ಬ್ರೇಕಿಂಗ್ ನ್ಯೂಸ್
01-05-26 01:45 pm HK News Staffer ಕ್ರೈಂ
ಬೆಂಗಳೂರು, ಮೇ 1: ಮಹಿಳೆಯರನ್ನು ಬ್ಲ್ಯಾಕ್ಮೇಲ್ ಮಾಡಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ರಾಮನಗರ ಮಕ್ಕಳ ಆಯೋಗ ಸಮಿತಿ ಸದಸ್ಯ ಚಂದ್ರೇಗೌಡನನ್ನು ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಬೆಳಕಿಗೆ ಬಂದಂತೆ ಹಲವು ಆಘಾತಕಾರಿ ಅಂಶಗಳು ಬಹಿರಂಗವಾಗಿವೆ.
ಪೊಲೀಸರ ಮಾಹಿತಿ ಪ್ರಕಾರ, ಆರೋಪಿ ಮಹಿಳೆಯರನ್ನು ಪರಿಚಯ ಮಾಡಿಕೊಂಡು ನಕಲಿ ಪರಿಚಯ ನೀಡಿ ನಂಬಿಸುತ್ತಿದ್ದ. ಪೊಲೀಸ್ ಅಧಿಕಾರಿ, ವಕೀಲ, ಮಾಧ್ಯಮ ಪ್ರತಿನಿಧಿ ಎಂಬಂತೆ ನಕಲಿ ಗುರುತಿನ ಚೀಟಿಗಳನ್ನು ಬಳಸಿ ಭೀತಿ ಹುಟ್ಟಿಸಿ, ನಂತರ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದನು. ಖಾಸಗಿ ಕ್ಷಣಗಳನ್ನು ವಿಡಿಯೋ ಮಾಡಿ, ಅದನ್ನೇ ಬ್ಲ್ಯಾಕ್ಮೇಲ್ಗೆ ಬಳಸುತ್ತಿದ್ದನೆಂಬ ಆರೋಪ ಕೇಳಿಬಂದಿದೆ.
ಆರೋಪಿಯ ಮೊಬೈಲ್ ಪರಿಶೀಲನೆಯ ವೇಳೆ 20ಕ್ಕೂ ಹೆಚ್ಚು ಮಹಿಳೆಯರ ವಿಡಿಯೋ ಹಾಗೂ ಫೋಟೋಗಳು ಪತ್ತೆಯಾಗಿದ್ದು, ಪ್ರಕರಣದ ಗಂಭೀರತೆ ಹೆಚ್ಚಿಸಿದೆ. ಗಂಡನಿಂದ ದೂರವಾಗಿದ್ದ ಮಹಿಳೆಯನ್ನು ಮದುವೆಯಾಗುತ್ತೇನೆಂದು ನಂಬಿಸಿ, ಆಕೆಯೊಂದಿಗೆ ಸಂಬಂಧ ಬೆಳೆಸಿ ಬಳಿಕ ಹಣ ವಸೂಲಿ ಮಾಡಿದ್ದಾನೆ ಎಂದು ದೂರಲಾಗಿದೆ. ಒಂದೇ ಪ್ರಕರಣದಲ್ಲಿ ಸುಮಾರು 5 ಲಕ್ಷ ರೂಪಾಯಿ ಹಣ ಪಡೆದಿರುವುದಾಗಿ ತಿಳಿದುಬಂದಿದೆ.
ಇನ್ನು ಮದುವೆಯ ನಾಟಕವನ್ನೂ ಆಡಿದ್ದ ಆರೋಪಿ, ಸಂತ್ರಸ್ತೆಗೆ ಅರಿಶಿನದ ಕೊಂಬು ಕಟ್ಟುವ ಮೂಲಕ ವಿವಾಹವಾಗಿದ್ದೇನೆಂದು ನಂಬಿಸಿದ್ದ. ಆಕೆಯ ಆಧಾರ್ ಕಾರ್ಡ್ ಪಡೆದು, ತಾನೇ ಗಂಡನೆಂದು ತೋರಿಸಿ ಮನೆ ಬಾಡಿಗೆ ಒಪ್ಪಂದ ಕೂಡ ಮಾಡಿಸಿದ್ದಾನೆ ಎನ್ನಲಾಗಿದೆ. ಸಂತ್ರಸ್ತೆಯ ಮಗಳ ದಾಖಲೆಗಳನ್ನೂ ಬದಲಾಯಿಸಲು ಯತ್ನಿಸಿದ್ದಾನೆ ಎಂಬ ಆರೋಪವೂ ಕೇಳಿಬಂದಿದೆ.
ಸಂತ್ರಸ್ತೆ ಆರೋಪಿ ಮೊಬೈಲ್ ಪರಿಶೀಲಿಸಿದಾಗ ಈ ದಂಧೆ ಬಯಲಾಗಿದ್ದು, ಬಳಿಕ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ ವಿಚಾರಣೆ ಮುಂದುವರೆಸಿದ್ದಾರೆ.
ಅಪರಿಚಿತರೊಂದಿಗೆ ವೈಯಕ್ತಿಕ ಮಾಹಿತಿ ಹಂಚಿಕೊಳ್ಳುವಾಗ ಹಾಗೂ ಸಂಬಂಧ ಬೆಳೆಸುವಾಗ ಎಚ್ಚರಿಕೆ ಅಗತ್ಯ. ಯಾವುದೇ ರೀತಿಯ ಬೆದರಿಕೆ ಅಥವಾ ಬ್ಲ್ಯಾಕ್ಮೇಲ್ ಎದುರಾದರೆ ತಕ್ಷಣ ಪೊಲೀಸರಿಗೆ ದೂರು ನೀಡುವುದು ಅತ್ಯಂತ ಮುಖ್ಯ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm