ಬ್ರೇಕಿಂಗ್ ನ್ಯೂಸ್
30-04-26 04:30 pm HK News Staffer ಕ್ರೈಂ
ನವದೆಹಲಿ, ಎಪ್ರಿಲ್ 30: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಮರು ತನಿಖೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಎಪ್ರಿಲ್ 29ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಹೇಳಿದ್ದಲ್ಲದೆ, ರಾಜ್ಯ ಸರ್ಕಾರ ಮತ್ತು ಸಿಬಿಐ ತನಿಖಾ ತಂಡಕ್ಕೆ ನೋಟಿಸ್ ಜಾರಿ ಮಾಡಿದೆ.
ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿತು. ಕುಸುಮಾವತಿ ಗೌಡ ಪರ ವಾದ ಮಂಡಿಸಿದ ವಕೀಲರು ಪ್ರಕರಣದಲ್ಲಿ ಹಲವು ಸಾಕ್ಷಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ರಾಜ್ಯ ಸರ್ಕಾರ ಮತ್ತು ಸಿಬಿಐ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿ, ಗಂಭೀರ ಪ್ರಕರಣದಲ್ಲಿ ಇಷ್ಟೊಂದು ನಿರಾಸಕ್ತಿ ವಹಿಸುವುದು ಸರಿಯಲ್ಲ ಎಂದು ಹೇಳಿದ್ದಲ್ಲದೆ, ರಾಜ್ಯ ಸರ್ಕಾರದ ಪರವಾಗಿ ಮತ್ತು ಸಿಬಿಐ ವಕೀಲರು ಜುಲೈ 14ರೊಳಗೆ ಲಿಖಿತ ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರ ಮತ್ತು ಸಿಬಿಐ ಪರ ವಕೀಲರು ಹಾಜರಿರಲಿಲ್ಲ. ಇದೇ ವೇಳೆ, ಸೌಜನ್ಯಾ ಪರ ವಕೀಲರು ಪ್ರಕರಣದ ಪ್ರಮುಖ ಸಾಕ್ಷ್ಯಗಳು ಮತ್ತು ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟಿನ ಗಮನಕ್ಕೆ ತಂದಿದ್ದಾರೆ.
ಇದರಂತೆ, ಪ್ರಕರಣದ ಎಲ್ಲ ಸಾಕ್ಷಿಗಳಿಗೆ ತಕ್ಷಣದಿಂದಲೇ ರಕ್ಷಣೆ ನೀಡಬೇಕು, ರಾಜ್ಯ ಸರ್ಕಾರ ಮತ್ತು ಸಿಬಿಐ ಎರಡು ವಾರಗಳಲ್ಲಿ ಲಿಖಿತ ರೂಪದಲ್ಲಿ ತಮ್ಮ ನಿಲುವು ಸ್ಪಷ್ಟಪಡಿಸಬೇಕು. ಮರು ತನಿಖೆಯನ್ನು ಯಾವ ಸಂಸ್ಥೆಯಿಂದ ನಡೆಸಬಹುದು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿತು.
ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಶೋಭಾ ಗುಪ್ತಾ, ಶೇಖರ ದೇವಸ್, ಸಂಜಯ್ ನೂಲವಿ, ಆಶುತೋಷ್ ದುಬೇ ಹಾಜರಿದ್ದರು. ಸಂತೋಷ್ ರಾವ್ ಪರವಾಗಿ ಹಿರಿಯ ವಕೀಲ ಗುರುರಾಜ್ ವಾದ ಮಂಡಿಸಿದರು.
30-04-26 11:53 am
HK News Staffer
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
30-04-26 04:30 pm
HK News Staffer
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am
ಗಾಂಜಾ ಪ್ರಕರಣದಲ್ಲಿ ಹಣ ಕೇಳಿದ್ದಕ್ಕೆ ಬಿಎಸ್ಸಿ ವಿದ...
29-04-26 11:10 pm