ಬ್ರೇಕಿಂಗ್ ನ್ಯೂಸ್
30-04-26 04:30 pm HK News Staffer ಕ್ರೈಂ
ನವದೆಹಲಿ, ಎಪ್ರಿಲ್ 30: ಧರ್ಮಸ್ಥಳದ ಸೌಜನ್ಯಾ ಕೊಲೆ ಪ್ರಕರಣದಲ್ಲಿ ಮರು ತನಿಖೆ ಕೋರಿ ಸಲ್ಲಿಸಿರುವ ಅರ್ಜಿಯನ್ನು ಎಪ್ರಿಲ್ 29ರಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಪ್ರಕರಣದ ಸಾಕ್ಷಿಗಳಿಗೆ ರಕ್ಷಣೆ ನೀಡುವಂತೆ ಹೇಳಿದ್ದಲ್ಲದೆ, ರಾಜ್ಯ ಸರ್ಕಾರ ಮತ್ತು ಸಿಬಿಐ ತನಿಖಾ ತಂಡಕ್ಕೆ ನೋಟಿಸ್ ಜಾರಿ ಮಾಡಿದೆ.
ಸೌಜನ್ಯಾ ತಾಯಿ ಕುಸುಮಾವತಿ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಸಂಜಯ್ ಕುಮಾರ್ ಅವರಿದ್ದ ದ್ವಿಸದಸ್ಯ ಪೀಠವು ವಿಚಾರಣೆ ನಡೆಸಿತು. ಕುಸುಮಾವತಿ ಗೌಡ ಪರ ವಾದ ಮಂಡಿಸಿದ ವಕೀಲರು ಪ್ರಕರಣದಲ್ಲಿ ಹಲವು ಸಾಕ್ಷಿಗಳು ಅನುಮಾನಾಸ್ಪದವಾಗಿ ಮೃತಪಟ್ಟಿದ್ದು ರಾಜ್ಯ ಸರ್ಕಾರ ಮತ್ತು ಸಿಬಿಐ ರಕ್ಷಣೆ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರಕ್ಕೆ ನೋಟೀಸ್ ಜಾರಿ ಮಾಡಿ, ಗಂಭೀರ ಪ್ರಕರಣದಲ್ಲಿ ಇಷ್ಟೊಂದು ನಿರಾಸಕ್ತಿ ವಹಿಸುವುದು ಸರಿಯಲ್ಲ ಎಂದು ಹೇಳಿದ್ದಲ್ಲದೆ, ರಾಜ್ಯ ಸರ್ಕಾರದ ಪರವಾಗಿ ಮತ್ತು ಸಿಬಿಐ ವಕೀಲರು ಜುಲೈ 14ರೊಳಗೆ ಲಿಖಿತ ಅಫಿಡವಿಟ್ ಸಲ್ಲಿಸಲು ಸೂಚನೆ ನೀಡಿತು. ವಿಚಾರಣೆ ವೇಳೆ ರಾಜ್ಯ ಸರ್ಕಾರ ಮತ್ತು ಸಿಬಿಐ ಪರ ವಕೀಲರು ಹಾಜರಿರಲಿಲ್ಲ. ಇದೇ ವೇಳೆ, ಸೌಜನ್ಯಾ ಪರ ವಕೀಲರು ಪ್ರಕರಣದ ಪ್ರಮುಖ ಸಾಕ್ಷ್ಯಗಳು ಮತ್ತು ದಾಖಲೆಗಳನ್ನು ಮುಚ್ಚಿದ ಲಕೋಟೆಯಲ್ಲಿ ಕೋರ್ಟಿನ ಗಮನಕ್ಕೆ ತಂದಿದ್ದಾರೆ.
ಇದರಂತೆ, ಪ್ರಕರಣದ ಎಲ್ಲ ಸಾಕ್ಷಿಗಳಿಗೆ ತಕ್ಷಣದಿಂದಲೇ ರಕ್ಷಣೆ ನೀಡಬೇಕು, ರಾಜ್ಯ ಸರ್ಕಾರ ಮತ್ತು ಸಿಬಿಐ ಎರಡು ವಾರಗಳಲ್ಲಿ ಲಿಖಿತ ರೂಪದಲ್ಲಿ ತಮ್ಮ ನಿಲುವು ಸ್ಪಷ್ಟಪಡಿಸಬೇಕು. ಮರು ತನಿಖೆಯನ್ನು ಯಾವ ಸಂಸ್ಥೆಯಿಂದ ನಡೆಸಬಹುದು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ನ್ಯಾಯಪೀಠ ಸರ್ಕಾರಕ್ಕೆ ಸೂಚಿಸಿತು.
ಅರ್ಜಿದಾರರ ಪರವಾಗಿ ಹಿರಿಯ ವಕೀಲರಾದ ಶೋಭಾ ಗುಪ್ತಾ, ಶೇಖರ ದೇವಸ್, ಸಂಜಯ್ ನೂಲವಿ, ಆಶುತೋಷ್ ದುಬೇ ಹಾಜರಿದ್ದರು. ಸಂತೋಷ್ ರಾವ್ ಪರವಾಗಿ ಹಿರಿಯ ವಕೀಲ ಗುರುರಾಜ್ ವಾದ ಮಂಡಿಸಿದರು.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm