ಬ್ರೇಕಿಂಗ್ ನ್ಯೂಸ್
02-05-26 12:19 pm HK News Staffer ಕ್ರೈಂ
ಮಂಗಳೂರು, ಮೇ 02: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಎನ್ಐಎ ವಿಶೇಷ ನ್ಯಾಯಾಲಯವು ಅಪರಾಧಿ ಮೊಹಮ್ಮದ್ ಶಾರೀಕ್ಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದ್ದರೂ, ಭದ್ರತಾ ದೃಷ್ಟಿಯಿಂದ ಈ ಶಿಕ್ಷೆ ಸಾಕಾಗುವುದಿಲ್ಲ ಎಂದು ಜೀವಾವಧಿ ಶಿಕ್ಷೆಗೆ ಬದಲಾಯಿಸಲು ಎನ್ಐಎ ಇದೀಗ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಸಿದ್ಧತೆ ನಡೆಸಿದೆ.
2022ರ ನವೆಂಬರ್ 19ರಂದು ಮಂಗಳೂರಿನ ಕಂಕನಾಡಿ ಪ್ರದೇಶದಲ್ಲಿ ಚಲಿಸುತ್ತಿದ್ದ ಆಟೋದಲ್ಲಿ ಭೀಕರ ಸ್ಫೋಟಗೊಂಡಿತ್ತು. ಶಾರೀಕ್ ಸಾಗಿಸುತ್ತಿದ್ದ ಕುಕ್ಕರ್ ಬಾಂಬ್ ಅಚಾನಕ್ ಆಗಿ ಆಟೋದಲ್ಲೇ ಸ್ಫೋಟಗೊಂಡಿತ್ತು. ತನಿಖೆಯಲ್ಲಿ ವೇಳೆ ಶಾರಿಕ್ ಹಲವು ಶಂಕಿತ ಉಗ್ರ ಸಂಘಟನೆಗಳ ಸಂಪರ್ಕದಲ್ಲಿದ್ದ ಎಂಬ ಅಂಶಗಳು ಬೆಳಕಿಗೆ ಬಂದಿದ್ದವು. ಈ ಹಿನ್ನೆಲೆಯಲ್ಲಿ ಹತ್ತು ವರ್ಷದ ಶಿಕ್ಷೆಯ ಬಳಿಕ ಅವನನ್ನು ಸಮಾಜಕ್ಕೆ ಮತ್ತೆ ಬಿಡುಗಡೆ ಮಾಡಿದರೆ ಭದ್ರತಾ ಅಪಾಯ ಹೆಚ್ಚಾಗಬಹುದು ಎಂಬ ಆತಂಕವನ್ನು ಎನ್ಐಎ ವ್ಯಕ್ತಪಡಿಸಿದೆ.
ಶಾರಿಕ್ ಸದ್ಯ 27 ವರ್ಷದವನಿದ್ದು ಈಗಾಗಲೇ ಮೂರು ವರ್ಷ ಜೈಲಿನಲ್ಲಿ ಕಳೆದಿದ್ದಾನೆ. ಶಿಕ್ಷೆಯ ಅವಧಿ ಪೂರ್ಣಗೊಂಡ ನಂತರವೂ 33 ವರ್ಷದವನಿರುವುದರಿಂದ, ಅವನನ್ನು ಉಗ್ರ ಸಂಘಟನೆಗಳು ಮತ್ತೆ ತಮ್ಮ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಸಾಧ್ಯತೆ ಇದೆಯೆಂದು ಅಧಿಕಾರಿಗಳು ಗಂಭೀರ ಚಿಂತನೆಯಲ್ಲಿದ್ದಾರೆ. ಈ ಕಾರಣದಿಂದಲೇ ಜೀವಾವಧಿ ಶಿಕ್ಷೆ ಅಗತ್ಯವೆಂದು ಎನ್ಐಎ ವಾದಿಸಲು ಮುಂದಾಗಿದೆ.
2020ರಲ್ಲಿ ಶಾರೀಕ್ ಮತ್ತು ಸಹಚರರು ಮಂಗಳೂರಿನಲ್ಲಿ ಉಗ್ರ ಪರ ಗೋಡೆ ಬರಹ ಪ್ರಕರಣದಲ್ಲಿ ಬಂಧಿತರಾಗಿದ್ದರೂ, ಸಾಕ್ಷ್ಯ ಸಂಗ್ರಹ ಮತ್ತು ತನಿಖೆ ಸಮರ್ಪಕವಾಗಿ ನಡೆಯಲಿಲ್ಲ ಎಂಬ ಆರೋಪಗಳಿವೆ. ಇದೇ ಕಾರಣದಿಂದ ಪ್ರಕರಣ ದುರ್ಬಲವಾಗಿ, ಆರೋಪಿಗಳಿಗೆ ಜಾಮೀನು ದೊರೆತಿತ್ತು ಎಂದು ಹೇಳಲಾಗುತ್ತಿದೆ.
ಜಾಮೀನು ಬಳಿಕ ಶಾರೀಕ್ ಮತ್ತಷ್ಟು ಶಂಕಿತ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದು, ನಂತರ ಶಿವಮೊಗ್ಗದಲ್ಲಿ ಟ್ರಯಲ್ ಬ್ಲಾಸ್ಟ್ ಮತ್ತು ಅಂತಿಮವಾಗಿ ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ವರೆಗೆ ಘಟನೆಗಳು ನಡೆದಿದ್ದವು. ಆರಂಭಿಕ ಹಂತದಲ್ಲೇ ಪ್ರಕರಣವನ್ನು ಎನ್ಐಎ ಅಥವಾ ಸಿಬಿಐಗೆ ಒಪ್ಪಿಸಿದ್ದರೆ ಈ ದುರಂತವನ್ನು ತಪ್ಪಿಸಬಹುದಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ.
ಈ ನಡುವೆ, ಅಂದಿನ ತನಿಖೆಯ ವೇಳೆ ಲೋಪಗಳಿಗೆ ಕಾರಣವಾದ ಅಂಶಗಳ ಬಗ್ಗೆ ಗಂಭೀರ ಆರೋಪಗಳೂ ಕೇಳಿಬಂದಿವೆ. ಆದರೆ ಇವುಗಳನ್ನು ಸ್ವತಂತ್ರ ತನಿಖೆಯಿಂದ ಮಾತ್ರ ದೃಢಪಡಿಸಬೇಕಿದೆ. ಗಂಭೀರ ಸ್ವರೂಪದ ಪ್ರಕರಣ ಆಗಿದ್ದರೂ, ಗೋಡೆ ಬರಹ ಪ್ರಕರಣದಲ್ಲಿ ಜಾಮೀನು ನೀಡಲಾಗಿತ್ತು. ಎನ್ಐಎ ತನಿಖೆಯೂ ಆಗಿರಲಿಲ್ಲ. ಹೀಗಾಗಿ ಜಾಮೀನಿನಲ್ಲಿ ಹೊರಬಂದು ಮತ್ತೆ ಐಸಿಸ್ ಉಗ್ರರ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದ ಎಂಬುದು ಈಗ ಚರ್ಚೆಗೆ ಗ್ರಾಸವಾಗಿದೆ.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 05:10 pm
HK News Staffer
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm