ಬ್ರೇಕಿಂಗ್ ನ್ಯೂಸ್
05-05-26 11:23 pm HK News Desk ಕ್ರೈಂ
ಮಂಗಳೂರು, ಮೇ 5: ಫೇಸ್ಬುಕ್, ಇನ್ಸ್ ಟಾ ಗ್ರಾಮ್ ರೀತಿಯ ಜಾಲತಾಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೆಸರಲ್ಲೇ ನಕಲಿ ಎಐ ವಿಡಿಯೋ ಬಳಸಿ ಜನರನ್ನು ಯಾಮಾರಿಸುವ ಯತ್ನ ರಾಜಾರೋಷ ನಡೆಯುತ್ತಿದೆ. ಈ ಮೋಸದ ಜಾಲಕ್ಕೀಗ ಬುದ್ಧಿವಂತರ ಜಿಲ್ಲೆಯೆಂದು ಹಣೆಪಟ್ಟಿ ಹೊತ್ತಿರುವ ಮಂಗಳೂರಿನ ವ್ಯಕ್ತಿಯೇ ಬಲಿಯಾಗಿದ್ದಾರೆ. ನಕಲಿ ಆನ್ಲೈನ್ ಟ್ರೇಡಿಂಗ್ ಮೋಸದಲ್ಲಿ ಸಿಲುಕಿ 75 ವರ್ಷದ ಹಿರಿಯ ನಾಗರಿಕರೊಬ್ಬರು 18.81 ಲಕ್ಷ ರು. ಕಳಕೊಂಡಿರುವುದು ಬೆಳಕಿಗೆ ಬಂದಿದೆ.
ಕಳೆದ ಡಿಸೆಂಬರ್ನಲ್ಲಿ ಸಂತ್ರಸ್ತರು ಫೇಸ್ಬುಕ್ನಲ್ಲಿ ಹಣಕಾಸು ಸಚಿವೆ ನಿರ್ಮಲಾ ಅವರ ರೀತಿಯಲ್ಲೇ ಭಾಷಣವಿರುವ ಆನ್ಲೈನ್ ಟ್ರೇಡಿಂಗ್ ಕುರಿತ ವಿಡಿಯೋವೊಂದನ್ನು ನೋಡಿದ್ದರು. ಇದನ್ನು ನಿಜವೆಂದು ನಂಬಿದ ಅವರು ವಿಡಿಯೋ ಕೆಳಗಿದ್ದ ಲಿಂಕ್ ಕ್ಲಿಕ್ ಮಾಡಿ ತಮ್ಮ ವಿವರಗಳನ್ನು ನೋಂದಾಯಿಸಿದ್ದರು. ಇದಾದ ಬೆನ್ನಲ್ಲೇ ‘ಮೀನಾಕ್ಷಿ’ ಎಂಬ ಹೆಸರಿನ ವ್ಯಕ್ತಿಯಿಂದ ಕರೆ ಬಂದಿದ್ದು, ಹೆಚ್ಚಿನ ಲಾಭದ ಆಸೆ ತೋರಿಸಿ ಹಂತ ಹಂತವಾಗಿ ಹಣ ಹೂಡಿಕೆ ಮಾಡುವಂತೆ ಪ್ರೇರೇಪಿಸಿದ್ದಾರೆ. ಹಣ ಡಬಲ್ ಆಗುತ್ತೆ, ಇದಕ್ಕೆ ಕೇಂದ್ರ ಸರ್ಕಾರವೇ ಗ್ಯಾರಂಟಿ ಎಂದು ಹಣಕಾಸು ಸಚಿವರೇ ಹೇಳುತ್ತಿರುವ ಅಸಲಿ ರೀತಿಯಲ್ಲೇ ಇರುವ ವಿಡಿಯೋ ನಂಬಿ ವ್ಯಕ್ತಿ ತನ್ನ ನಿವೃತ್ತಿಯ ಹಣವನ್ನು ಹೂಡಿಕೆ ಮಾಡಿದ್ದರು.
