ಬ್ರೇಕಿಂಗ್ ನ್ಯೂಸ್
01-05-26 07:18 pm HK News Staffer ಕ್ರೈಂ
ಉಡುಪಿ, ಮೇ 1: ಕೆಲಸದ ಸ್ಥಳದಲ್ಲಿ ನಡೆದ ಸಣ್ಣ ವಿವಾದವೊಂದು ಗಂಭೀರ ಹಿಂಸಾತ್ಮಕ ಘಟನೆಯಾಗಿ ರೂಪುಗೊಂಡ ಪ್ರಕರಣದಲ್ಲಿ ಕೋರ್ಟ್ ಕಠಿಣ ತೀರ್ಪು ನೀಡಿದೆ. ಕೇರಳ ಮೂಲದ ವ್ಯಕ್ತಿಗೆ 10 ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ₹30,000 ದಂಡ ವಿಧಿಸಿ ಆದೇಶ ಹೊರಡಿಸಿದೆ.
ಕೇರಳ ಮೂಲದ ರತೀಶ್ ಕೆ.ಟಿ (42) ಜೈಲು ಶಿಕ್ಷೆಗೆ ಗುರಿಯಾದ ವ್ಯಕ್ತಿ. 2022 ಫೆಬ್ರವರಿ 28 ರಂದು ಕೇರಳ ಮೂಲದ ಸುಧೀರ್ ಮತ್ತು ರತೀಶ ಕೆ.ಟಿ. ಅವರು ಚಾರ ಗ್ರಾಮದ ಮ೦ಡಾಡಿಜಡ್ಡುವಿನಲ್ಲಿರುವ ಅಜಿತ್ ಅಗಸ್ಟಿನ್ ಎಂಬುವವರ ತೋಟದಲ್ಲಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡಿಕೊಂಡಿರುವ ಸಂಜೀವ್ ಕುಮಾರ್ ಎಂಬಾತನ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಪಾರ್ಟಿಯಲ್ಲಿ ಸಾಕಷ್ಟು ಮದ್ಯಪಾನ ಮಾಡಿದ್ದು ಇದೇ ವೇಳೆ ಕೆಲಸದ ವಿಚಾರದಲ್ಲಿ ರತೀಶನನ್ನು ಸುಧೀರ್ ನಿಂದಿಸಿದ್ದು, ಬಳಿಕ ಇಬ್ಬರ ಮಧ್ಯೆ ಜಗಳ ನಡೆದಿತ್ತು.
ಆ ಜಗಳವನ್ನು ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಆರೋಪಿ, ಎರಡು ದಿನಗಳ ನಂತರ ಅಂದರೆ 2022 ಮಾರ್ಚ್ 2ರಂದು ರಾತ್ರಿ ಸುಮಾರು 1 ಗಂಟೆ ವೇಳೆಗೆ ನಿದ್ದೆಯಲ್ಲಿದ್ದ ಸುಧೀರ್ ಮೇಲೆ ಬಿಸಿ ರಾಸಾಯನಿಕ ಆಸಿಡ್ ಎರಚಿ ಪರಾರಿಯಾಗಿದ್ದನು. ಘಟನೆಯಲ್ಲಿ ಸುಧೀರ್ ಗಂಭೀರವಾಗಿ ಗಾಯಗೊಂಡಿದ್ದನ್ನು.
ಈ ಸಂಬಂಧ ಹೆಬ್ರಿ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ ದಾಖಲಾಗಿತ್ತು. ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು. ಸಾಕ್ಷ್ಯಗಳನ್ನು ಪರಿಶೀಲಿಸಿದ ಉಡುಪಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ಸರ್ಕ್ಯೂಟ್ ಬೆಂಚ್, ಕಾರ್ಕಳ) ಆರೋಪಿಯನ್ನು ದೋಷಿಯಾಗಿ ಘೋಷಿಸಿ ಶಿಕ್ಷೆ ವಿಧಿಸಿದೆ. ಪ್ರಸ್ತುತ ರತೀಶ್ ಹಿರಿಯಡ್ಕ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am