ಬ್ರೇಕಿಂಗ್ ನ್ಯೂಸ್
05-05-26 11:23 pm HK News Desk ಕ್ರೈಂ
ಮಂಗಳೂರು, ಮೇ 5: ಫೇಸ್ಬುಕ್, ಇನ್ಸ್ ಟಾ ಗ್ರಾಮ್ ರೀತಿಯ ಜಾಲತಾಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲೇ ನಕಲಿ ಎಐ ವಿಡಿಯೋ ಬಳಸಿ ಜನರನ್ನು ಯಾಮಾರಿಸುವ ಯತ್ನ ರಾಜಾರೋಷ ನಡೆಯುತ್ತಿದೆ. ಈ ಮೋಸದ ಜಾಲಕ್ಕೀಗ ಬುದ್ಧಿವಂತರ ಜಿಲ್ಲೆಯೆಂದು ಹಣೆಪಟ್ಟಿ ಹೊತ್ತಿರುವ ಮಂಗಳೂರಿನ ವ್ಯಕ್ತಿಯೇ ಬಲಿಯಾಗಿದ್ದಾರೆ. ನಕಲಿ ಆನ್ಲೈನ್ ಟ್ರೇಡಿಂಗ್ ಮೋಸದಲ್ಲಿ ಸಿಲುಕಿ 75 ವರ್ಷದ ಹಿರಿಯ ನಾಗರಿಕರೊಬ್ಬರು 18.81 ಲಕ್ಷ ರು. ಕಳಕೊಂಡಿರುವುದು ಬೆಳಕಿಗೆ ಬಂದಿದೆ.
ಕಳೆದ ಡಿಸೆಂಬರ್ನಲ್ಲಿ ಸಂತ್ರಸ್ತರು ಫೇಸ್ಬುಕ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಅವರ ರೀತಿಯಲ್ಲೇ ಭಾಷಣವಿರುವ ಆನ್ಲೈನ್ ಟ್ರೇಡಿಂಗ್ ಕುರಿತ ವಿಡಿಯೋವೊಂದನ್ನು ನೋಡಿದ್ದರು. ಇದನ್ನು ನಿಜವೆಂದು ನಂಬಿದ ಅವರು ವಿಡಿಯೋ ಕೆಳಗಿದ್ದ ಲಿಂಕ್ ಕ್ಲಿಕ್ ಮಾಡಿ ತಮ್ಮ ವಿವರಗಳನ್ನು ನೋಂದಾಯಿಸಿದ್ದರು. ಇದಾದ ಬೆನ್ನಲ್ಲೇ ‘ಮೀನಾಕ್ಷಿ’ ಎಂಬ ಹೆಸರಿನ ವ್ಯಕ್ತಿಯಿಂದ ಕರೆ ಬಂದಿದ್ದು, ಹೆಚ್ಚಿನ ಲಾಭದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಹಣ ಡಬಲ್ ಆಗುತ್ತೆ, ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹಣಕಾಸು ಸಚಿವರೇ ಹೇಳುತ್ತಿರುವ ಅಸಲಿ ರೀತಿಯಲ್ಲೇ ಇರುವ ವಿಡಿಯೋ ನಂಬಿ ವ್ಯಕ್ತಿ ತನ್ನ ನಿವೃತ್ತಿಯ ಹಣವನ್ನು ಹೂಡಿಕೆ ಮಾಡಿದ್ದರು.
ಆನಂತರ, ಅಕ್ಷರ ಗೌಡ ಎಂಬ ಹೆಸರಿನ ವ್ಯಕ್ತಿ ಆನಂದ ಉನ್ನಿಕೃಷ್ಣ ಅವರ ಅಸಿಸ್ಟೆಂಟ್ ಎಂದು ಪರಿಚಯಿಸಿಕೊಂಡು, ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವಾಟ್ಸಪ್ ಮೂಲಕ ಹೂಡಿಕೆಗೆ ಪ್ರೇರೇಪಿಸಿದ್ದ. ಆರೋಪಿಗಳ ಮಾತು ನಂಬಿದ ವೃದ್ಧ ವ್ಯಕ್ತಿ ಡಿಸೆಂಬರ್ 18ರಂದು ₹3 ಲಕ್ಷ, ಡಿಸೆಂಬರ್ 26ರಂದು ₹7 ಲಕ್ಷ, ಜನವರಿ 6ರಂದು ₹3 ಲಕ್ಷ ಹಾಗೂ ಜನವರಿ 12ರಂದು ₹5.60 ಲಕ್ಷ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು.
ಒಟ್ಟು ₹18,81,000 ಹಣವನ್ನು ಹೂಡಿಕೆ ಮಾಡಿಸಿಕೊಂಡ ಆರೋಪಿಗಳು ₹1 ಕೋಟಿ ಲಾಭ ನೀಡುವುದಾಗಿ ನಂಬಿಸಿದ್ದರು. ಆದರೆ ಯಾವುದೇ ಲಾಭ ನೀಡದೆ ವಂಚಿಸಿದ್ದು ವಂಚನೆ ತಿಳಿಯುತ್ತಲೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
09-08-26 04:47 pm
HK News Staffer
ಪಾಕ್ ಗೂಢಚಾರಿಣಿ ಮಹಿಳೆಯ ಹನಿಟ್ರ್ಯಾಪ್ ; ರಹಸ್ಯ ಮಾಹ...
09-08-26 04:07 pm
ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಶಾರ್ಪ್ ಶೂಟರ್ ರಾಜ...
09-08-26 03:34 pm
ಇನ್ಸ್ಟಾಗ್ರಾಂನಲ್ಲಿ ವರ್ಕ್ ಫ್ರಮ್ ಹೋಮ್ ಹೆಸರಲ್ಲಿ...
09-08-26 12:56 pm
ರೇಣುಕಾಸ್ವಾಮಿ ಗಂಭೀರವಾಗಿ ಗಾಯಗೊಂಡಿದ್ದರೂ ದರ್ಶನ್ ಹ...
09-08-26 12:03 pm