ಬ್ರೇಕಿಂಗ್ ನ್ಯೂಸ್
05-05-26 11:23 pm HK News Desk ಕ್ರೈಂ
ಮಂಗಳೂರು, ಮೇ 5: ಫೇಸ್ಬುಕ್, ಇನ್ಸ್ ಟಾ ಗ್ರಾಮ್ ರೀತಿಯ ಜಾಲತಾಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲೇ ನಕಲಿ ಎಐ ವಿಡಿಯೋ ಬಳಸಿ ಜನರನ್ನು ಯಾಮಾರಿಸುವ ಯತ್ನ ರಾಜಾರೋಷ ನಡೆಯುತ್ತಿದೆ. ಈ ಮೋಸದ ಜಾಲಕ್ಕೀಗ ಬುದ್ಧಿವಂತರ ಜಿಲ್ಲೆಯೆಂದು ಹಣೆಪಟ್ಟಿ ಹೊತ್ತಿರುವ ಮಂಗಳೂರಿನ ವ್ಯಕ್ತಿಯೇ ಬಲಿಯಾಗಿದ್ದಾರೆ. ನಕಲಿ ಆನ್ಲೈನ್ ಟ್ರೇಡಿಂಗ್ ಮೋಸದಲ್ಲಿ ಸಿಲುಕಿ 75 ವರ್ಷದ ಹಿರಿಯ ನಾಗರಿಕರೊಬ್ಬರು 18.81 ಲಕ್ಷ ರು. ಕಳಕೊಂಡಿರುವುದು ಬೆಳಕಿಗೆ ಬಂದಿದೆ.
ಕಳೆದ ಡಿಸೆಂಬರ್ನಲ್ಲಿ ಸಂತ್ರಸ್ತರು ಫೇಸ್ಬುಕ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಅವರ ರೀತಿಯಲ್ಲೇ ಭಾಷಣವಿರುವ ಆನ್ಲೈನ್ ಟ್ರೇಡಿಂಗ್ ಕುರಿತ ವಿಡಿಯೋವೊಂದನ್ನು ನೋಡಿದ್ದರು. ಇದನ್ನು ನಿಜವೆಂದು ನಂಬಿದ ಅವರು ವಿಡಿಯೋ ಕೆಳಗಿದ್ದ ಲಿಂಕ್ ಕ್ಲಿಕ್ ಮಾಡಿ ತಮ್ಮ ವಿವರಗಳನ್ನು ನೋಂದಾಯಿಸಿದ್ದರು. ಇದಾದ ಬೆನ್ನಲ್ಲೇ ‘ಮೀನಾಕ್ಷಿ’ ಎಂಬ ಹೆಸರಿನ ವ್ಯಕ್ತಿಯಿಂದ ಕರೆ ಬಂದಿದ್ದು, ಹೆಚ್ಚಿನ ಲಾಭದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಹಣ ಡಬಲ್ ಆಗುತ್ತೆ, ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹಣಕಾಸು ಸಚಿವರೇ ಹೇಳುತ್ತಿರುವ ಅಸಲಿ ರೀತಿಯಲ್ಲೇ ಇರುವ ವಿಡಿಯೋ ನಂಬಿ ವ್ಯಕ್ತಿ ತನ್ನ ನಿವೃತ್ತಿಯ ಹಣವನ್ನು ಹೂಡಿಕೆ ಮಾಡಿದ್ದರು.
ಆನಂತರ, ಅಕ್ಷರ ಗೌಡ ಎಂಬ ಹೆಸರಿನ ವ್ಯಕ್ತಿ ಆನಂದ ಉನ್ನಿಕೃಷ್ಣ ಅವರ ಅಸಿಸ್ಟೆಂಟ್ ಎಂದು ಪರಿಚಯಿಸಿಕೊಂಡು, ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವಾಟ್ಸಪ್ ಮೂಲಕ ಹೂಡಿಕೆಗೆ ಪ್ರೇರೇಪಿಸಿದ್ದ. ಆರೋಪಿಗಳ ಮಾತು ನಂಬಿದ ವೃದ್ಧ ವ್ಯಕ್ತಿ ಡಿಸೆಂಬರ್ 18ರಂದು ₹3 ಲಕ್ಷ, ಡಿಸೆಂಬರ್ 26ರಂದು ₹7 ಲಕ್ಷ, ಜನವರಿ 6ರಂದು ₹3 ಲಕ್ಷ ಹಾಗೂ ಜನವರಿ 12ರಂದು ₹5.60 ಲಕ್ಷ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು.
ಒಟ್ಟು ₹18,81,000 ಹಣವನ್ನು ಹೂಡಿಕೆ ಮಾಡಿಸಿಕೊಂಡ ಆರೋಪಿಗಳು ₹1 ಕೋಟಿ ಲಾಭ ನೀಡುವುದಾಗಿ ನಂಬಿಸಿದ್ದರು. ಆದರೆ ಯಾವುದೇ ಲಾಭ ನೀಡದೆ ವಂಚಿಸಿದ್ದು ವಂಚನೆ ತಿಳಿಯುತ್ತಲೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
24-06-26 05:55 pm
HK News Staffer
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 01:00 pm
HK News Staffer
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm
ಅಯೋಧ್ಯೆ ರಾಮ ಮಂದಿರ ಹೆಸರಲ್ಲಿ ದೇಣಿಗೆ ; 200 ಕೋಟಿ...
24-06-26 05:57 pm