ಬ್ರೇಕಿಂಗ್ ನ್ಯೂಸ್
01-05-26 07:18 pm HK News Staffer ಕ್ರೈಂ
ಉಡುಪಿ, ಮೇ 1: ಕೆಲಸದ ಸ್ಥಳದಲ್ಲಿ ನಡೆದ ಸಣ್ಣ ವಿವಾದವೊಂದು ಗಂಭೀರ ಹಿಂಸಾತ್ಮಕ ಘಟನೆಯಾಗಿ ರೂಪುಗೊಂಡ ಪ್ರಕರಣದಲ್ಲಿ ಕೋರ್ಟ್ ಕಠಿಣ ತೀರ್ಪು ನೀಡಿದೆ. ಕೇರಳ ಮೂಲದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ಆದೇಶ ಹೊರಡಿಸಿದೆ.
ಕೇರಳ ಮೂಲದ ರತೀಶ್ ಕೆ.ಟಿ (42) ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ. 2022 ಫೆಬ್ರವರಿ 28 ರಂದು ಕೇರಳ ಮೂಲದ ಸುಧೀರ್ ಮತ್ತು ರತೀಶ ಕೆ.ಟಿ. ಅವರು ಚಾರ ಗ್ರಾಮದ ಮ೦ಡಾಡಿಜಡ್ಡುವಿನಲ್ಲಿರುವ ಅಜಿತ್ ಅಗಸ್ಟಿನ್ ಎಂಬುವವರ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿರುವ ಸಂಜೀವ್ ಕುಮಾರ್ ಎಂಬಾತನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಾರ್ಟಿಯಲ್ಲಿ ಸಾಕಷ್ಟು ಮದ್ಯಪಾನ ಮಾಡಿದ್ದು ಇದೇ ವೇಳೆ ಕೆಲಸದ ವಿಚಾರದಲ್ಲಿ ರತೀಶನನ್ನು ಸುಧೀರ್ ನಿಂದಿಸಿದ್ದು, ಬಳಿಕ ಇಬ್ಬರ ಮಧ್ಯೆ ಜಗಳ ನಡೆದಿತ್ತು.
ಆ ಜಗಳವನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಆರೋಪಿ, ಎರಡು ದಿನಗಳ ನಂತರ ಅಂದರೆ 2022 ಮಾರ್ಚ್ 2ರಂದು ರಾತ್ರಿ ಸುಮಾರು 1 ಗಂಟೆ ವೇಳೆಗೆ ನಿದ್ದೆಯಲ್ಲಿದ್ದ ಸುಧೀರ್ ಮೇಲೆ ಬಿಸಿ ರಾಸಾಯನಿಕ ಆಸಿಡ್ ಎರಚಿ ಪರಾರಿಯಾಗಿದ್ದನು. ಘಟನೆಯಲ್ಲಿ ಸುಧೀರ್ ಗಂಭೀರವಾಗಿ ಗಾಯಗೊಂಡಿದ್ದನ್ನು.
ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಗಳನ್ನು ಪರಿಶೀಲಿಸಿದ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಸರ್ಕ್ಯೂಟ್ ಬೆಂಚ್, ಕಾರ್ಕಳ) ಆರೋಪಿಯನ್ನು ದೋಷಿಯಾಗಿ ಘೋಷಿಸಿ ಶಿಕ್ಷೆ ವಿಧಿಸಿದೆ. ಪ್ರಸ್ತುತ ರತೀಶ್ ಹಿರಿಯಡ್ಕ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am