ಆನಂತರ, ಅಕ್ಷರ ಗೌಡ ಎಂಬ ಹೆಸರಿನ ವ್ಯಕ್ತಿ ಆನಂದ ಉನ್ನಿಕೃಷ್ಣ ಅವರ ಅಸಿಸ್ಟೆಂಟ್ ಎಂದು ಪರಿಚಯಿಸಿಕೊಂಡು, ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿ ವಾಟ್ಸಪ್ ಮೂಲಕ ಹೂಡಿಕೆಗೆ ಪ್ರೇರೇಪಿಸಿದ್ದ. ಆರೋಪಿಗಳ ಮಾತು ನಂಬಿದ ವೃದ್ಧ ವ್ಯಕ್ತಿ ಡಿಸೆಂಬರ್ 18ರಂದು ₹3 ಲಕ್ಷ, ಡಿಸೆಂಬರ್ 26ರಂದು ₹7 ಲಕ್ಷ, ಜನವರಿ 6ರಂದು ₹3 ಲಕ್ಷ ಹಾಗೂ ಜನವರಿ 12ರಂದು ₹5.60 ಲಕ್ಷ ಹಣವನ್ನು ವಿವಿಧ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಿದ್ದರು.
ಒಟ್ಟು ₹18,81,000 ಹಣವನ್ನು ಹೂಡಿಕೆ ಮಾಡಿಸಿಕೊಂಡ ಆರೋಪಿಗಳು ₹1 ಕೋಟಿ ಲಾಭ ನೀಡುವುದಾಗಿ ನಂಬಿಸಿದ್ದರು. ಆದರೆ ಯಾವುದೇ ಲಾಭ ನೀಡದೆ ವಂಚಿಸಿದ್ದು ವಂಚನೆ ತಿಳಿಯುತ್ತಲೇ ಸಂತ್ರಸ್ತರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
05-05-26 03:52 pm
HK News Desk
ಶೃಂಗೇರಿ ಕ್ಷೇತ್ರದ ಮರು ಮತ ಎಣಿಕೆ ; ಶಾಸಕ ಡಿಎನ್ ಜೀ...
05-05-26 03:37 pm
ಚಿಕ್ಕಮಗಳೂರು ; ಕೆರೆಯಲ್ಲಿ ಬಾತುಕೋಳಿ ಹಿಡಿಯಲು ಹೋಗಿ...
04-05-26 10:33 pm
ಶೃಂಗೇರಿ ; ದಿಢೀರ್ ಮಾಜಿಯಾದ ಕಾಂಗ್ರೆಸ್ ಶಾಸಕ ರಾಜೇಗ...
04-05-26 07:16 pm
ಮಂಜೇಶ್ವರದಲ್ಲಿ ಮತ ಧ್ರುವೀಕರಣ ; 29,252 ಮತಗಳಿಂದ ಮ...
04-05-26 06:27 pm
05-05-26 10:30 pm
HK News Staffer
ಎಲ್ಲರ ಲೆಕ್ಕ ತಲೆಕೆಳಗಾಗಿಸಿದ ದಳಪತಿ ; ಕರುಣಾನಿಧಿ ಹ...
05-05-26 10:27 pm
ಚುನಾವಣೆಯಲ್ಲಿ ನಾನು ಸೋತಿಲ್ಲ, ಯಾವುದೇ ಕಾರಣಕ್ಕೂ ರಾ...
05-05-26 08:34 pm
ಒಂದು ಕಾಲದ ಆಪ್ತನಿಂದಲೇ ಸಿಎಂ ಸ್ಟಾಲಿನ್ ಹೀನಾಯ ಸೋಲು...
04-05-26 09:51 pm
ತಿರುವನಂತಪುರಂ ಜಿಲ್ಲೆಯಲ್ಲೇ ಕಮಲ ಕಮಾಲ್ ; ಮೂರು ಕ್ಷ...
04-05-26 07:04 pm
05-05-26 11:01 pm
HK News Desk
ಕೋರ್ಟ್ ಜಟಾಪಟಿ ಬಳಿಕ ಉಳ್ಳಾಲ ದರ್ಗಾ ಆಡಳಿತ ಸಮಿತಿಗೆ...
02-05-26 11:05 pm
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
05-05-26 11:23 pm
HK News Desk
Minister Zameer Ahmed Khan, House robbery: ಸಚ...
05-05-26 05:22 pm
ಕ್ಯಾನ್ಸರ್ಗೆ ಬಲಿಯಾದ ವಿಜಿಲೆನ್ಸ್ ಎಸ್ಪಿ ಬಿ.ಎನ್...
03-05-26 09:19 pm
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm