ ಹೊಂದಿದ ಪಿಎಚ್ಡಿ” ಕೊಡಿಸುವುದಾಗಿ ನಂಬಿಸಿ ಒಬ್ಬರಿಂದ ₹5 ರಿಂದ ₹7 ಲಕ್ಷದವರೆಗೆ ಹಣ ಪಡೆದು, ಕೇವಲ 15 ದಿನಗಳಲ್ಲಿ ಪ್ರಮಾಣಪತ್ರ, ಕೋರ್ಸ್ ವರ್ಕ್ ಹಾಗೂ ಪ್ರಬಂಧಗಳನ್ನೂ ಸಿದ್ಧಪಡಿಸಿ ನೀಡುತ್ತಿದ್ದರೆಂಬ ಮಾಹಿತಿ ಬಹಿರಂಗವಾಗಿದೆ.
ಈ ದಾಖಲೆಗಳನ್ನು ಆಧಾರ ಮಾಡಿಕೊಂಡು ಹಲವರು ಉಪನ್ಯಾಸಕರಾಗಿ ನೇಮಕಗೊಂಡಿದ್ದು, ಈಗ ಎಸ್ಒಪಿ ಜಾರಿಯಾದ ನಂತರ ಸಿಕ್ಕಿಬೀಳುವ ಭಯದಿಂದ ಸ್ವಯಂ ರಾಜೀನಾಮೆ ನೀಡುತ್ತಿದ್ದಾರೆ. ಇದರಿಂದ ಹಣ ಕಳೆದುಕೊಂಡವರೂ ಉದ್ಯೋಗ ಕಳೆದುಕೊಂಡವರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಯುಜಿಸಿ ನಿಯಮಗಳ ಪ್ರಕಾರ ಬೋಧಕರಿಗೆ ಸ್ನಾತಕೋತ್ತರ ಪದವಿಯ ಜೊತೆಗೆ ಎನ್ಇಟಿ ಅಥವಾ ಕೆ-ಸೆಟ್ ಅರ್ಹತೆ ಹಾಗೂ ಪಿಎಚ್ಡಿ ಅಗತ್ಯ. ಈ ನಿಯಮಗಳನ್ನು ದುರುಪಯೋಗಪಡಿಸಿಕೊಂಡು ನಕಲಿ ಪ್ರಮಾಣಪತ್ರಗಳ ಮೂಲಕ ಉದ್ಯೋಗ ಪಡೆದವರ ವಿರುದ್ಧ ಈಗ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿ ಟಿ.ಆರ್. ಶೋಭಾ ತಿಳಿಸಿದ್ದಾರೆ.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 10:45 am
HK News Staffer
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm
ಬೆಂಗಳೂರಿನಲ್ಲಿ ದಿಢೀರ್ ಮಳೆ ಆರ್ಭಟ ; ಬೌರಿಂಗ್ ಆಸ್ಪ...
29-04-26 08:12 pm
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm