ಬ್ರೇಕಿಂಗ್ ನ್ಯೂಸ್
30-04-26 10:45 am HK News Staffer ಕ್ರೈಂ
ಕೋಲಾರ, ಏಪ್ರಿಲ್ 30: ರಾಜ್ಯದ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಭಾರೀ ಸಂಚಲನ ಮೂಡಿಸಿರುವ ನಕಲಿ ಪಿಎಚ್ಡಿ ಹಗರಣ ಇದೀಗ ದೊಡ್ಡ ಮಟ್ಟದಲ್ಲಿ ಬೆಳಕಿಗೆ ಬಂದಿದೆ. ಕೋಲಾರ ಸೇರಿದಂತೆ ವಿವಿಧ ಭಾಗಗಳ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿದ್ದ 400ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಹಠಾತ್ ರಾಜೀನಾಮೆ ನೀಡಿರುವುದು ಅನುಮಾನಗಳಿಗೆ ಕಾರಣವಾಗಿದೆ.
ಸರ್ಕಾರದಿಂದ ದಾಖಲೆ ಪರಿಶೀಲನೆಗಾಗಿ ಕಟ್ಟುನಿಟ್ಟಿನ ಪ್ರಮಾಣಿತ ಕಾರ್ಯವಿಧಾನ (SOP) ಜಾರಿಗೊಂಡ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದ್ದು, ಅನೇಕರು ನಕಲಿ ಪಿಎಚ್ಡಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದರೆಂಬುದು ಹೊರಬಿದ್ದಿದೆ. ಕಾಲೇಜು ಶಿಕ್ಷಣ ಇಲಾಖೆಯ ಮಾಹಿತಿಯ ಪ್ರಕಾರ, ಈಗಾಗಲೇ 25ಕ್ಕೂ ಹೆಚ್ಚು ಉಪನ್ಯಾಸಕರು ಸಲ್ಲಿಸಿದ ಪಿಎಚ್ಡಿ ಪ್ರಮಾಣಪತ್ರಗಳು ನಕಲಿ ಎಂಬುದು ದೃಢಪಟ್ಟಿದೆ. ಇನ್ನೂ 350ಕ್ಕೂ ಹೆಚ್ಚು ಮಂದಿ ಅನಾರೋಗ್ಯ, ವೈಯಕ್ತಿಕ ಕಾರಣ ಅಥವಾ ಬೇರೆ ಉದ್ಯೋಗ ಸಿಕ್ಕಿದೆ ಎಂದು ಹೇಳಿ ರಾಜೀನಾಮೆ ನೀಡಿದ್ದಾರೆ. 30ಕ್ಕೂ ಹೆಚ್ಚು ಉಪನ್ಯಾಸಕರು ದೀರ್ಘಕಾಲದಿಂದ ಗೈರುಹಾಜರಾಗಿರುವುದೂ ಗಮನಾರ್ಹವಾಗಿದೆ.
ಉದ್ಯೋಗ ಉಳಿಸಿಕೊಳ್ಳುವ ಒತ್ತಡದಲ್ಲಿ ಹಲವರು ಲಕ್ಷಾಂತರ ರೂಪಾಯಿ ಸಾಲ ಮಾಡಿ ನಕಲಿ ಪಿಎಚ್ಡಿ ಖರೀದಿಸಿರುವುದಾಗಿ ತಿಳಿದುಬಂದಿದೆ. ಮಧ್ಯವರ್ತಿಗಳು “ಹೊರ ರಾಜ್ಯದ ಮಾನ್ಯತೆ ಹೊಂದಿದ ಪಿಎಚ್ಡಿ” ಕೊಡಿಸುವುದಾಗಿ ನಂಬಿಸಿ ಒಬ್ಬರಿಂದ ₹5 ರಿಂದ ₹7 ಲಕ್ಷದವರೆಗೆ ಹಣ ಪಡೆದು, ಕೇವಲ 15 ದಿನಗಳಲ್ಲಿ ಪ್ರಮಾಣಪತ್ರ, ಕೋರ್ಸ್ ವರ್ಕ್ ಹಾಗೂ ಪ್ರಬಂಧಗಳನ್ನೂ ಸಿದ್ಧಪಡಿಸಿ ನೀಡುತ್ತಿದ್ದರೆಂಬ ಮಾಹಿತಿ ಬಹಿರಂಗವಾಗಿದೆ.
ಈ ದಾಖಲೆಗಳನ್ನು ಆಧಾರ ಮಾಡಿಕೊಂಡು ಹಲವರು ಉಪನ್ಯಾಸಕರಾಗಿ ನೇಮಕಗೊಂಡಿದ್ದು, ಈಗ ಎಸ್ಒಪಿ ಜಾರಿಯಾದ ನಂತರ ಸಿಕ್ಕಿಬೀಳುವ ಭಯದಿಂದ ಸ್ವಯಂ ರಾಜೀನಾಮೆ ನೀಡುತ್ತಿದ್ದಾರೆ. ಇದರಿಂದ ಹಣ ಕಳೆದುಕೊಂಡವರೂ ಉದ್ಯೋಗ ಕಳೆದುಕೊಂಡವರೂ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಯುಜಿಸಿ ನಿಯಮಗಳ ಪ್ರಕಾರ ಬೋಧಕರಿಗೆ ಸ್ನಾತಕೋತ್ತರ ಪದವಿಯ ಜೊತೆಗೆ ಎನ್ಇಟಿ ಅಥವಾ ಕೆ-ಸೆಟ್ ಅರ್ಹತೆ ಹಾಗೂ ಪಿಎಚ್ಡಿ ಅಗತ್ಯ. ಈ ನಿಯಮಗಳನ್ನು ದುರುಪಯೋಗಪಡಿಸಿಕೊಂಡು ನಕಲಿ ಪ್ರಮಾಣಪತ್ರಗಳ ಮೂಲಕ ಉದ್ಯೋಗ ಪಡೆದವರ ವಿರುದ್ಧ ಈಗ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಮುಖ್ಯ ಆಡಳಿತಾಧಿಕಾರಿ ಟಿ.ಆರ್. ಶೋಭಾ ತಿಳಿಸಿದ್ದಾರೆ.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm